ಜ್ಞಾನವಾಪಿ ಮಸೀದಿ 
ದೇಶ

ಜ್ಞಾನವಾಪಿ ಆವರಣದಲ್ಲಿ ಸಮೀಕ್ಷೆ ನಡೆಸಲು ASIಗೆ ನಾಲ್ಕು ವಾರಗಳ ಕಾಲಾವಕಾಶ ನೀಡಿದ ವಾರಣಾಸಿ ಕೋರ್ಟ್!

ವಾರಣಾಸಿ ಜಿಲ್ಲಾ ನ್ಯಾಯಾಲಯವು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ(ಎಎಸ್‌ಐ) ತನ್ನ ಸಮೀಕ್ಷೆ ಮತ್ತು ವೈಜ್ಞಾನಿಕ ತನಿಖೆಯನ್ನು ಪೂರ್ಣಗೊಳಿಸಲು, ಜ್ಞಾನವಾಪಿ ಆವರಣದ ಸಮೀಕ್ಷೆಯ ವರದಿಯನ್ನು ಸಲ್ಲಿಸಲು ನಾಲ್ಕು ವಾರಗಳ ಕಾಲಾವಕಾಶವನ್ನು ನೀಡಿದೆ.

ಲಖನೌ: ವಾರಣಾಸಿ ಜಿಲ್ಲಾ ನ್ಯಾಯಾಲಯವು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ(ಎಎಸ್‌ಐ) ತನ್ನ ಸಮೀಕ್ಷೆ ಮತ್ತು ವೈಜ್ಞಾನಿಕ ತನಿಖೆಯನ್ನು ಪೂರ್ಣಗೊಳಿಸಲು, ಜ್ಞಾನವಾಪಿ ಆವರಣದ ಸಮೀಕ್ಷೆಯ ವರದಿಯನ್ನು ಸಲ್ಲಿಸಲು ನಾಲ್ಕು ವಾರಗಳ ಕಾಲಾವಕಾಶವನ್ನು ನೀಡಿದೆ.

ಜಿಲ್ಲಾ ನ್ಯಾಯಾಧೀಶ ಡಾ.ಎ.ಕೆ.ವಿಶ್ವೇಶ ಅವರು ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 2ಕ್ಕೆ ಮುಂದೂಡಿದರು.

ಮೂಲಗಳ ಪ್ರಕಾರ, ಸ್ಥಾಯಿ ಸರ್ಕಾರಿ ವಕೀಲ ಅಮಿತ್ ಶ್ರೀವಾಸ್ತವ ಅವರು ನಿನ್ನೆ ಮಸೀದಿ ಆವರಣದಲ್ಲಿ ಸಮೀಕ್ಷೆ ಪ್ರಾರಂಭವಾದ ದಿನವಾದ ವಾರಣಾಸಿ ಜಿಲ್ಲಾ ನ್ಯಾಯಾಲಯದಿಂದ ನಾಲ್ಕು ವಾರಗಳ ಕಾಲಾವಕಾಶವನ್ನು ಕೋರಿ ASI ಪರವಾಗಿ ಅರ್ಜಿ ಸಲ್ಲಿಸಿದ್ದರು.

ಜಿಲ್ಲಾ ಕೋರ್ಟ್ ಆದೇಶವನ್ನು ಕಾಯ್ದಿರಿಸಿತ್ತು. ಇಂದು ನಾಲ್ಕು ವಾರಗಳಲ್ಲಿ ತನ್ನ ಸಮೀಕ್ಷೆಯನ್ನು ಪೂರ್ಣಗೊಳಿಸಲು ಮತ್ತು ಸೆಪ್ಟೆಂಬರ್ 2 ರೊಳಗೆ ಅದರ ವರದಿಯನ್ನು ಸಲ್ಲಿಸಲು ಸಂಸ್ಥೆಗೆ ಅವಕಾಶ ಮಾಡಿಕೊಟ್ಟಿದೆ. 

ಜಿಲ್ಲಾ ನ್ಯಾಯಾಧೀಶ ವಿಶ್ವೇಶ ಅವರು ಜುಲೈ 21ರಂದು ಎಎಸ್‌ಐನಿಂದ ವೈಜ್ಞಾನಿಕ ಸಮೀಕ್ಷೆ ನಡೆಸುವಂತೆ ಆದೇಶಿಸಿ ಆಗಸ್ಟ್ 4 ರೊಳಗೆ ವರದಿ ಸಲ್ಲಿಸುವಂತೆ ಏಜೆನ್ಸಿಗೆ ಸೂಚಿಸಿದ್ದರು.

ಜುಲೈ 24ರಂದು ಸಮೀಕ್ಷೆ ಪ್ರಾರಂಭವಾಗುತ್ತಿದ್ದಂತೆ, ಭಾರತದ ಸರ್ವೋಚ್ಚ ನ್ಯಾಯಾಲಯವು ಜುಲೈ 26ರವರೆಗೆ ತಡೆ ನೀಡಿತು. ಆದೇಶದ ವಿರುದ್ಧ ಅಲಹಾಬಾದ್ ಹೈಕೋರ್ಟ್ ಅನ್ನು ಸಂಪರ್ಕಿಸಲು ಅಂಜುಮನ್ ಇಂಟೆಝಾಮಿಯಾ ಮಸಾಜಿದ್ ಗೆ ನಿರ್ದೇಶಿಸಿತು. ಹೀಗಾಗಿ ಸಮೀಕ್ಷೆ ಕಾರ್ಯಗಳನ್ನು ಸ್ಥಗಿತಗೊಳಿಸಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT