ಕೋಲ್ಕತ್ತಾ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಟ್ರಕ್'ವೊಂದು ಡಿಕ್ಕಿ ಹೊಡೆದ ಪರಿಣಾಮ ಅಪ್ರಾಪ್ತ ಬಾಲಕನೊಬ್ಬ ಮೃತಪಟ್ಟಿದ್ದು, ಆತನ ತಂದೆ ತೀವ್ರವಾಗಿ ಗಾಯಗೊಂಡಿರುವ ಘಟನೆ ಕೋಲ್ಕತಾದ ಬೆಹಲಾ ಚೌರಸ್ತಾ ಪ್ರದೇಶದಲ್ಲಿ ಶುಕ್ರವಾರ ನಡೆದಿದೆ.
ಘಟನೆ ಸಂಭವಿಸುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ನೂರಾರು ಸಂಖ್ಯೆಯ ಜನರು ಸ್ಥಳೀಯ ವಾಹನಗಳಿಗೆ ಬೆಂಕಿ ಹಚ್ಚಿ, ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಧ್ಯಪ್ರವೇಶಿಸಿದ ಪೊಲೀಸರು ಹಾಗೂ ಆರ್'ಎಎಸ್ ಸಿಬ್ಬಂದಿಗಳು ಲಾಠಿ ಚಾರ್ಜ್ ಹಾಗೂ ಅಶ್ರುವಾಯು ಪ್ರಯೋಗಿಸಿ ಗುಂಪನ್ನು ಚದುರಿಸಿದರು.
ಇದನ್ನೂ ಓದಿ: ಪ್ರೇಯಸಿಗೆ ಹಲವು ಬಾರಿ ಇರಿದು ಅಟ್ಟಾಡಿಸಿಕೊಂಡು ಹೋಗಿ ನೀರಿನಲ್ಲಿ ಮುಳುಗಿಸಿ ಕೊಲೆಗೆ ಯತ್ನಿಸಿದ ಭಗ್ನ ಪ್ರೇಮಿ!
ಈ ನಡುವೆ ಅಪಘಾತದಲ್ಲಿ ಗಾಯಗೊಂಡ ಬಾಲಕನ ತಂದೆ ಸೌರಾನಿಲ್ ಸರ್ಕಾರ್ ಅವರನ್ನು ಎಸ್ಎಸ್'ಕೆಎಂ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.
ಸ್ಥಳೀಯರ ಪ್ರತಿಭಟನೆ ಪರಿಣಾಮ ಡೈಮಂಡ್ ಹಾರ್ಬರ್ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ಥಗೊಂಡಿದ್ದು ಎಂದು ಪೊಲೀಸರು ಹೇಳಿದ್ದಾರೆ.
ಘಟನೆ ಸಂಬಂಧ ಪ್ರಕಱಣ ದಾಖಲಿಸಿಕೊಳ್ಳಲಾಗಿದ್ದು, ಟ್ರಕ್ ಚಾಲಕ ಹಾಗೂ ವಾಹನವನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.