ಗದ್ದರ್ 
ದೇಶ

ತೆಲಂಗಾಣ: ಹೋರಾಟಗಾರ, ಕ್ರಾಂತಿಕಾರಿ ಗಾಯಕ ಗದ್ದರ್ ಇನ್ನಿಲ್ಲ

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ತೆಲಂಗಾಣದ ಖ್ಯಾತ ಜಾನಪದ ಗಾಯಕ, ಹೋರಾಟಗಾರ ಗದ್ದರ್ ಅವರು ಭಾನುವಾರ ನಿಧನರಾಗಿದ್ದಾರೆ.

ಹೈದರಾಬಾದ್: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ತೆಲಂಗಾಣದ ಖ್ಯಾತ ಜಾನಪದ ಗಾಯಕ, ಹೋರಾಟಗಾರ ಗದ್ದರ್ ಅವರು ಭಾನುವಾರ ನಿಧನರಾಗಿದ್ದಾರೆ.

ಗದ್ದರ್ ಎಂದೇ ಖ್ಯಾತ ಪಡೆದಿದ್ದ ಕ್ರಾಂತಿಕಾರಿ ಗಾಯಕ 77 ವರ್ಷದ ಗುಮ್ಮಡಿ ವಿಠಲ್ ರಾವ್ ಅವರು ಕಳೆದ ಕೆಲವು ದಿನಗಳಿಂದ ಶ್ವಾಸಕೋಶ ಮತ್ತು ಮೂತ್ರದ ಸಮಸ್ಯೆಯಿಂದ ಬಳಲುತ್ತಿದ್ದರು. ಚಿಕಿತ್ಸೆಗಾಗಿ ಅಪೋಲೋ ಸ್ಪೆಕ್ಟ್ರಾ ಆಸ್ಪತ್ರೆ ದಾಖಲಾಗಿದ್ದರು. ಆದರೆ ಇಂದು ಚಿಕಿತ್ಸೆ ಫಲಿಸದೆ ವಿಧಿವಶರಾಗಿದ್ದಾರೆ.

ತೀವ್ರ ಹೃದ್ರೋಗದಿಂದ ಬಳಲುತ್ತಿದ್ದ ಅವರು ಜುಲೈ 20 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಆಗಸ್ಟ್ 3 ರಂದು ಅವರಿಗೆ ಬೈಪಾಸ್ ಸರ್ಜರಿ ಮಾಡಲಾಗಿತ್ತು ಮತ್ತು ಚೇತರಿಸಿಕೊಂಡಿದ್ದಾರೆ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿತ್ತು.

ಆದಾಗ್ಯೂ, ಅವರು ಶ್ವಾಸಕೋಶ ಮತ್ತು ಮೂತ್ರದ ಸಮಸ್ಯೆಯಿಂದ ಬಳಲುತ್ತಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಹೇಳಿದೆ.

1948 ರಲ್ಲಿ ಜನಿಸಿದ ಗುಮ್ಮಡಿ ವಿಠ್ಠಲ್ ರಾವ್ ಅವರು, 2010 ರವರೆಗೆ ನಕ್ಸಲೀಯ ಚಳವಳಿಯಲ್ಲಿ ಸಕ್ರಿಯರಾಗಿದ್ದರು. ನಂತರ ಅವರು ತೆಲಂಗಾಣ ಚಳವಳಿಗೆ ಸೇರ್ಪಡೆಗೊಂಡರು. ತೆಲಂಗಾಣದಲ್ಲಿ ಹಿಂದುಳಿದ ಜಾತಿಗಳು ಮತ್ತು ದಲಿತರ ಹಕ್ಕುಗಳಿಗಾಗಿ ಗದ್ದರ್ ಹೋರಾಟ ಮಾಡಿದ್ದರು. ತಮ್ಮ ಹಾಡುಗಳ ಮೂಲಕವೇ ಅಪಾರ ಅಭಿಮಾನಿಗಳನ್ನು ಪಡೆದು, ಹೆಚ್ಚಿನ ಜನಮನ್ನಣೆ ಗಳಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT