ಕಲ್ಲು ತೂರಾಟಕ್ಕೆ ಬಳಕೆ ಮಾಡಿಕೊಂಡಿದ್ದ ನುಹ್ ಹೊಟೇಲ್ ನೆಲಸಮ 
ದೇಶ

ಕಲ್ಲು ತೂರಾಟಕ್ಕೆ ಬಳಕೆ ಮಾಡಿಕೊಂಡಿದ್ದ ನುಹ್ ಹೊಟೇಲ್ ನೆಲಸಮ 

ಹರ್ಯಾಣದಲ್ಲಿ ಗಲಭೆಗಳನ್ನು ನಿಯಂತ್ರಣಕ್ಕೆ ತರುವುದಕ್ಕಾಗಿ ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸುವ ಮೂಲಕ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿರುವ ಸರ್ಕಾರ ನುಹ್ ನಲ್ಲಿ ಕಲ್ಲು ತೂರಾಟಕ್ಕೆ ಬಳಕೆ ಮಾಡಿಕೊಂಡಿದ್ದ ಹೊಟೆಲ್ ನ್ನು ಇಂದು ನೆಲಸಮಗೊಳಿಸಿದೆ. 

ನುಹ್: ಹರ್ಯಾಣದಲ್ಲಿ ಗಲಭೆಗಳನ್ನು ನಿಯಂತ್ರಣಕ್ಕೆ ತರುವುದಕ್ಕಾಗಿ ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸುವ ಮೂಲಕ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿರುವ ಸರ್ಕಾರ ನುಹ್ ನಲ್ಲಿ ಕಲ್ಲು ತೂರಾಟಕ್ಕೆ ಬಳಕೆ ಮಾಡಿಕೊಂಡಿದ್ದ ಹೊಟೆಲ್ ನ್ನು ಇಂದು ನೆಲಸಮಗೊಳಿಸಿದೆ. 

ಇತ್ತೀಚಿನ ಗಲಭೆಯಲ್ಲಿ ನುಹ್ ನ ರೆಸ್ಟೋರೆಂಟ್- ಹೋಟೆಲ್ ಒಂದನ್ನು ಕಲ್ಲು ತೂರಾಟ ಮಾಡಲು ಬಳಕೆ ಮಾಡಿಕೊಳ್ಳಲಾಗಿತ್ತು. ಪೊಲೀಸ್ ಸಿಬ್ಬಂದಿಗಳ ತಂಡವೊಂದನ್ನು ತೆರವು ಕಾರ್ಯಾಚರಣೆ ವೇಳೆ ಸ್ಥಳದಲ್ಲಿ ನಿಯೋಜಿಸಲಾಗಿತ್ತು. 

ಜಿಲ್ಲಾ ಪಟ್ಟಣ ಯೋಜಕ ವಿನೀಶ್ ಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದು, ಸಹಾರ ಫ್ಯಾಮಿಲಿ ರೆಸ್ಟೊರೆಂಟ್ ನ ವಾಣಿಜ್ಯ ಕಟ್ಟಡವನ್ನು ಅಕ್ರಮವಾಗಿ ನಿರ್ಮಿಸಲಾಗಿತ್ತು. ಧಾರ್ಮಿಕ ಮೆರವಣಿಗೆ ಮೇಲೆ ಗೂಂಡಾಗಳು ಇದೇ ಕಟ್ಟಡದಿಂದ ಕಲ್ಲು ತೂರಾಟ ನಡೆಸಿದ್ದರು.
 
ಇಡೀ ಕಟ್ಟಡ ಅನಧಿಕೃತವಾಗಿತ್ತು. ಈ ಕಟ್ಟಡಕ್ಕೆ ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಯಿಂದ ನೊಟೀಸ್ ಜಾರಿಗೊಳಿಸಲಾಗಿತ್ತು. ಹೋಟೆಲ್- ರೆಸ್ಟೊರೆಂಟ್ ಸಂಪೂರ್ಣವಾಗಿ ಅನಧಿಕೃತವಾಗಿತ್ತು ಯಾತ್ರೆ ವೇಳೆ ಗೂಂಡಾಗಳು ಇದೇ ಕಟ್ಟಡದಿಂದ ಕಲ್ಲು ತೂರಾಟ ನಡೆಸಿದ್ದರು ಆದ್ದರಿಂದ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ವಿವರಿಸಿದ್ದಾರೆ.
 
ಇದಕ್ಕೂ ಮುನ್ನ ಶನಿವಾರದಂದು ನುಹ್ ಜಿಲ್ಲಾಡಳಿತ 45 ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸಿತ್ತು. ಜು.31 ರಂದು ಹರ್ಯಾಣದ ನುಹ್ ಜಿಲ್ಲೆಯಲ್ಲಿ ಗಲಭೆ ಭುಗಿಲೆದ್ದಿತ್ತು, ಈ ಗಲಭೆಯಲ್ಲಿ ಇಬ್ಬರು ಹೋಂ ಗಾರ್ಡ್ ಗಳು ಸೇರಿ 6 ಮಂದಿ ಜೀವ ಕಳೆದುಕೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

SCROLL FOR NEXT