ತನ್ಮನ್‌ಜೀತ್ ಸಿಂಗ್ ಧೇಸಿx 
ದೇಶ

ಅಮೃತಸರ ವಿಮಾನ ನಿಲ್ದಾಣದಲ್ಲಿ ಬ್ರಿಟನ್ ಸಿಖ್ ಸಂಸದನನ್ನು 2 ಗಂಟೆಗಳ ಕಾಲ ತಡೆದ ಸಿಬ್ಬಂದಿ

ಅಮೃತಸರದ ಗುರು ರಾಮದಾಸ್ ಜಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಬ್ರಿಟನ್ ಸಂಸದ ತನ್ಮನ್‌ಜೀತ್ ಸಿಂಗ್ ಧೇಸಿ ಅವರನ್ನು ವಲಸೆ ಅಧಿಕಾರಿಗಳು ಸುಮಾರು ಎರಡು ಗಂಟೆಗಳ ಕಾಲ ತಡೆದರು ಎಂದು ಪೊಲೀಸ್ ಮೂಲಗಳು...

ನವದೆಹಲಿ: ಅಮೃತಸರದ ಗುರು ರಾಮದಾಸ್ ಜಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಬ್ರಿಟನ್ ಸಂಸದ ತನ್ಮನ್‌ಜೀತ್ ಸಿಂಗ್ ಧೇಸಿ ಅವರನ್ನು ವಲಸೆ ಅಧಿಕಾರಿಗಳು ಸುಮಾರು ಎರಡು ಗಂಟೆಗಳ ಕಾಲ ತಡೆದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸಂಸದರನ್ನು ತಡೆದ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲದಿದ್ದರೂ, ಲೇಬರ್ ಪಕ್ಷದ ಸಂಸದ ಧೇಸಿ ಅವರು ತಮ್ಮ ವಿದೇಶಿ ಪೌರತ್ವ ಕಾರ್ಡ್ ಹೊಂದಿರಲಿಲ್ಲ ಎಂದು ಮೂಲಗಳು ತಿಳಿಸಿವೆ.

ಸಿಖ್ ಸಮಸ್ಯೆಗಳ ಬಗ್ಗೆ ಬಹಿರಂಗವಾಗಿ ಮಾತನಾಡುವ ಧೇಸಿ ಅವರನ್ನು ವಿಮಾನ ನಿಲ್ದಾಣದಿಂದ ಹೊರಹೋಗಲು ಅನುಮತಿಸುವ ಮೊದಲು ಎರಡು ಗಂಟೆಗಳ ಕಾಲ ಕಾಯುವಂತೆ ಮಾಡಲಾಯಿತು ಎಂದು ಅವರು ಹೇಳಿದ್ದಾರೆ.

ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಬರ್ಮಿಂಗ್‌ಹ್ಯಾಮ್‌ನಿಂದ ಅಮೃತಸರಕ್ಕೆ ಆಗಮಿಸಿದ ಧೇಸಿ ಅವರು ವಿಮಾನ ನಿಲ್ದಾಣದೊಳಗೆ ತಮಗಾದ ತೊಂದರೆ ಅಥವಾ ಸಮಸ್ಯೆಯ ಬಗ್ಗೆ ಯಾವುದೇ ದೂರು ನೀಡಿಲ್ಲ ಎಂದು ಪಂಜಾಬ್ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಧೇಸಿ ಅವರು ವೈಯಕ್ತಿಕ ಭೇಟಿಗಾಗಿ ಆಗಮಿಸಿದ್ದಾರೆ. ಹೀಗಾಗಿ ಅವರು ನಗರದಲ್ಲಿ ತಂಗಿದ್ದಾಗ ಪೊಲೀಸ್ ಭದ್ರತೆಯನ್ನು ನಿರಾಕರಿಸಿದ್ದಾರೆ ಎಂದು ವಿಮಾನ ನಿಲ್ದಾಣದಲ್ಲಿ ನಿಯೋಜನೆಗೊಂಡಿದ್ದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT