ಪ್ರತಿಭಟನಕಾರರ ಬೆಂಕಿ ಹಚ್ಚಿದ ಪರಿಣಾಮ ಸುಟ್ಟು ಕರಕಲಾಗಿರುವ ವಾಹನ. 
ದೇಶ

ಕೋಲ್ಕತಾ: ಟ್ರಕ್ ಡಿಕ್ಕಿ ಹೊಡೆದು ಬಾಲಕ ಸಾವು, ವಾಹನಕ್ಕೆ ಬೆಂಕಿ ಹಚ್ಚಿ ಸ್ಥಳೀಯರ ಆಕ್ರೋಶ

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಟ್ರಕ್'ವೊಂದು ಡಿಕ್ಕಿ ಹೊಡೆದ ಪರಿಣಾಮ ಅಪ್ರಾಪ್ತ ಬಾಲಕನೊಬ್ಬ ಮೃತಪಟ್ಟಿದ್ದು, ಆತನ ತಂದೆ ತೀವ್ರವಾಗಿ ಗಾಯಗೊಂಡಿರುವ ಘಟನೆ ಕೋಲ್ಕತಾದ ಬೆಹಲಾ ಚೌರಸ್ತಾ ಪ್ರದೇಶದಲ್ಲಿ ಶುಕ್ರವಾರ ನಡೆದಿದೆ.

ಕೋಲ್ಕತ್ತಾ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಟ್ರಕ್'ವೊಂದು ಡಿಕ್ಕಿ ಹೊಡೆದ ಪರಿಣಾಮ ಅಪ್ರಾಪ್ತ ಬಾಲಕನೊಬ್ಬ ಮೃತಪಟ್ಟಿದ್ದು, ಆತನ ತಂದೆ ತೀವ್ರವಾಗಿ ಗಾಯಗೊಂಡಿರುವ ಘಟನೆ ಕೋಲ್ಕತಾದ ಬೆಹಲಾ ಚೌರಸ್ತಾ ಪ್ರದೇಶದಲ್ಲಿ ಶುಕ್ರವಾರ ನಡೆದಿದೆ.

ಘಟನೆ ಸಂಭವಿಸುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ನೂರಾರು ಸಂಖ್ಯೆಯ ಜನರು ಸ್ಥಳೀಯ ವಾಹನಗಳಿಗೆ ಬೆಂಕಿ ಹಚ್ಚಿ, ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಧ್ಯಪ್ರವೇಶಿಸಿದ ಪೊಲೀಸರು ಹಾಗೂ ಆರ್'ಎಎಸ್ ಸಿಬ್ಬಂದಿಗಳು ಲಾಠಿ ಚಾರ್ಜ್ ಹಾಗೂ ಅಶ್ರುವಾಯು ಪ್ರಯೋಗಿಸಿ ಗುಂಪನ್ನು ಚದುರಿಸಿದರು.

ಈ ನಡುವೆ ಅಪಘಾತದಲ್ಲಿ ಗಾಯಗೊಂಡ ಬಾಲಕನ ತಂದೆ ಸೌರಾನಿಲ್ ಸರ್ಕಾರ್ ಅವರನ್ನು ಎಸ್ಎಸ್'ಕೆಎಂ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.

ಸ್ಥಳೀಯರ ಪ್ರತಿಭಟನೆ ಪರಿಣಾಮ ಡೈಮಂಡ್ ಹಾರ್ಬರ್ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ಥಗೊಂಡಿದ್ದು ಎಂದು ಪೊಲೀಸರು ಹೇಳಿದ್ದಾರೆ.

ಘಟನೆ ಸಂಬಂಧ ಪ್ರಕಱಣ ದಾಖಲಿಸಿಕೊಳ್ಳಲಾಗಿದ್ದು, ಟ್ರಕ್ ಚಾಲಕ ಹಾಗೂ ವಾಹನವನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್: ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ, ಮಾನವೀಯ ನೆರವು ಸಂಗ್ರಹಿಸಲು ಭಾರತಕ್ಕೆ ಬರಬೇಕಿದ್ದ ವಿಮಾನಕ್ಕೆ ಹಾನಿ!

ಸಿದ್ದರಾಮಯ್ಯ ಅಂದು ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು : ಶ್ರೀರಾಮುಲು

ಜಮೀರ್- ಮಲ್ಲಿಕಾರ್ಜುನ್ ಜಟಾಪಟಿ: ದಾವಣಗೆರೆ ದಕ್ಷಿಣ ಕ್ಷೇತ್ರ ಕಾಂಗ್ರೆಸ್ ಗೆ ಬಿಸಿ ತುಪ್ಪ; ಶಾಮನೂರು ಕುಟುಂಬದ ವಿರುದ್ಧ ಮುಸ್ಲಿಮರ ಕೋಪ!

ನೂರಾರು ಕೋಟಿಗಳ ಒಡೆಯ TVK Vijay ತಂದೆ-ತಾಯಿ, ಮಕ್ಕಳಿಗೂ ಸಾಲ ಕೊಟ್ಟಿದ್ದಾರಾ? ಅಫಿಡವಿಟ್ಟಿನಲ್ಲಿ ನಮೂದು

ಭಾರತದಲ್ಲಿ ಪುರುಷರಿಗಿಂತ ಹೆಚ್ಚಿನ ಮಹಿಳೆಯರಿಗೆ ಹೊಟ್ಟೆಯ ಬೊಜ್ಜಿನ ಸಮಸ್ಯೆ: ಅಧ್ಯಯನ ವರದಿ

SCROLL FOR NEXT