ಪಿಎಂ ನರೇಂದ್ರ ಮೋದಿ 
ದೇಶ

ಪ್ರತಿಪಕ್ಷಗಳು ತಾವು ಒಳ್ಳೆಯ ಕೆಲಸ ಮಾಡುವುದಿಲ್ಲ, ಬೇರೆಯವರನ್ನು ಮಾಡಲು ಬಿಡುವುದೂ ಇಲ್ಲ,ನಕಾರಾತ್ಮಕ ರಾಜಕಾರಣ ಮಾಡುತ್ತಿವೆ: ಪ್ರಧಾನಿ ಮೋದಿ ವಾಗ್ದಾಳಿ

ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಹೊಸದಾಗಿ ರೂಪುಗೊಂಡ ವಿರೋಧ ಪಕ್ಷವಾದ 'ಇಂಡಿಯಾ' ವಿರುದ್ಧ ಮತ್ತೊಮ್ಮೆ ಟೀಕಿಸಿರುವ ಪ್ರಧಾನಿ ನರೇಂದ್ರ ಮೋದಿ "ಕ್ವಿಟ್ ಇಂಡಿಯಾ ಚಳವಳಿಯು ಸ್ವಾತಂತ್ರ್ಯವನ್ನು ಪಡೆಯುವತ್ತ ಭಾರತದ ಮೆಟ್ಟಿಲುಗಳಲ್ಲಿ ಹೊಸ ಶಕ್ತಿಯನ್ನು ತುಂಬಿದೆ.

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಹೊಸದಾಗಿ ರೂಪುಗೊಂಡ ವಿರೋಧ ಪಕ್ಷವಾದ 'ಇಂಡಿಯಾ' ವಿರುದ್ಧ ಮತ್ತೊಮ್ಮೆ ಟೀಕಿಸಿರುವ ಪ್ರಧಾನಿ ನರೇಂದ್ರ ಮೋದಿ "ಕ್ವಿಟ್ ಇಂಡಿಯಾ ಚಳವಳಿಯು ಸ್ವಾತಂತ್ರ್ಯವನ್ನು ಪಡೆಯುವತ್ತ ಭಾರತದ ಮೆಟ್ಟಿಲುಗಳಲ್ಲಿ ಹೊಸ ಶಕ್ತಿಯನ್ನು ತುಂಬಿದೆ. ಇದರಿಂದ ಪ್ರೇರಿತರಾಗಿ ಇಂದು ಇಡೀ ದೇಶವು ಎಲ್ಲಾ ಕೆಡುಕುಗಳನ್ನು ತೊಲಗಿಸಲು ಕ್ವಿಟ್ ಇಂಡಿಯಾ ಎಂದು ಹೇಳುತ್ತಿದೆ.

ದೇಶದಲ್ಲಿ 508 ರೈಲ್ವೇ ನಿಲ್ದಾಣಗಳ ಪುನರಾಭಿವೃದ್ಧಿಗೆ ವರ್ಚುವಲ್ ಮೂಲಕ ಶಂಕುಸ್ಥಾಪನೆ ಮಾಡಿದ ನಂತರ ಪ್ರಧಾನಿ ಮೋದಿಯವರು ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.  ಭಾರತ ಬಿಟ್ಟು ತೊಲಗಿ ಚಳುವಳಿಯು ಆಗಸ್ಟ್ 9, 1942 ರಂದು ಪ್ರಾರಂಭವಾಯಿತು. ಭಾರತ ಬಿಟ್ಟು ತೊಲಗಿ ಚಳವಳಿಯು ಇಂದು ಭಾರತಕ್ಕೆ ಸ್ವಾತಂತ್ರ್ಯ ಮತ್ತು ದೇಶಕ್ಕೆ ಹೊಸ ಶಕ್ತಿಯನ್ನು ಬೆಳೆಸಿತು, ದೇಶದಿಂದ ಇಂದು ಎಲ್ಲಾ ದುಷ್ಟಶಕ್ತಿಗಳನ್ನು ತೊಡೆದುಹಾಕಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಇಂದು ಎಲ್ಲೆಡೆ ಒಂದೇ ಧ್ವನಿ ಕೇಳಿಬರುತ್ತಿದೆ, ಭ್ರಷ್ಟಾಚಾರ, ಭಾರತ ಬಿಟ್ಟು ತೊಲಗಿ. ರಾಜವಂಶ, ಭಾರತ ಬಿಟ್ಟು ತೊಲಗಿ. ತುಷ್ಠೀಕರಣ ರಾಜಕಾರಣ, ಭಾರತ ಬಿಟ್ಟು ತೊಲಗಿ" ಎಂಬುದು. ಪ್ರತಿಪಕ್ಷಗಳು ತಾವು ಒಳ್ಳೆಯ ಕೆಲಸ ಮಾಡುವುದೂ ಇಲ್ಲ, ಬೇರೆಯವರನ್ನು ಮಾಡಲು ಬಿಡುವುದೂ ಇಲ್ಲ ಎಂದು ಆರೋಪಿಸಿದರು. 

ಇದನ್ನೂ ಓದಿ: ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಕರ್ನಾಟಕದ 13 ನಿಲ್ದಾಣಗಳ ಪುನರಾಭಿವೃದ್ಧಿ: ಯಾವ ನಿಲ್ದಾಣಗಳವು?

ದೇಶದಲ್ಲಿ ಆಧುನಿಕ ಸಂಸತ್ ಭವನವನ್ನು ನಿರ್ಮಿಸಲಾಗಿದೆ. ಸಂಸತ್ತು ದೇಶದ ಪ್ರಜಾಪ್ರಭುತ್ವದ ಸಂಕೇತವಾಗಿದೆ. ಇದಕ್ಕೆ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ಪ್ರಾತಿನಿಧ್ಯವಿದೆ. ಆದರೆ ಪ್ರತಿಪಕ್ಷದ ಒಂದು ಬಣವು ಹೊಸ ಸಂಸತ್ತಿನ ಕಟ್ಟಡ ನಿರ್ಮಾಣಕ್ಕೂ ವಿರೋಧಿಸಿತು ಎಂದರು.

70 ವರ್ಷಗಳಿಂದ ಅವರು ದೇಶದ ವೀರ ಹುತಾತ್ಮ ಯೋಧರಿಗೆ ಯುದ್ಧ ಸ್ಮಾರಕವನ್ನು ಸಹ ನಿರ್ಮಿಸಲಿಲ್ಲ. ನಾವು ರಾಷ್ಟ್ರೀಯ ಯುದ್ಧ ಸ್ಮಾರಕವನ್ನು ನಿರ್ಮಿಸಿದಾಗ, ಅದನ್ನು ಸಾರ್ವಜನಿಕವಾಗಿ ಟೀಕಿಸಲು ಅವರಿಗೆ ನಾಚಿಕೆಯಾಗಲಿಲ್ಲ. ನಕಾರಾತ್ಮಕ ರಾಜಕೀಯ ಚಟುವಟಿಕೆಗಳನ್ನು ಮೆಟ್ಟಿನಿಂತು ನಾವು ಮುಂದೆ ಹೋಗುತ್ತಿದ್ದೇವೆ. ಸಕಾರಾತ್ಮಕ ರಾಜಕೀಯದ ಮಾರ್ಗವು ಒಂದು ಧ್ಯೇಯವಾಗಿದೆ ಎಂದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT