ನುಹ್ ಜಿಲ್ಲೆಯಲ್ಲಿ ಹಿಂಸಾಚಾರ 
ದೇಶ

ಹರಿಯಾಣದ ನುಹ್‌ನಲ್ಲಿ ಹಿಂಸಾಚಾರ: ಆಗಸ್ಟ್ 8 ರವರೆಗೆ ಇಂಟರ್ನೆಟ್ ಸೇವೆ ಸ್ಥಗಿತ ಮುಂದುವರಿಕೆ

ಹರಿಯಾಣದ ನುಹ್ ಜಿಲ್ಲೆಯಲ್ಲಿ ಆಗಸ್ಟ್ 8 ರವರೆಗೆ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಹರಿಯಾಣ ಸರ್ಕಾರ ಭಾನುವಾರ ಪ್ರಕಟಿಸಿದೆ. ಹರಿಯಾಣ ಗೃಹ ಕಾರ್ಯದರ್ಶಿ ಹೊರಡಿಸಿದ ಆದೇಶದಲ್ಲಿ, ಜಿಲ್ಲೆಯಲ್ಲಿ ಪರಿಸ್ಥಿತಿ ಗಂಭೀರ ಮತ್ತು ಉದ್ವಿಗ್ನತೆಯಿಂದ ಕೂಡಿದೆ ಎಂದು ಹೇಳಲಾಗಿದೆ.

ನುಹ್: ಹರಿಯಾಣದ ನುಹ್ ಜಿಲ್ಲೆಯಲ್ಲಿ ಆಗಸ್ಟ್ 8 ರವರೆಗೆ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಹರಿಯಾಣ ಸರ್ಕಾರ ಭಾನುವಾರ ಪ್ರಕಟಿಸಿದೆ.

ಹರಿಯಾಣ ಗೃಹ ಕಾರ್ಯದರ್ಶಿ ಹೊರಡಿಸಿದ ಆದೇಶದಲ್ಲಿ, ಜಿಲ್ಲೆಯಲ್ಲಿ ಪರಿಸ್ಥಿತಿ ಗಂಭೀರ ಮತ್ತು ಉದ್ವಿಗ್ನತೆಯಿಂದ ಕೂಡಿದೆ ಎಂದು ಹೇಳಲಾಗಿದೆ.

'ಆದರೆ, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಪರಿಶೀಲಿಸಲಾಗಿದೆ ಮತ್ತು ಪರಿಸ್ಥಿತಿಗಳು ಇನ್ನೂ ಗಂಭೀರ ಮತ್ತು ಉದ್ವಿಗ್ನತೆಯಿಂದ ಕೂಡಿದೆ ಎಂದು ಜಿಲ್ಲಾಧಿಕಾರಿಗಳು ನನ್ನ ಗಮನಕ್ಕೆ ತಂದಿದ್ದಾರೆ' ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

'ಸದ್ಯದ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯನ್ನು ಮೌಲ್ಯಮಾಪನ ಮಾಡಿದ ನಂತರ ಮತ್ತು ನುಹ್ ಡೆಪ್ಯೂಟಿ ಕಮಿಷನರ್ ಶಿಫಾರಸಿನ ಮೇರೆಗೆ, ಸಾರ್ವಜನಿಕ ಆಸ್ತಿಗಳು ಮತ್ತು ಸೌಕರ್ಯಗಳಿಗೆ ಹಾನಿಯಾಗುವ ಸಾಧ್ಯತೆ ಇದ್ದು, ಸುಳ್ಳು ಮಾಹಿತಿ ಮತ್ತು ವದಂತಿಗಳ ಮೂಲಕ ಇಂಟರ್ನೆಟ್ ಸೇವೆಯ ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆ ಇರುವುದರಿಂದ ನುಹ್‌ನಲ್ಲಿ ಇಂಟರ್ನೆಟ್ ಸೇವೆಗಳಿಗೆ ನಿರ್ಬಂಧ ವಿಧಿಸಲಾಗಿದೆ' ಎಂದು ಹೇಳಿಕೆ ಸೇರಿಸಲಾಗಿದೆ.

ಹರಿಯಾಣದ ನುಹ್ ಜಿಲ್ಲೆಯಲ್ಲಿ ಜುಲೈ 31ರಂದು ಎರಡು ಗುಂಪುಗಳ ನಡುವೆ ಸಂಭವಿಸಿದ ಘರ್ಷಣೆಯಲ್ಲಿ ಹಿಂಸಾಚಾರ ನಡೆದಿತ್ತು. ಹಿಂಸಾಚಾರದಲ್ಲಿ ಇಬ್ಬರು ಗೃಹ ರಕ್ಷಕರು ಸೇರಿದಂತೆ ಆರು ಮಂದಿ ಸಾವಿಗೀಡಾಗಿದ್ದರು ಮತ್ತು 88 ಮಂದಿ ಗಾಯಗೊಂಡಿದ್ದಾರೆ  ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಹರಿಯಾಣದ ನುಹ್ ಜಿಲ್ಲೆಯಲ್ಲಿ ನಡೆದ ಹಿಂಸಾಚಾರ ಮತ್ತು ಗಲಭೆಗೆ ಸಂಬಂಧಿಸಿದಂತೆ 141 ಜನರನ್ನು ಬಂಧಿಸಲಾಗಿದೆ ಮತ್ತು 55 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಹರಿಯಾಣ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಈಮಧ್ಯೆ, ನುಹ್‌ನಲ್ಲಿನ ಘರ್ಷಣೆಯ ನಂತರ ಗುರುಗ್ರಾಮ ಮತ್ತು ಪಕ್ಕದ ಜಿಲ್ಲೆಗಳಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇದುವರೆಗೆ 27 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಮತ್ತು 38 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗುರುಗ್ರಾಮದ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT