ನರೇಂದ್ರ ಮೋದಿ 
ದೇಶ

ವಿರೋಧ ಪಕ್ಷಗಳ 'INDIA' ಒಕ್ಕೂಟಕ್ಕೆ ಹೊಸ ನಾಮಕರಣ ಮಾಡಿದ ಪ್ರಧಾನಿ ಮೋದಿ: ಹೆಸರು ಏನು ಗೊತ್ತೇ?

ಇತ್ತೀಚೆಗೆ ವಿಪಕ್ಷಗಳ ಮೈತ್ರಿಕೂಟ ತಮ್ಮನ್ನು ಇಂಡಿಯಾ ಎಂದು ಕರೆದುಕೊಳ್ಳುವುದರ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಬಿಹಾರದ ಮಿತ್ರಪಕ್ಷಗಳನ್ನುಗುರುವಾರ ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧ ಪಕ್ಷದ ಮೈತ್ರಿಯನ್ನು ನಿಭಾಯಿಸಲು ಹೊಸ ತಂತ್ರದ ಕುರಿತು ಸಲಹೆ ನೀಡಿದ್ದಾರೆ.

ನವದೆಹಲಿ: ಇತ್ತೀಚೆಗೆ ವಿಪಕ್ಷಗಳ ಮೈತ್ರಿಕೂಟ ತಮ್ಮನ್ನು ಇಂಡಿಯಾ ಎಂದು ಕರೆದುಕೊಳ್ಳುವುದರ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ವಿಪಕ್ಷಗಳ ಮೈತ್ರಿಕೂಟವನ್ನು ಇಂಡಿಯಾ ಎಂದು ಕರೆಯಬೇಡಿ ಬದಲಾಗಿ ‘ಘಮಂಡಿಯಾ’ ಎಂದು ಕರೆಯಿರಿ ಎಂದು ಪ್ರಧಾನಿ ನರೇಂದ್ರ ಮೋದಿ ಛಾಟಿ ಬೀಸಿದ್ದಾರೆ.

ಬಿಹಾರದ ಮಿತ್ರಪಕ್ಷಗಳನ್ನುಗುರುವಾರ ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧ ಪಕ್ಷದ ಮೈತ್ರಿಯನ್ನು ನಿಭಾಯಿಸಲು ಹೊಸ ತಂತ್ರದ ಕುರಿತು ಸಲಹೆ ನೀಡಿದ್ದಾರೆ. ವಿಪಕ್ಷ ಸದಸ್ಯರನ್ನು ಇಂಡಿಯಾ(I.N.D.I.A) ಎಂದು ಕರೆಯದೆ "ಘಮಾಂಡಿಯಾ" ಎಂದು ಕರೆಯಬೇಕು ಎಂದು ಹೇಳಿದ್ದಾರೆ. ಹಿಂದಿ ಭಾಷೆಯ ಘಮಾಂಡಿಯಾ ಎಂದರೆ ಸೊಕ್ಕು- ಅಹಂಕಾರ ಎಂದರ್ಥ.

 ಇತ್ತೀಚಿನ ದಿನಗಳಲ್ಲಿ ವಿಪಕ್ಷಗಳು ತಮ್ಮ ಒಕ್ಕೂಟವನ್ನು ಇಂಡಿಯಾ ಎಂದು ಕರೆದುಕೊಳ್ಳುತ್ತಿರುವುದಕ್ಕೆ ಪದೇ ಪದೇ ಪ್ರಧಾನಿ ಮೋದಿ ಕಿಡಿಕಾರುತ್ತಲೇ ಇದ್ದಾರೆ. ಇಂಡಿಯಾ ಎಂದು ಕರೆದುಕೊಳ್ಳುವುದು ದೇಶಪ್ರೇಮದಿಂದಲ್ಲ ದೇಶವನ್ನು ದೋಚುವ ಉದ್ದೇಶದಿಂದ ಎಂದು ಮೋದಿ ವಾಗ್ದಾಳಿ ನಡೆಸಿದ್ದರು. ಸರ್ಕಾರದ ಯೋಜನೆಗಳನ್ನು ಎನ್‌ಡಿಎ ಸರ್ಕಾರದ ಯೋಜನೆಗಳು ಎಂದು ವಿವರಿಸಲು ಸಂಸದರಿಗೆ ಪ್ರಧಾನಿ ಸಲಹೆ ನೀಡಿದರು ಮತ್ತು ಎನ್‌ಡಿಎ ಮಾತ್ರ ಸ್ಥಿರ ಸರ್ಕಾರವನ್ನು ನೀಡುತ್ತದೆ ಎಂಬುದನ್ನು ಮನವರಿಕೆ ಮಾಡಿಕೊಡುವಂತೆ ಸೂಚಿಸಿದ್ದಾರೆ.

'ಇಂಡಿಯಾ' ಹೆಸರನ್ನು ಪದೇ ಪದೇ ಗುರಿಪಡಿಸಿದ ಪ್ರಧಾನಿ, ಈಸ್ಟ್ ಇಂಡಿಯಾ ಕಂಪನಿ ಮತ್ತು ಭಯೋತ್ಪಾದಕ ಸಂಘಟನೆಗಳ ಅವರ ಹೆಸರಿನಲ್ಲೂ "ಇಂಡಿಯಾ" ಇದೆ ಎಂದು ಹೇಳಿ ವ್ಯಂಗ್ಯವಾಡಿದ್ದರು.

ಕಳೆದ ತಿಂಗಳು ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ, 26 ವಿರೋಧ ಪಕ್ಷಗಳು ಮುಂದಿನ ವರ್ಷ ನಡೆಯಲಿರುವ ರಾಷ್ಟ್ರೀಯ ಚುನಾವಣೆಯಲ್ಲಿ ಇಂಡಿಯಾ INDIA ಅಥವಾ ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಒಕ್ಕೂಟ ಎಂಬ ಹೊಸ ಹೆಸರಿನಲ್ಲಿ ಪ್ರಧಾನಿ ಮೋದಿ ಮತ್ತು ಬಿಜೆಪಿಯನ್ನು ಎದುರಿಸಲು ನಿರ್ಧರಿಸಿದ್ದವು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್