ಜಗದೀಶ್ ಟೈಟ್ಲರ್ 
ದೇಶ

1984 ಸಿಖ್ ವಿರೋಧಿ ದಂಗೆ: ಕಾಂಗ್ರೆಸ್ ನಾಯಕ ಜಗದೀಶ್ ಟೈಟ್ಲರ್‌ಗೆ ನಿರೀಕ್ಷಣಾ ಜಾಮೀನು, ದೇಶ ತೊರೆಯದಂತೆ ಷರತ್ತು!

1984ರ ಸಿಖ್ ವಿರೋಧಿ ದಂಗೆಯ ಸಂದರ್ಭದಲ್ಲಿ ನಡೆದ ಪುಲ್ ಬಂಗಾಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಜಗದೀಶ್ ಟೈಟ್ಲರ್‌ಗೆ ದೆಹಲಿ ನ್ಯಾಯಾಲಯವು ಶುಕ್ರವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ನವದೆಹಲಿ: 1984ರ ಸಿಖ್ ವಿರೋಧಿ ದಂಗೆಯ ಸಂದರ್ಭದಲ್ಲಿ ನಡೆದ ಪುಲ್ ಬಂಗಾಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಜಗದೀಶ್ ಟೈಟ್ಲರ್‌ಗೆ ದೆಹಲಿ ನ್ಯಾಯಾಲಯವು ಶುಕ್ರವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ವಿಶೇಷ ನ್ಯಾಯಾಧೀಶ ವಿಕಾಸ್ ಧುಲ್ ಅವರು ಟೈಟ್ಲರ್‌ಗೆ ಕೆಲವು ಷರತ್ತುಗಳನ್ನು ವಿಧಿಸಿದೆ.

ಇದರೊಂದಿಗೆ ಅವರು ಅನುಮತಿಯಿಲ್ಲದೆ ದೇಶವನ್ನು ತೊರೆಯುವಂತಿಲ್ಲ. ಪುಲ್ ಬಂಗಾಶ್ ಗುರುದ್ವಾರ ಹಿಂಸಾಚಾರ ಪ್ರಕರಣದ ಆರೋಪಿ ಜಗದೀಶ್ ಟೈಟ್ಲರ್ ಅವರ ನಿರೀಕ್ಷಣಾ ಜಾಮೀನಿನ ತೀರ್ಪನ್ನು ಆಗಸ್ಟ್ 2ರಂದು ನ್ಯಾಯಾಲಯವು ಕಾಯ್ದಿರಿಸಿತ್ತು. ಇನ್ನು ವಿಚಾರಣೆ ವೇಳೆ ಅವರಿಗೆ ಜಾಮೀನು ನೀಡಿದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ ಎಂದು ತನಿಖಾ ಸಂಸ್ಥೆ ನ್ಯಾಯಾಲಯಕ್ಕೆ ತಿಳಿಸಿತ್ತು.

ಆಗಸ್ಟ್ 2ರಂದು ಜಗದೀಶ್ ಟೈಟ್ಲರ್ ಪರ ವಕೀಲರು ಟೈಟ್ಲರ್ ಯಾವುದೇ ತನಿಖಾ ಸಂಸ್ಥೆ ಅಥವಾ ಆಯೋಗದ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಲಿಲ್ಲ ಎಂದು ಹೇಳಿದರು. ಟೈಟ್ಲರ್ ವಿರುದ್ಧ ಅಂತಹ ಯಾವುದೇ ದೂರು ಬಂದಿಲ್ಲ. ಇದರಿಂದ ಕಕ್ಷಿದಾರನ ರಾಜಕೀಯ ಜೀವನವೇ ಹಾಳಾಗಿದೆ ಎಂದರು.

1984ರ ನವೆಂಬರ್ 1ರಂದು ಆಗಿನ ಪ್ರಧಾನಿ ಇಂದಿರಾ ಗಾಂಧಿಯವರ ಸಿಖ್ ಅಂಗರಕ್ಷಕರಿಂದ ಹತ್ಯೆಯಾದ ಒಂದು ದಿನದ ನಂತರ, ಮೂವರನ್ನು ಹತ್ಯೆ ಮಾಡಲಾಗಿತ್ತು. ಅಲ್ಲದೆ ಪುಲ್ ಬಂಗಾಶ್ ಪ್ರದೇಶದಲ್ಲಿ ಗುರುದ್ವಾರಕ್ಕೆ ಬೆಂಕಿ ಹಚ್ಚಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿನಿಮಾ ಟಿಕೆಟ್, ಟಿವಿ ಚಾನಲ್ ಗಳ ಮೇಲೆ ಶೇ.2 ರಷ್ಟು ಸೆಸ್ ವಿಧಿಸಲು ರಾಜ್ಯ ಸರ್ಕಾರ ಮುಂದು: ಇದರ ಪರಿಣಾಮ ಏನು...?

Israel 'must finish the job: ವಿಶ್ವಸಂಸ್ಥೆಯಲ್ಲಿ ನೆತನ್ಯಾಹು 'ಉದ್ಧಟತನದ ಭಾಷಣ'; ಅನೇಕ ರಾಷ್ಟ್ರಗಳ ಪ್ರತಿನಿಧಿಗಳು walk out!

'ಭಾರತ ಶತ್ರು ರಾಷ್ಟ್ರ.. Donald Trump ನೊಬೆಲ್ ಪ್ರಶಸ್ತಿಗೆ ಅರ್ಹ'; ಪರಮಾಣು ಯುದ್ಧದ ಉಲ್ಲೇಖ ಮಾಡಿದ ಪಾಕ್ ಪ್ರಧಾನಿ Shehbaz Sharif

ಅತ್ತ ವಿಶ್ವಸಂಸ್ಥೆಯಲ್ಲಿ Netanyahu ಭಾಷಣ, ಇತ್ತ Gazaದಲ್ಲಿ Israeli Army ಕಂಡು ಕೇಳರಿಯದ ಕ್ರಮ!

Asia Cup 2025: Abhishek Sharma, Tilak Varma ಭರ್ಜರಿ ಬ್ಯಾಟಿಂಗ್, Srilanka ಗೆ ಬೃಹತ್ ಗುರಿ ನೀಡಿದ ಭಾರತ

SCROLL FOR NEXT