ಸಾಂದರ್ಭಿಕ ಚಿತ್ರ 
ದೇಶ

ಆರೋಪಿಗಳ ಬಂಧಿಸಲು ತೆರಳಿದ್ದ ಬೆಂಗಳೂರಿನ ನಾಲ್ವರು ಪೊಲೀಸರ ವಿರುದ್ಧ ಲಂಚ ಪಡೆದ ಆರೋಪ; ಕೇರಳ ಪೊಲೀಸರ ವಶಕ್ಕೆ!

ವಂಚನೆ ಪ್ರಕರಣದ ಆರೋಪಿಗಳ ಬಂಧಿಸಲು ಕೇರಳಕ್ಕೆ ತೆರಳಿದ್ದ ಬೆಂಗಳೂರು ಪೊಲೀಸರೇ ಲಂಚ ಪಡೆದ ಆರೋಪದ ಮೇರೆಗೆ ಕೇರಳ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾರೆ ಎಂದು ತಿಳಿದುಬಂದಿದೆ.

ಕೊಚ್ಚಿ: ವಂಚನೆ ಪ್ರಕರಣದ ಆರೋಪಿಗಳ ಬಂಧಿಸಲು ಕೇರಳಕ್ಕೆ ತೆರಳಿದ್ದ ಬೆಂಗಳೂರು ಪೊಲೀಸರೇ ಲಂಚ ಪಡೆದ ಆರೋಪದ ಮೇರೆಗೆ ಕೇರಳ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾರೆ ಎಂದು ತಿಳಿದುಬಂದಿದೆ.

ಆಂಗ್ಲ ಪತ್ರಿಕೆಯೊಂದು ಈ ಬಗ್ಗೆ ವರದಿ ಮಾಡಿದ್ದು, ವಂಚನೆ ಪ್ರಕರಣದ ಆರೋಪಿಗಳಿಂದ ಲಂಚ ಪಡೆದ ಆರೋಪದಲ್ಲಿ ‍ಇನ್‌ಸ್ಪೆಕ್ಟರ್‌ ಸೇರಿ 4 ಮಂದಿ ಕರ್ನಾಟಕದ ಪೊಲೀಸ್‌ ಅಧಿಕಾರಿಗಳನ್ನು ಕೇರಳ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪರಿಶೀಲನೆ ಬಳಿಕ ವಶಕ್ಕೆ ಪಡೆದವರ ಮಾಹಿತಿ ನೀಡುವುದಾಗಿ ಪೊಲೀಸರು ಹೇಳಿದ್ದು, ಬೆಂಗಳೂರಿನ ವೈಟ್‌ಫೀಲ್ಡ್‌ನಿಂದ ಈ ಪೊಲೀಸರು ತೆರಳಿದ್ದರು ಎಂದು ಹೇಳಲಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ವರದಿಯಲ್ಲಿರುವಂತೆ, 'ಕರ್ನಾಟಕದಲ್ಲಿ ನಡೆದ ವಂಚನೆ ಪ್ರಕರಣದ ಸಂಬಂಧ ಆರೋಪಿಯನ್ನು ಬಂಧಿಸಲು ಕರ್ನಾಟಕ ಪೊಲೀಸರು ಆಗಸ್ಟ್ 1ರಂದು ಕೊಚ್ಚಿಗೆ ತೆರಳಿದ್ದರು. ಅಲ್ಲಿ ಅವರು ಇಬ್ಬರು ಆರೋಪಿಗಳಿಂದ 3.95 ಲಕ್ಷ ರೂ ಲಂಚ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ. ದೂರಿನನ್ವಯ ಕೊಚ್ಚಿಯ ಕಮಲಶ್ಶೇರಿ ಪೊಲೀಸರು ಕರ್ನಾಟಕದ 4 ಪೊಲೀಸ್ ಅಧಿಕಾರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಕೊಚ್ಚಿ ಪೊಲೀಸ್‌ ಉಪ ಆಯುಕ್ತ ಬೇಬಿ ಪಿವಿ, ‘ಪ್ರಕರಣ ಸಂಬಂಧ ನಾವು ಕರ್ನಾಟಕ ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದೇವೆ. ಅವರ ಗುರುತು ಹಾಗೂ ಕೊಚ್ಚಿಗೆ ಬಂದಿರುವ ಉದ್ದೇಶದ ಬಗ್ಗೆ ಮಾಹಿತಿ ಪಡೆಯುತ್ತಿದ್ದೇವೆ. ಮಾಹಿತಿ ಪಡೆದು ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ. ಈಗಾಗಲೇ ಪ್ರಕರಣ ದಾಖಲಾಗಿದೆ‘ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

'ಅಪ್ಪ-ಅಮ್ಮನ ಪ್ರಜ್ಞೆ ತಪ್ಪಿಸಿ ಕಟ್ಟಿಹಾಕಿ ಕಳ್ಳತನ': ಮನೆಗೆಲಸದವರ ಮೇಲೆ ಮಾಜಿ ಐಎಎಸ್ ಅಧಿಕಾರಿ Puja Khedkar ಆರೋಪ!

1st ODI: ಮಿಚೆಲ್ ಸ್ಫೋಟಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್

ಕೇರಳದಲ್ಲಿ ಕಾನೂನು ಸುವ್ಯವಸ್ಥೆಗೆ ಬೆದರಿಕೆ: SDPI, ಜಮಾತ್, ಸಂಘಟನೆಗಳ ಪಾತ್ರ ಪ್ರಶ್ನಿಸಿದ ಅಮಿತ್ ಶಾ!

SCROLL FOR NEXT