ಬಾನ್ಸುರಿ ಸ್ವರಾಜ್ 
ದೇಶ

ದೆಹಲಿ ಬಿಜೆಪಿ ತಂಡಕ್ಕೆ ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ ಸೇರ್ಪಡೆ

ಬಿಜೆಪಿ ಹಿರಿಯ ನಾಯಕಿ, ದಿ. ಸುಷ್ಮಾ ಸ್ವರಾಜ್ ಅವರ ಪುತ್ರಿ ಬಾನ್ಸುರಿ ಸ್ವರಾಜ್ ಅವರ ಒಳಗೊಂಡಂತೆ ಹಲವು ಯುವಕರನ್ನು ಹೊಂದಿರುವ ದೆಹಲಿ ಭಾರತೀಯ ಜನತಾ ಪಕ್ಷದ ಹೊಸ ಪದಾಧಿಕಾರಿಗಳ ತಂಡವನ್ನು ಮಂಗಳವಾರ...

ನವದೆಹಲಿ: ಬಿಜೆಪಿ ಹಿರಿಯ ನಾಯಕಿ, ದಿ. ಸುಷ್ಮಾ ಸ್ವರಾಜ್ ಅವರ ಪುತ್ರಿ ಬಾನ್ಸುರಿ ಸ್ವರಾಜ್ ಅವರ ಒಳಗೊಂಡಂತೆ ಹಲವು ಯುವಕರನ್ನು ಹೊಂದಿರುವ ದೆಹಲಿ ಭಾರತೀಯ ಜನತಾ ಪಕ್ಷದ ಹೊಸ ಪದಾಧಿಕಾರಿಗಳ ತಂಡವನ್ನು ಮಂಗಳವಾರ ಪ್ರಕಟಿಸಲಾಗಿದೆ.

ಹರ್ಷ್ ಮಲ್ಹೋತ್ರಾ, ಯೋಗೇಂದ್ರ ಚಂದೋಲಿಯಾ ಮತ್ತು ಕಮಲ್ಜೀತ್ ಸೆಹ್ರಾವತ್ ಅವರು ಹೊಸದಾಗಿ ನೇಮಕಗೊಂಡ ಪ್ರಧಾನ ಕಾರ್ಯದರ್ಶಿಗಳಾಗಿದ್ದಾರೆ.

ಬಿಜೆಪಿ ದೆಹಲಿ ಘಟಕದ ಅಧ್ಯಕ್ಷ ವೀರೇಂದ್ರ ಸಚ್‌ದೇವ ಅವರು ಘೋಷಿಸಿರುವ ನೂತನ ತಂಡದಲ್ಲಿ ಬಾನ್ಸುರಿ ಸ್ವರಾಜ್ ಸೇರಿದಂತೆ ಹಲವು ಮಹಿಳಾ ಪದಾಧಿಕಾರಿಗಳೂ ಇದ್ದಾರೆ.

ಎಂಟು ಕಾರ್ಯದರ್ಶಿಗಳಲ್ಲಿ ಬಾನ್ಸುರಿ ಸ್ವರಾಜ್, ದೆಹಲಿ ಮಾಜಿ ಮುಖ್ಯಮಂತ್ರಿ ಮದನ್ ಲಾಲ್ ಖುರಾನಾ ಅವರ ಪುತ್ರ ಹರೀಶ್ ಖುರಾನಾ ಮತ್ತು ಇಂಪ್ರಿತ್ ಸಿಂಗ್ ಬಕ್ಷಿ ಅವರು ಸೇರಿದ್ದಾರೆ.

ಹೊಸದಾಗಿ ನೇಮಕಗೊಂಡ ಎಂಟು ಉಪಾಧ್ಯಕ್ಷರಲ್ಲಿ ವಿಷ್ಣು ಮಿತ್ತಲ್, ದಿನೇಶ್ ಪ್ರತಾಪ್ ಸಿಂಗ್, ಮಾಜಿ ಮೇಯರ್ ಲತಾ ಗುಪ್ತಾ ಮತ್ತು ಮಾಜಿ ಮಹಿಳಾ ಮೋರ್ಚಾ ಅಧ್ಯಕ್ಷೆ ಯೋಗಿತಾ ಸಿಂಗ್ ಇದ್ದಾರೆ.

ಲಕ್ಷ್ಮಿನಗರ ಶಾಸಕ ಅಭಯ್ ವರ್ಮಾ ಅವರು ದೆಹಲಿ ಬಿಜೆಪಿಯ ಮುಖ್ಯ ವಕ್ತಾರ ಹುದ್ದೆಯನ್ನು ಉಳಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ, ಯತ್ನಾಳ್ ಕಿಡಿ!

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

SCROLL FOR NEXT