ಪ್ರತಿಭಟನಕಾರರ ಬೆಂಕಿ ಹಚ್ಚಿದ ಪರಿಣಾಮ ಸುಟ್ಟು ಕರಕಲಾಗಿರುವ ವಾಹನ. 
ದೇಶ

ಕೋಲ್ಕತಾ: ಟ್ರಕ್ ಡಿಕ್ಕಿ ಹೊಡೆದು ಬಾಲಕ ಸಾವು, ವಾಹನಕ್ಕೆ ಬೆಂಕಿ ಹಚ್ಚಿ ಸ್ಥಳೀಯರ ಆಕ್ರೋಶ

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಟ್ರಕ್'ವೊಂದು ಡಿಕ್ಕಿ ಹೊಡೆದ ಪರಿಣಾಮ ಅಪ್ರಾಪ್ತ ಬಾಲಕನೊಬ್ಬ ಮೃತಪಟ್ಟಿದ್ದು, ಆತನ ತಂದೆ ತೀವ್ರವಾಗಿ ಗಾಯಗೊಂಡಿರುವ ಘಟನೆ ಕೋಲ್ಕತಾದ ಬೆಹಲಾ ಚೌರಸ್ತಾ ಪ್ರದೇಶದಲ್ಲಿ ಶುಕ್ರವಾರ ನಡೆದಿದೆ.

ಕೋಲ್ಕತ್ತಾ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಟ್ರಕ್'ವೊಂದು ಡಿಕ್ಕಿ ಹೊಡೆದ ಪರಿಣಾಮ ಅಪ್ರಾಪ್ತ ಬಾಲಕನೊಬ್ಬ ಮೃತಪಟ್ಟಿದ್ದು, ಆತನ ತಂದೆ ತೀವ್ರವಾಗಿ ಗಾಯಗೊಂಡಿರುವ ಘಟನೆ ಕೋಲ್ಕತಾದ ಬೆಹಲಾ ಚೌರಸ್ತಾ ಪ್ರದೇಶದಲ್ಲಿ ಶುಕ್ರವಾರ ನಡೆದಿದೆ.

ಘಟನೆ ಸಂಭವಿಸುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ನೂರಾರು ಸಂಖ್ಯೆಯ ಜನರು ಸ್ಥಳೀಯ ವಾಹನಗಳಿಗೆ ಬೆಂಕಿ ಹಚ್ಚಿ, ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಧ್ಯಪ್ರವೇಶಿಸಿದ ಪೊಲೀಸರು ಹಾಗೂ ಆರ್'ಎಎಸ್ ಸಿಬ್ಬಂದಿಗಳು ಲಾಠಿ ಚಾರ್ಜ್ ಹಾಗೂ ಅಶ್ರುವಾಯು ಪ್ರಯೋಗಿಸಿ ಗುಂಪನ್ನು ಚದುರಿಸಿದರು.

ಈ ನಡುವೆ ಅಪಘಾತದಲ್ಲಿ ಗಾಯಗೊಂಡ ಬಾಲಕನ ತಂದೆ ಸೌರಾನಿಲ್ ಸರ್ಕಾರ್ ಅವರನ್ನು ಎಸ್ಎಸ್'ಕೆಎಂ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.

ಸ್ಥಳೀಯರ ಪ್ರತಿಭಟನೆ ಪರಿಣಾಮ ಡೈಮಂಡ್ ಹಾರ್ಬರ್ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ಥಗೊಂಡಿದ್ದು ಎಂದು ಪೊಲೀಸರು ಹೇಳಿದ್ದಾರೆ.

ಘಟನೆ ಸಂಬಂಧ ಪ್ರಕಱಣ ದಾಖಲಿಸಿಕೊಳ್ಳಲಾಗಿದ್ದು, ಟ್ರಕ್ ಚಾಲಕ ಹಾಗೂ ವಾಹನವನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅನಧಿಕೃತ ಮನೆಗಳ ತೆರವು: ಕೋಗಿಲು ಲೇಔಟ್​​ಗೆ ಡಿ.ಕೆ ಶಿವಕುಮಾರ್ ಭೇಟಿ; ಡಿಸಿಎಂ ಹೇಳಿದ್ದೇನು? Video

'ಅವನನ್ನು ಗಲ್ಲಿಗೇರಿಸುವವರೆಗೂ ಹೋರಾಟ': ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಿಸಿದ ಉನ್ನಾವೊ ಅತ್ಯಾಚಾರ ಸಂತ್ರಸ್ತೆ

ಭಾರತೀಯ ಸೇನೆಗೆ 79,000 ಕೋಟಿ ರೂ. ಮೌಲ್ಯದ 'ಆಧುನಿಕ ಶಸ್ತ್ರಾಸ್ತ್ರ' ಖರೀದಿಗೆ DAC ಅನುಮೋದನೆ!

ಬಾಂಗ್ಲಾ ಬಿಕ್ಕಟ್ಟು: '1971ರಲ್ಲೇ ವಶವಾಗಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ'; ಸಿಲಿಗುರಿ ಕಾರಿಡಾರ್ ಕುರಿತು Sadhguru ಮಾತು!

ಉಕ್ರೇನ್ - ರಷ್ಯಾ ಸಮರ ಕೊನೆಗೊಳಿಸಲು ಸಭೆ: ಟ್ರಂಪ್‌ಗೆ 50 ವರ್ಷಗಳ ಭದ್ರತಾ ಗ್ಯಾರಂಟಿ ಕೇಳಿದ ಝೆಲೆನ್ಸ್ಕಿ

SCROLL FOR NEXT