ಸಾಂದರ್ಭಿಕ ಚಿತ್ರ 
ದೇಶ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ತಂದೆ-ಮಗ ಸೇರಿ ಮೂವರ ಹತ್ಯೆ, ಉಗ್ರರ ಅಟ್ಟಹಾಸ

ಈಶಾನ್ಯ ರಾಜ್ಯ ಮಣಿಪುರದಲ್ಲಿ ಮತ್ತೆ ಹೊಸ ಹಿಂಸಾಚಾರ ಆರಂಭವಾಗಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ನಿನ್ನೆ ಶುಕ್ರವಾರ ತಡರಾತ್ರಿ ತಂದೆ-ಮಗ ಸೇರಿದಂತೆ ಮೂವರನ್ನು ಉಗ್ರರು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂಫಾಲ್: ಈಶಾನ್ಯ ರಾಜ್ಯ ಮಣಿಪುರದಲ್ಲಿ ಮತ್ತೆ ಹೊಸ ಹಿಂಸಾಚಾರ ಆರಂಭವಾಗಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ನಿನ್ನೆ ಶುಕ್ರವಾರ ತಡರಾತ್ರಿ ತಂದೆ-ಮಗ ಸೇರಿದಂತೆ ಮೂವರನ್ನು ಉಗ್ರರು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಿಲ್ಲೆಯ ಕ್ವಾಕ್ಟಾದಲ್ಲಿ ನಿನ್ನೆ ರಾತ್ರಿ ಮೂವರು ಮಲಗಿದ್ದಾಗ ಗುಂಡೇಟಿನಿಂದ ಹೊಡೆದು ಕತ್ತಿಯಿಂದ ಕೊಚ್ಚಿ ಹತ್ಯೆಗೈದಿದ್ದಾರೆ ಎಂದು ಇಂದು ಬೆಳಗ್ಗೆ ಪೊಲೀಸರು ತಿಳಿಸಿದ್ದಾರೆ, ದುಷ್ಕರ್ಮಿಗಳು ಚುರಾಚಂದ್‌ಪುರದಿಂದ ಬಂದವರು ಎಂಬ ಮಾಹಿತಿ ಸಿಕ್ಕಿದೆ. 

ಕೊಲೆಯಾದ ಮೂವರು ಪರಿಹಾರ ಶಿಬಿರದಲ್ಲಿ ಇರುತ್ತಿದ್ದರು. ಜಿಲ್ಲೆ ಮತ್ತು ಇಡೀ ರಾಜ್ಯದಲ್ಲಿ ಪರಿಸ್ಥಿತಿ ಸ್ವಲ್ಪ ಶಾಂತವಾಗಿದೆ ಎಂದು ತಿಳಿದ ನಂತರ ನಿನ್ನೆ ಕ್ವಾಕ್ಟಾದಲ್ಲಿನ ತಮ್ಮ ನಿವಾಸಗಳಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ಘಟನೆಯ ನಂತರ ಕ್ವಾಕ್ಟಾದಲ್ಲಿ ಪರಿಸ್ಥಿತಿ ಬಿಗಡಾಯಿಸಿದ್ದು, ಉದ್ರಿಕ್ತ ಗುಂಪೊಂದು ಚುರಾಚಂದ್‌ಪುರದ ಕಡೆಗೆ ಹೋಗಲು ಬಯಸಿತು ಆದರೆ ಭದ್ರತಾ ಸಿಬ್ಬಂದಿ ಅವರನ್ನು ತಡೆದರು ಎಂದು ಪೊಲೀಸರು ತಿಳಿಸಿದ್ದಾರೆ.

ಫೌಗಕ್ಚಾವೊ ಮತ್ತು ಕ್ವಾಕ್ಟಾದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ರಾಜ್ಯ ಪಡೆಗಳು ಮತ್ತು ಉಗ್ರಗಾಮಿಗಳ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಹೇಳಿದರು. 

ಆಗಸ್ಟ್ 4 ರಂದು, ಮಣಿಪುರ ಪೊಲೀಸರು ಜಂಟಿ ಭದ್ರತಾ ಪಡೆ ಕೌಟ್ರುಕ್ ಬೆಟ್ಟದ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ಏಳು ಅಕ್ರಮ ಬಂಕರ್‌ಗಳನ್ನು ನಾಶಪಡಿಸಿದ್ದಾರೆ ಎಂದು ಹೇಳಿದರು. ಮಣಿಪುರದ 27 ವಿಧಾನಸಭಾ ಕ್ಷೇತ್ರಗಳ ಸಮನ್ವಯ ಸಮಿತಿಯು ಇಂದು ಕರೆದಿರುವ 24 ಗಂಟೆಗಳ ಸಾರ್ವತ್ರಿಕ ಮುಷ್ಕರವು ಇಂಫಾಲ್ ಕಣಿವೆಯಲ್ಲಿ ಸಾಮಾನ್ಯ ಜೀವನವನ್ನು ಸ್ಥಗಿತಗೊಳಿಸಿದೆ. ಬಹುತೇಕ ಎಲ್ಲಾ ಪ್ರದೇಶಗಳಲ್ಲಿ ಮಾರುಕಟ್ಟೆಗಳು ಮತ್ತು ವ್ಯಾಪಾರ ಸಂಸ್ಥೆಗಳು ಮುಚ್ಚಲ್ಪಟ್ಟಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT