ಧರ್ಮೇಂದ್ರ ಪ್ರಧಾನ್ 
ದೇಶ

ರಾಷ್ಟ್ರಪತಿಯನ್ನು ಮುಖ್ಯಸ್ಥರನ್ನಾಗಿಸುವ ಐಐಎಂ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ದೇಶದ ಎಲ್ಲಾ ಐಐಎಂಗಳಿಗೆ ರಾಷ್ಟ್ರಪತಿಗಳನ್ನು ಸಂದರ್ಶಕ ಮುಖ್ಯಸ್ಥರನ್ನಾಗಿ ನೇಮಕ ಮಾಡಲು ಅವಕಾಶ ಕಲ್ಪಿಸುವ ಐಐಎಂ ಮಸೂದೆ 2023 ಅನ್ನು ಲೋಕಸಭೆಯಲ್ಲಿ ಶುಕ್ರವಾರ ಅಂಗೀಕರಿಸಲಾಗಿದೆ.

ನವದೆಹಲಿ: ದೇಶದ ಎಲ್ಲಾ ಐಐಎಂಗಳಿಗೆ ರಾಷ್ಟ್ರಪತಿಗಳನ್ನು ಸಂದರ್ಶಕ ಮುಖ್ಯಸ್ಥರನ್ನಾಗಿ ನೇಮಕ ಮಾಡಲು ಅವಕಾಶ ಕಲ್ಪಿಸುವ ಐಐಎಂ ಮಸೂದೆ 2023 ಅನ್ನು ಲೋಕಸಭೆಯಲ್ಲಿ ಶುಕ್ರವಾರ ಅಂಗೀಕರಿಸಲಾಗಿದೆ.

ಸಂಪೂರ್ಣ ಸ್ವಾಯತ್ತ ಸಂಸ್ಥೆಗಳಾದ ಐಐಎಂಗಳ ಕಾರ್ಯನಿರ್ವಹಣೆಯಲ್ಲಿ ಸಂದರ್ಶಕ ಮುಖ್ಯಸ್ಥರಿಗೆ ಹೆಚ್ಚಿನ ಅಧಿಕಾರವನ್ನು ಈ ಮಸೂದೆ ನೀಡುತ್ತದೆ. ರಾಷ್ಟ್ರಪತಿಗಳು ಎಲ್ಲಾ ಐಐಎಂಗಳ ಸಂದರ್ಶಕರಾಗಿರುತ್ತಾರೆ ಮತ್ತು ಅವುಗಳ ಕಾರ್ಯನಿರ್ವಹಣೆಯನ್ನು ಪರಿಶೀಲಿಸುವ ಅಧಿಕಾರ ಹೊಂದಿರುತ್ತಾರೆ. ನಿರ್ದೇಶಕರನ್ನು ತೆಗೆದುಹಾಕುವ ಮತ್ತು ಆಯ್ಕೆ ಸಮಿತಿಗೆ ಸದಸ್ಯರನ್ನು ನಾಮನಿರ್ದೇಶನ ಮಾಡುವ ಅಧಿಕಾರ ಹೊಂದಿರುತ್ತಾರೆ.

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (ತಿದ್ದುಪಡಿ)ಮಸೂದೆ, 2023 ಅನ್ನು ಲೋಕಸಭೆಯಲ್ಲಿ ಮಂಡಿಸಿ ಮಾತನಾಡಿದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು, ಐಐಎಂಗಳಿಂದ ಶೈಕ್ಷಣಿಕ ಹೊಣೆಗಾರಿಕೆಯನ್ನು ಕಸಿದುಕೊಳ್ಳುವ ಯಾವುದೇ ಉದ್ದೇಶ ಸರ್ಕಾರ ಹೊಂದಿಲ್ಲ. ಆದರೆ ಕೇಂದ್ರ ಅವುಗಳ ನಿರ್ವಹಣಾ ಹೊಣೆಗಾರಿಕೆಯನ್ನು ಖಚಿತಪಡಿಸಿಕೊಳ್ಳುತ್ತದೆ ಎಂದರು.

ರಾಷ್ಟ್ರಪತಿಗಳು ಐಐಟಿಗಳು ಮತ್ತು ಎನ್‌ಐಟಿಗಳಿಗೆ ಸಂದರ್ಶಕರಾಗಿರುತ್ತಾರೆ. ಆದರೆ ಈ ಸಂಸ್ಥೆಗಳ ಶೈಕ್ಷಣಿಕ ಸ್ವಾಯತ್ತತೆಗೆ ಯಾವುದೇ ಧಕ್ಕೆಯಾಗುವುದಿಲ್ಲ ಎಂದು ಪ್ರಧಾನ್ ಹೇಳಿದರು.

ಬಳಿಕ ಪ್ರತಿಪಕ್ಷಗಳ ವಿರೋಧದ ನಡುವೆಯೇ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್(ತಿದ್ದುಪಡಿ) ಮಸೂದೆ, 2023 ಅನ್ನು ಇಂದು ಧ್ವನಿ ಮತದ ಮೂಲಕ ಕೆಳಮನೆಯಲ್ಲಿ ಅಂಗೀಕರಿಸಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT