ಸಾಂದರ್ಭಿಕ ಚಿತ್ರ 
ದೇಶ

ಚಿಪ್ಸ್ ಕದಿಯುವಾಗ ಸಿಕ್ಕಿಬಿದ್ದ ಅಪ್ರಾಪ್ತ ಬಾಲಕನನ್ನು ಥಳಿಸಿ, ಬೆತ್ತಲೆ ಮೆರವಣಿಗೆ; 7 ಮಂದಿ ಬಂಧನ

ಶಿಮ್ಲಾ ಜಿಲ್ಲೆಯ ಅಂಗಡಿಯೊಂದರಿಂದ ಚಿಪ್ಸ್ ಪ್ಯಾಕೆಟ್ ಕದಿಯುವಾಗ ಸಿಕ್ಕಿಬಿದ್ದ 15 ವರ್ಷದ ಬಾಲಕನನ್ನು ಥಳಿಸಿ, ಬೆತ್ತಲೆಗೊಳಿಸಿ ಮೆರವಣಿಗೆ ಮಾಡಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಈ ಸಂಬಂಧ ಏಳು ಮಂದಿಯನ್ನು ಬಂಧಿಸಲಾಗಿದೆ.

ಶಿಮ್ಲಾ: ಜಿಲ್ಲೆಯ ಅಂಗಡಿಯೊಂದರಿಂದ ಚಿಪ್ಸ್ ಪ್ಯಾಕೆಟ್ ಕದಿಯುವಾಗ ಸಿಕ್ಕಿಬಿದ್ದ 15 ವರ್ಷದ ಬಾಲಕನನ್ನು ಥಳಿಸಿ, ಬೆತ್ತಲೆಗೊಳಿಸಿ ಮೆರವಣಿಗೆ ಮಾಡಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಈ ಸಂಬಂಧ ಏಳು ಮಂದಿಯನ್ನು ಬಂಧಿಸಲಾಗಿದೆ.

ಜುಲೈ 31ರಂದು ನೇಪಾಳದ ಬಡ ಕುಟುಂಬದ ಅಪ್ರಾಪ್ತ ರೋಹ್ರು ಪಟ್ಟಣದಲ್ಲಿ ಕಳ್ಳತನದ ಆರೋಪದಲ್ಲಿ ಸಿಕ್ಕಿಬಿದ್ದ ನಂತರ 'ಅಮಾನುಷ' ಕೃತ್ಯ ಸಂಭವಿಸಿದೆ ಎಂದು ಶಿಮ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸಂಜೀವ್ ಕುಮಾರ್ ಗಾಂಧಿ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಈಮಧ್ಯೆ, ಮರುದಿನ ಬಾಲಕನ ತಾಯಿ ಲಿವರ್ ಸಮಸ್ಯೆಯಿಂದ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಬಾಲಕನ ಮೆರವಣಿಗೆ ಮಾಡಿದ ವಿಡಿಯೋ ಘಟನೆಯ ಒಂದೆರಡು ದಿನಗಳ ನಂತರ ಸಾಮಾಜಿಕ ಮಾಧ್ಯಮಗಳಲ್ಲಿ

ಕಾಣಿಸಿಕೊಂಡಿದ್ದು, ಬಾಲಕನ ತಂದೆ ನೀಡಿರುವ ದೂರಿನ ಆಧಾರದ ಮೇಲೆ ಏಳು ಮಂದಿ ವಿರುದ್ಧ ಐಪಿಸಿಯ ಸೆಕ್ಷನ್ 341, 342 ಮತ್ತು 323ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸೆಕ್ಷನ್ 14 ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆ ಮತ್ತು ಬಾಲಾಪರಾಧಿ ಕಾಯ್ದೆಯ ಸೆಕ್ಷನ್ 75ರ ಅಡಿಯಲ್ಲಿಯೂ ಪ್ರಕರಣ ದಾಖಲಾಗಿದೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ರಾಜ್ಯದ ವಿರೋಧ ಪಕ್ಷದ ನಾಯಕ ಜೈರಾಮ್ ಠಾಕೂರ್, ದೇವಭೂಮಿ ಹಿಮಾಚಲ ಪ್ರದೇಶದಲ್ಲಿ ಇಂತಹ ಕ್ರೂರ ಕೃತ್ಯಗಳನ್ನು ಸಹಿಸುವುದು ಸರಿಯಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದಿದ್ದಾರೆ.

ಹಲ್ಲೆ, ಅಕ್ರಮ ಬಂಧನ ಮತ್ತು ಅಪ್ರಾಪ್ತನನ್ನು ಬೆತ್ತಲೆ ಮೆರವಣಿಗೆ ಮಾಡಿದ್ದಕ್ಕಾಗಿ ನಾಲ್ವರನ್ನು ಬಂಧಿಸಲಾಗಿದೆ ಮತ್ತು ಇದನ್ನು ವಿಡಿಯೋ ರೆಕಾರ್ಡ್ ಮಾಡಿ ಅದನ್ನು ಹಂಚಿಕೊಂಡಿದ್ದಕ್ಕಾಗಿ ಇನ್ನೂ ಮೂವರನ್ನು ಬಂಧಿಸಲಾಗಿದೆ ಎಂದು ಎಸ್‌ಪಿ ಗಾಂಧಿ ಹೇಳಿದರು.
ಆರೋಪಿಗಳಿಂದ ಎಂಟು ಮೊಬೈಲ್ ಫೋನ್‌ಗಳನ್ನು ಜಪ್ತಿ ಮಾಡಲಾಗಿದೆ.

ಇಂತಹ ಘಟನೆಗಳು ಮರುಕಳಿಸದಂತೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT