ಸಾಂದರ್ಭಿಕ ಚಿತ್ರ 
ದೇಶ

ಮಧ್ಯ ಪ್ರದೇಶ: ಬುಡಕಟ್ಟು ವ್ಯಕ್ತಿಯ ಮೇಲೆ ಗುಂಡು ಹಾರಿಸಿದ ಬಿಜೆಪಿ ಶಾಸಕನ ಪುತ್ರ

ಮಧ್ಯ ಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ಬಿಜೆಪಿ ಶಾಸಕರೊಬ್ಬರ ಪುತ್ರ, ತನ್ನೊಂದಿಗೆ ವಾಗ್ವಾದ ನಡೆಸಿದ 34 ವರ್ಷದ ಬುಡಕಟ್ಟು ವ್ಯಕ್ತಿಯ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಸಿಂಗ್ರೌಲಿ: ಮಧ್ಯ ಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ಬಿಜೆಪಿ ಶಾಸಕರೊಬ್ಬರ ಪುತ್ರ, ತನ್ನೊಂದಿಗೆ ವಾಗ್ವಾದ ನಡೆಸಿದ 34 ವರ್ಷದ ಬುಡಕಟ್ಟು ವ್ಯಕ್ತಿಯ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಗುರುವಾರ ಸಂಜೆ 6 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಗುಂಡಿನ ದಾಳಿಯಲ್ಲಿ ಬುಡಕಟ್ಟು ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಘಟನೆಯ ನಂತರ ಬಿಜೆಪಿ ಶಾಸಕನ ಪುತ್ರ, 40 ವರ್ಷದ ವಿವೇಕಾನಂದ ವೈಶ್ಯ ಅವರ ವಿರುದ್ಧ ಪ್ರಕರಣ ದಾಖಲಿಸಿರುವುದಾಗಿ ಮೊರ್ಬಾ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಅಶೋಕ್ ಸಿಂಗ್ ಪರಿಹಾರ್ ಅವರು ಹೇಳಿದ್ದಾರೆ. 

ಆರೋಪಿ ವೈಶ್ಯ ಅವರು ಸಿಂಗ್ರೌಲಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ರಾಮ್ ಲಲ್ಲು ವೈಶ್ಯ ಅವರ ಪುತ್ರ ಎಂದು ಪೊಲೀಸರು ತಿಳಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ(IPC) ಸೆಕ್ಷನ್ 307 (ಕೊಲೆಗೆ ಯತ್ನ) ಮತ್ತು ಸೆಕ್ಷನ್ 25 (ಯಾವುದೇ ನಿಷೇಧಿತ ಶಸ್ತ್ರಾಸ್ತ್ರಗಳನ್ನು ಹೊಂದುವುದು ಅಥವಾ ಸಾಗಿಸುವುದು) ಮತ್ತು ಸೆಕ್ಷನ್ 27 (ಶಸ್ತ್ರಾಸ್ತ್ರ, ಮದ್ದುಗುಂಡುಗಳ ಬಳಕೆ) ಅಡಿ ವಿವೇಕಾನಂದ ವೈಶ್ಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪರಿಹಾರ್ ಅವರು ಹೇಳಿದ್ದಾರೆ.

ಪ್ರಾಥಮಿಕ ತನಿಖೆಯ ನಂತರ, ಶುಕ್ರವಾರದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಂಬಂಧಿತ ಸೆಕ್ಷನ್ ಗಳಡಿ ಕೇಸ್ ದಾಖಲಿಸಲಾಗಿದೆ.

ಗುರುವಾರದ ಘಟನೆಯ ಬಗ್ಗೆ ಮಾಹಿತಿ ನೀಡಿದ ಪೊಲೀಸರು, ಆರೋಪಿಯು ತನ್ನ ಕಾರಿನಲ್ಲಿ ಹೋಗುತ್ತಿದ್ದಾಗ ಜಿಲ್ಲಾ ಕೇಂದ್ರದಿಂದ ಸುಮಾರು 25 ಕಿಮೀ ದೂರದಲ್ಲಿರುವ ಬುಧಿ ಮಾಯಿ ಮಾತಾ ದೇವಸ್ಥಾನದ ಬಳಿ ಕಿರಿದಾದ ರಸ್ತೆಯಲ್ಲಿ ವ್ಯಕ್ತಿಗಳ ಗುಂಪಿನೊಂದಿಗೆ ಜಗಳವಾಡಿದ್ದಾರೆ. ಈ ವೇಳೆ ಅಲ್ಲಿಗೆ ಬಂದ ಸಂತ್ರಸ್ತ ಸೂರ್ಯ ಕುಮಾರ್ ಖೈರ್ವಾರ್ ಆ ಗುಂಪಿನೊಂದಿಗೆ ಸೇರಿಕೊಂಡರು ವೈಶ್ಯ ಅವರೊಂದಿಗೆ ವಾಗ್ವಾದಕ್ಕಿಳಿದಿದ್ದಾರೆ.

ಇದರಿಂದ ಕೋಪಗೊಂಡ ರಾಜಕಾರಣಿಯ ಪುತ್ರ, ಖೈರ್ವಾರ್ ಮೇಲೆ ಗುಂಡು ಹಾರಿಸಿದ್ದಾರೆ. ಗುಂಡೇಟಿನಿಂದ ಗಾಯಗೊಂಡ ಖೈರ್ವಾರ್ ಅವರನ್ನು ಜಿಲ್ಲಾ ಆಸ್ಪತ್ರೆಯ ಟ್ರಾಮಾ ವಾರ್ಡ್‌ಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದ್ದಾರೆ" ಎಂದು ಇನ್ಸ್‌ಪೆಕ್ಟರ್ ಪರಿಹಾರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT