ಅಮಿತ್ ಶಾ-ಮಮತಾ ಬ್ಯಾನರ್ಜಿ 
ದೇಶ

ಅಮಿತ್ ಶಾ ಸರಿಯಾದ ಹೇಳಿಕೆ ನೀಡಿದ್ದಾರೆ; ಅಚ್ಚರಿ ಮೂಡಿಸಿದ ಮಮತಾ ಬ್ಯಾನರ್ಜಿ ಸಮರ್ಥನೆ!: ವಿಷಯ ಏನು ಅಂದ್ರೆ...

ವಿಪಕ್ಷಗಳ ಮೈತ್ರಿ ಕುರಿತ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯನ್ನು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸಮರ್ಥಿಸಿದ್ದಾರೆ. 

ನವದೆಹಲಿ: ವಿಪಕ್ಷಗಳ ಮೈತ್ರಿ ಕುರಿತ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯನ್ನು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸಮರ್ಥಿಸಿದ್ದಾರೆ. 

I.N.D.I.A ಮೈತ್ರಿಕೂಟದ ಕುರಿತು ಅಮಿತ್ ಶಾ ಹೇಳಿಕೆ ನೀಡಿದ್ದರು. ಈ ಮೈತ್ರಿಕೂಟದ ಭಾಗವಾಗಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಈಗ ಅಮಿತ್ ಶಾ ಹೇಳಿಕೆಯನ್ನು ಸಮರ್ಥಿಸಿದ್ದಾರೆ. 

ದೆಹಲಿ ಆಡಳಿತದ ವಿಷಯದಲ್ಲಿ ಕೇಂದ್ರ ಸರ್ಕಾರ ಮಂಡಿಸಿರುವ ಮಸೂದೆಯ ಕುರಿತು ವಿಪಕ್ಷಗಳ ಮೈತ್ರಿಕೂಟ ಆಮ್ ಆದ್ಮಿ ಪಕ್ಷವನ್ನು ಬೆಂಬಲಿಸದಂತೆ ಕರೆ ನೀಡಿದ್ದರು. 

ಈ ಹೇಳಿಕೆ ಬೆನ್ನಲ್ಲೇ ತಮ್ಮ ಮೈತ್ರಿಕೂಟ ದೇಶದ ಪರವಾಗಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಬಿಜೆಪಿ ವಿರುದ್ಧ ಹಿಂಸಾಚಾರವನ್ನು ಬೆಂಬಲಿಸುತ್ತಿರುವ ಆರೋಪ ಮಾಡಿರುವ ಮಮತಾ ಬ್ಯಾನರ್ಜಿ, ಲೋಕಸಭಾ ಚುನಾವಣೆಯಲ್ಲಿ ತಮ್ಮ ಮೈತ್ರಿಕೂಟ ಗೆದ್ದು ಸರ್ಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೈತ್ರಿಕೂಟದಲ್ಲಿರುವ ಮಾತ್ರಕ್ಕಾಗಿ "ದೆಹಲಿಯಲ್ಲಿನ ಭ್ರಷ್ಟಾಚಾರವನ್ನು ಬೆಂಬಲಿಸಬೇಡಿ", ಏಕೆಂದರೆ ಮೈತ್ರಿ ಇಲ್ಲದೆಯೂ ಪ್ರಧಾನಿ ಮೋದಿ ಬಹುಮತದೊಂದಿಗೆ ಚುನಾವಣೆಯನ್ನು ಗೆಲ್ಲಲಿದ್ದಾರೆ ಎಂದು ಅಮಿತ್ ಶಾ ಸಂಸತ್ ನಲ್ಲಿ ಹೇಳಿದ್ದರು. 

ಅಮಿತ್ ಶಾ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಮಮತಾ ಬ್ಯಾನರ್ಜಿ, ಅಮಿತ್ ಶಾ ಗೊತ್ತೋ ಗೊತ್ತಿಲ್ಲದೆಯೋ ಸರಿಯಾಗಿಯೇ ಹೇಳಿದ್ದಾರೆ. ಏಕೆಂದರೆ ದೆಹಲಿಯ ಗೆಲುವು ಅಂದರೆ ಅದು ಇಂಡಿಯಾ ಮೈತ್ರಿಕೂಟದ ಗೆಲುವೂ ಹೌದಾಗಿದೆ. 

ನಮ್ಮ ಮೈತ್ರಿ ಕೂಟ ಹೊಸದಾಗಿದೆ. ದೇಶಾದ್ಯಂತ ನಮ್ಮ ಅಸ್ತಿತ್ವವಿದೆ. ಇಂಡಿಯಾ ಸರ್ಕಾರ ದೆಹಲಿಯಲ್ಲಿ ಮೈತ್ರಿಕೂಟವನ್ನು ರಚಿಸಲಿದೆ. ದೆಹಲಿಯಲ್ಲಿ ನಮ್ಮ ಸಂಸತ್ ಇದ್ದು, ತಿಳಿದೋ ತಿಳಿಯದೆಯೋ ಅಮಿತ್ ಶಾ ಸರಿಯಾಗಿ ಹೇಳಿಕೆ ನೀಡಿದ್ದಾರೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

NCERT ಪಠ್ಯಪುಸ್ತಕ ವಿವಾದ: ನಾವು ನ್ಯಾಯಾಂಗವನ್ನು ಗೌರವಿಸುತ್ತೇವೆ; ಬಿಜೆಪಿ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT