ಡಿಜಿಟಲ್‌ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಮಸೂದೆ 
ದೇಶ

ಡೇಟಾ ಸಂರಕ್ಷಣಾ ಮಸೂದೆಯಿಂದ ಪತ್ರಿಕಾ ಸ್ವಾತಂತ್ರ್ಯದ ಮೇಲೆ ಪ್ರತಿಕೂಲ ಪರಿಣಾಮ: ಭಾರತೀಯ ಸಂಪಾದಕರ ಕೂಟ

ಕೇಂದ್ರ ಸರ್ಕಾರದ ಪ್ರಸ್ತಾವಿತ ಡಿಜಿಟಲ್‌ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಮಸೂದೆ ಹಾಗೂ ನಿಯತಕಾಲಿಕಗಳ ಮುದ್ರಣ ಹಾಗೂ ನೋಂದಣಿ ಮಸೂದೆಯು ಮಾಧ್ಯಮಗಳ ಸ್ವಾತಂತ್ರ್ಯದ ಮೇಲೆ ಗಂಭೀರ ಪರಿಣಾಮ ಬೀರಲಿವೆ ಎಂದು ಭಾರತೀಯ ಸಂಪಾದಕರ ಕೂಟ ಭಾನುವಾರ ಆತಂಕ ವ್ಯಕ್ತಪಡಿಸಿದೆ.

ನವದೆಹಲಿ: ಕೇಂದ್ರ ಸರ್ಕಾರದ ಪ್ರಸ್ತಾವಿತ ಡಿಜಿಟಲ್‌ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಮಸೂದೆ ಹಾಗೂ ನಿಯತಕಾಲಿಕಗಳ ಮುದ್ರಣ ಹಾಗೂ ನೋಂದಣಿ ಮಸೂದೆಯು ಮಾಧ್ಯಮಗಳ ಸ್ವಾತಂತ್ರ್ಯದ ಮೇಲೆ ಗಂಭೀರ ಪರಿಣಾಮ ಬೀರಲಿವೆ ಎಂದು ಭಾರತೀಯ ಸಂಪಾದಕರ ಕೂಟ ಭಾನುವಾರ ಆತಂಕ ವ್ಯಕ್ತಪಡಿಸಿದೆ.

ಪತ್ರಕರ್ತರು ಮತ್ತು ಅವರ ಮೂಲಗಳನ್ನು ಒಳಗೊಂಡಂತೆ ನಾಗರಿಕರ ಕಣ್ಗಾವಲುಗಾಗಿ ಡಿಪಿಡಿಪಿ ಮಸೂದೆಯು ಶಕ್ತಗೊಳಿಸುವ ಚೌಕಟ್ಟನ್ನು ರಚಿಸುತ್ತದೆ ಎಂದು ಸಂಪಾದಕರ ಕೂಟ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಈ ಎರಡೂ ಮಸೂದೆಗಳು ಮಾಧ್ಯಮ ಸಂಸ್ಥೆಗಳ ಕಾರ್ಯ ನಿರ್ವಹಣೆಯನ್ನು ನಿರ್ಬಂಧಿಸುತ್ತವೆ. ಸಂಸ್ಥೆಗಳ ಮೇಲೆ ಸೆನ್ಸಾರ್‌ಶಿಪ್‌ನ ಹಿಡಿತ ಹಾಗೂ ಅನಿಯಂತ್ರಿತ ತಪಾಸಣೆಗೆ ಒತ್ತು ನೀಡುತ್ತವೆ. ಹಾಗಾಗಿ, ಕೂಡಲೇ ಲೋಕಸಭೆಯ ಸ್ಪೀಕರ್‌ ಹಾಗೂ ರಾಜ್ಯಸಭಾ ಸಭಾಪತಿ ಅವರು, ಈ ಮಸೂದೆಗಳನ್ನು ಸಂಸದೀಯ ಸಮಿತಿಯ ಮರುಪರಿಶೀಲನೆಗಾಗಿ ವಾಪಸ್‌ ಕಳುಹಿಸಬೇಕು ಎಂದು ಕೂಟವು ಒತ್ತಾಯಿಸಿದೆ. ಪ್ರಧಾನಿ ನರೇಂದ್ರ ಮೋದಿ, ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್, ಐಟಿ ಸಚಿವ ಅಶ್ವಿನಿ ವೈಷ್ಣವ್ ಮತ್ತು ಸಂಸತ್ತಿನಲ್ಲಿ ರಾಜಕೀಯ ಪಕ್ಷಗಳ ನಾಯಕರಿಗೆ ಮಸೂದೆಯ ಬಗ್ಗೆ ತನ್ನ ಕಳವಳದ ಬಗ್ಗೆಯೂ ಅದು ಬರೆದಿದೆ.

ದತ್ತಾಂಶ ಸಂರಕ್ಷಣಾ ಮಸೂದೆಯನ್ನು ಸಂಸತ್‌ನ ಕೆಳಮನೆಯಲ್ಲಿ ಸೋಮವಾರ ಮಂಡಿಸುವ ಸಾಧ್ಯತೆ ಇದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ