ಮಣಿಪುರದ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತಾ ಸಿಬ್ಬಂದಿ. 
ದೇಶ

ಇಲ್ಲಿಯವರೆಗೆ 1,195 ಲೂಟಿ ಮಾಡಿದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ: ಮಣಿಪುರ ಪೊಲೀಸರು

ರಾಜ್ಯದ ವಿವಿಧ ಭಾಗಗಳಿಂದ ಇದುವರೆಗೆ 1,195 ಲೂಟಿ ಮಾಡಿದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಣಿಪುರ ಪೊಲೀಸರು ತಿಳಿಸಿದ್ದಾರೆ.

ಇಂಫಾಲ: ರಾಜ್ಯದ ವಿವಿಧ ಭಾಗಗಳಿಂದ ಇದುವರೆಗೆ 1,195 ಲೂಟಿ ಮಾಡಿದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಣಿಪುರ ಪೊಲೀಸರು ತಿಳಿಸಿದ್ದಾರೆ.

ಕಣಿವೆ ಜಿಲ್ಲೆಗಳಿಂದ 1,057 ಶಸ್ತ್ರಾಸ್ತ್ರಗಳು ಮತ್ತು ಗುಡ್ಡಗಾಡು ಜಿಲ್ಲೆಗಳಿಂದ 138 ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ, ಸಾವಿರಾರು ಮದ್ದುಗುಂಡುಗಳನ್ನು ಸಹ ವಶಪಡಿಸಿಕೊಳ್ಳಲಾಗಿದ್ದು, ಕಣಿವೆ ಜಿಲ್ಲೆಗಳಿಂದಲೇ ಅಧಿಕ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಲೂಟಿಯಾದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲು ಭದ್ರತಾ ಪಡೆಗಳು ಗುಡ್ಡಗಾಡು ಮತ್ತು ಕಣಿವೆ ಪ್ರದೇಶಗಳಲ್ಲಿ ನಿರಂತರವಾಗಿ ದಾಳಿ ನಡೆಸುತ್ತಿವೆ ಎಂದು ಶನಿವಾರ ಸಂಜೆ ಹೇಳಿಕೆಯಲ್ಲಿ ತಿಳಿಸಿದೆ.

ಭದ್ರತಾ ಪಡೆಗಳಿಂದ ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಮಹಾನಿರ್ದೇಶಕ ರಾಜೀವ್ ಸಿಂಗ್ ಹೇಳಿದ್ದಾರೆ.

ಮೇ 3ರಂದು ಮಣಿಪುರದಲ್ಲಿ ಜನಾಂಗೀಯ ಘರ್ಷಣೆಗಳು ಪ್ರಾರಂಭವಾಗಿದ್ದು, ಕಳೆದ ಮೂರು ತಿಂಗಳಿನಿಂದ ನಡೆಯುತ್ತಿರುವ ಹಿಂಸಾಚಾರದಲ್ಲಿ ಈವರೆಗೆ 160 ಮಂದಿ ಪ್ರಾಣಕಳೆದುಕೊಂಡಿದ್ದಾರೆ.

ಮಣಿಪುರದ ಜನಸಂಖ್ಯೆಯ ಸುಮಾರು ಶೇ 53 ರಷ್ಟಿರುವ ಮೇಟಿ ಸಮುದಾಯಗಳು ಇಂಫಾಲ್ ಕಣಿವೆಯಲ್ಲಿ ವಾಸಿಸುತ್ತಿದ್ದಾರೆ. ಆದರೆ, ಬುಡಕಟ್ಟು ಜನಾಂಗದವರಾದ ನಾಗಾಗಳು ಮತ್ತು ಕುಕಿ ಸಮುದಾಯ ಶೇ 40 ರಷ್ಟಿದ್ದು, ಅವರಲ್ಲಿ ಹೆಚ್ಚಿನವರು ಗುಡ್ಡಗಾಡು ಜಿಲ್ಲೆಗಳಲ್ಲಿ ವಾಸಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT