ಸಾಂದರ್ಭಿಕ ಚಿತ್ರ 
ದೇಶ

ಸ್ಥಳೀಯ ರೈಲುಗಳಲ್ಲಿ 'ಸರಣಿ ಬಾಂಬ್ ಸ್ಫೋಟ' ಕುರಿತು ಮುಂಬೈ ಪೊಲೀಸರಿಗೆ ಬೆದರಿಕೆ ಕರೆ; ವ್ಯಕ್ತಿ ಬಂಧನ

ಮುಂಬೈ ಪೊಲೀಸರಿಗೆ ಭಾನುವಾರ ಬೆಳಗ್ಗೆ ಸ್ಥಳೀಯ ರೈಲುಗಳಲ್ಲಿ 'ಸರಣಿ ಬಾಂಬ್ ಸ್ಫೋಟ' ಸಂಭವಿಸುವ ಕುರಿತು ಬೆದರಿಕೆ ಕರೆ ಮಾಡಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂಬೈ: ಮುಂಬೈ ಪೊಲೀಸರಿಗೆ ಭಾನುವಾರ ಬೆಳಗ್ಗೆ ಸ್ಥಳೀಯ ರೈಲುಗಳಲ್ಲಿ 'ಸರಣಿ ಬಾಂಬ್ ಸ್ಫೋಟ' ಸಂಭವಿಸುವ ಕುರಿತು ಬೆದರಿಕೆ ಕರೆ ಮಾಡಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆದರಿಕೆ ಕರೆ ಮಾಡಿದ ಆರೋಪದ ಮೇಲೆ ಜುಹು ಪ್ರದೇಶದ 25 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆ ವ್ಯಕ್ತಿ ಕುಡಿದ ಅಮಲಿನಲ್ಲಿ ಕರೆ ಮಾಡಿದ್ದಾನೆ ಎಂದು ಶಂಕಿಸಲಾಗಿದೆ ಎಂದು ಅವರು ಹೇಳಿದರು.

ಬೆಳಗ್ಗೆ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಬಂದಿದ್ದು, ಅದರಲ್ಲಿ ಮುಂಬೈನ ಸ್ಥಳೀಯ ರೈಲಿನಲ್ಲಿ ಬಾಂಬ್ ಇರಿಸಲಾಗಿದೆ ಮತ್ತು 'ಸರಣಿ ಬಾಂಬ್ ಸ್ಫೋಟಗಳು' ಸಂಭವಿಸಲಿವೆ ಎಂದು ವ್ಯಕ್ತಿ ಹೇಳಿಕೊಂಡಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.

ವಿಲೇ ಪಾರ್ಲೆ ಪ್ರದೇಶದಿಂದ ಕರೆ ಮಾಡುತ್ತಿರುವುದಾಗಿ ವ್ಯಕ್ತಿ ನಿಯಂತ್ರಣ ಕೊಠಡಿಯ ಸಿಬ್ಬಂದಿಗೆ ತಿಳಿಸಿದ್ದಾನೆ. ನಂತರ ಪೊಲೀಸರು ಕಾರ್ಯಾಚರಣೆ ಕೈಗೊಂಡರು.

ವ್ಯಕ್ತಿಯ ಮೊಬೈಲ್ ಫೋನ್ ಸಂಖ್ಯೆಯ ಮೂಲಕ ಸ್ಥಳವನ್ನು ಪತ್ತೆಹಚ್ಚಿದ ಪೊಲೀಸರು, ನಂತರ ಇತರ ತಾಂತ್ರಿಕ ಪುರಾವೆಗಳ ಸಹಾಯದಿಂದ ವ್ಯಕ್ತಿಯನ್ನು ಜುಹು ಪ್ರದೇಶದಿಂದ ಬಂಧಿಸಲಾಗಿದೆ. ಅಲ್ಲಿಂದಲೇ ಆತ ಬೆದರಿಕೆ ಕರೆ ಮಾಡಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.

ತನಿಖೆ ಸಮಯದಲ್ಲಿ, ವ್ಯಕ್ತಿ ಬಿಹಾರದಿಂದ ಬಂದಿದ್ದು, ಕಳೆದ 10 ದಿನಗಳಿಂದ ಮುಂಬೈನಲ್ಲಿದ್ದಾನೆ ಎಂದು ಜುಹು ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕರೆ ಮಾಡಲು ಬಳಸಿದ ಮೊಬೈಲ್ ಫೋನ್ ಅನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಈ ವ್ಯಕ್ತಿ ಮದ್ಯಪಾನ ಮಾಡುತ್ತಿದ್ದ. ಆತ ಮದ್ಯದ ಅಮಲಿನಲ್ಲಿ ಕರೆ ಮಾಡಿದ್ದಾನೆ ಎಂದು ಶಂಕಿಸಲಾಗಿದೆ. ನಾವು ಆತನ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸುತ್ತಿದ್ದೇವೆ ಎಂದು ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT