ಆರ್ ಎಸ್ಎಸ್ ಸ್ವಯಂ ಸೇವಕರು 
ದೇಶ

ಯುಪಿ RSS ಕಚೇರಿ ಗೇಟ್ ಬಳಿ ಮೂತ್ರ ವಿಸರ್ಜನೆ: 3 ಬಂಧನ

ಉತ್ತರ ಪ್ರದೇಶ ಆರ್ ಎಸ್ಎಸ್ ಕಚೇರಿ ಗೇಟ್ ಬಳಿ ವ್ಯಕ್ತಿಯೋರ್ವ ಮೂತ್ರ ವಿಸರ್ಜನೆ ಮಾಡಿದ್ದು ಈಗ ಆ ಪ್ರದೇಶದಲ್ಲಿ ಘರ್ಷಣೆಗೆ ಕಾರಣವಾಗಿದೆ. 

ಲಖನೌ: ಉತ್ತರ ಪ್ರದೇಶ ಆರ್ ಎಸ್ಎಸ್ ಕಚೇರಿ ಗೇಟ್ ಬಳಿ ವ್ಯಕ್ತಿಯೋರ್ವ ಮೂತ್ರ ವಿಸರ್ಜನೆ ಮಾಡಿದ್ದು ಈಗ ಆ ಪ್ರದೇಶದಲ್ಲಿ ಘರ್ಷಣೆಗೆ ಕಾರಣವಾಗಿದೆ. 

ಷಹಜಹಾನ್‌ಪುರದಲ್ಲಿ ಈ ಘಟನೆ ನಡೆದಿದ್ದು, ಆರ್ ಎಸ್ಎಸ್  ಕಾರ್ಯಕರ್ತರು, ಕಚೇರಿಯ ಗೇಟ್ ಬಳಿ ಮೂತ್ರ ವಿಸರ್ಜನೆ ಮಾಡಿದ್ದನ್ನು ವಿರೋಧಿಸಿದ್ದಕ್ಕೆ ಜನರ ತಂಡವೊಂದು ಕಲ್ಲು ತೂರಾಟ ನಡೆಸಿ ಗುಂಡಿನ ದಾಳಿ ನಡೆಸಿದೆ. 

ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿ ಹಾಗೂ ಆತನ ಇಬ್ಬರು ಸಹಚರರನ್ನು ಬಂಧಿಸಲಾಗಿದೆ. ಬುಧವಾರ ರಾತ್ರಿ ಈ ಘಟನೆ ನಡೆದಿದ್ದು, ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿಯೊಂದಿಗೆ ಇನ್ನೂ 3-4 ಜನರಿದ್ದರು ಎಂದು ಎಸ್ ಪಿ ಅಶೋಕ್ ಕುಮಾರ್ ತಿಳಿಸಿದ್ದಾರೆ.

ಕಾರ್ಯಕರ್ತರು ಈ ವಿಕೃತಿಯನ್ನು ವಿರೋಧಿಸಿದ ಬೆನ್ನಲ್ಲೇ ವಾಗ್ವಾದ ಆರಂಭವಾಗಿದ್ದು, ತಕ್ಷಣವೇ 50 ಮಂದಿ ಆ ಸ್ಥಳದಲ್ಲಿ ಜಮಾಯಿಸಿದರು ಎಂದು ಕುಮಾರ್ ಮಾಹಿತಿ ನೀಡಿದ್ದಾರೆ. 

ಆರ್ ಎಸ್ಎಸ್ ಪದಾಧಿಕಾರಿ ರವಿ ಮಿಶ್ರಾ ಈ ಘಟನೆಯ ಬಗ್ಗೆ ಮಾತನಾಡಿ ಆರೋಪಿಗಳ ಪೈಕಿ ಒಂದಷ್ಟು ಜನರು ಕಲ್ಲು ತೂರಾಟ ನಡೆಸಿದ್ದು, ಕಚೇರಿಯತ್ತ ಗುಂಡಿನ ದಾಳಿ ನಡೆಸಿದ್ದಾರೆ. ಇದರಲ್ಲಿ ಕಾರ್ಯಕರ್ತರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ಹೇಳಿದ್ದಾರೆ. 

ಘಟನೆಯ ನಂತರ ಗಾಯಗೊಂಡ ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನಂತರ ಬಿಡುಗಡೆ ಮಾಡಲಾಗಿದೆ ಎಂದು  ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

40-50 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದ್ದು,  ಹತ್ಯೆ ಯತ್ನ ಆರೋಪ ಹೊರಿಸಲಾಗಿದೆ ಎಂದು ಎಸ್ ಪಿ ಮಾಹಿತಿ ನೀಡಿದ್ದಾರೆ. ಪೊಲೀಸ್ ಅಧಿಕಾರಿಗಳು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT