ದೇಶ

ಉತ್ತರ ಪ್ರದೇಶ: ಇಬ್ಬರು ಬಾಲಕರಿಗೆ ಮೂತ್ರ ಕುಡಿಸಿ, ಗುದದ್ವಾರಕ್ಕೆ ಮೆಣಸಿಕಾಯಿ ತುರುಕಿ ವಿಕೃತಿ

Srinivas Rao BV

ಲಖನೌ: ಇಬ್ಬರು ಅಪ್ರಾಪ್ತ ಬಾಲಕರಿಗೆ ಮೂತ್ರ ಕುಡಿಸಿ ಗುದದ್ವಾರದಲ್ಲಿ ಹಸಿ ಮೆಣಸಿನಕಾಯಿ ತುರುಕಿ, ಪತ್ತೆ ಮಾಡಲು ಸಾಧ್ಯವಾಗದಂತಹ ಚುಚ್ಚು ಮದ್ದನ್ನು ನೀಡಿರುವ ಘಟನೆ ಉತ್ತರ ಪ್ರದೇಶದ ಸಿದ್ಧಾರ್ಥನಗರ ಜಿಲ್ಲೆಯಲ್ಲಿ ವರದಿಯಾಗಿದೆ. 

10-15 ವರ್ಷದ ಇಬ್ಬರು ಬಾಲಕರ ವಿರುದ್ಧ ಕಳ್ಳತನದ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ರೀತಿ ಅವರನ್ನು ಹಿಂಸಿಸಲಾಗಿದೆ. 

ಮೂತ್ರ ಕುಡಿಯುವಂತೆ, ಹಸಿರು ಮೆಣಸಿನಕಾಯಿ ತಿನ್ನುವಂತೆ ಒತ್ತಾಯಿಸುತ್ತಿರುವ ವೀಡಿಯೋ ವೈರಲ್ ಆಗತೊಡಗಿದ್ದು, ಬಾಲಕರಿಗೆ ಬೆದರಿಕೆ ಹಾಕುತ್ತಿರುವುದು ವೀಡಿಯೋದಲ್ಲಿ ದಾಖಲಾಗಿದೆ. 

ಹಣ ಕಳ್ಳತನ ಮಾಡಿರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಬಾಲಕರನ್ನು ಕಟ್ಟಿ ಹಾಕಿ ಈ ರೀತಿ ಹಿಂಸಿಸಲಾಗಿದೆ. ಆ.04 ರಂದು  ಈ ವೀಡಿಯೋವನ್ನು ಚಿತ್ರೀಕರಿಸಲಾಗಿದ್ದು, ಜಿಲ್ಲೆಯ ಪತ್ರಾ ಬಜಾರ್ ಪೊಲೀಸ್ ಠಾಣೆಯ ಕೊಂಕಟಿ ಚೌರಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

SCROLL FOR NEXT