ಎಸ್‌ಡಿಆರ್‌ಎಫ್ ತಂಡ 
ದೇಶ

ಉತ್ತರಾಖಂಡದಲ್ಲಿ ಭಾರಿ ಮಳೆ: ಗೋಡೆ ಕುಸಿದು ಇಬ್ಬರು ಮಕ್ಕಳು ಸಾವು

ಉತ್ತರಾಖಂಡದಲ್ಲಿ ಭಾರಿ ಮಳೆಯಾಗುತ್ತಿದ್ದು, ತೆಹ್ರಿ ಜಿಲ್ಲೆಯಲ್ಲಿ ಶನಿವಾರ ಗೋಡೆ ಕುಸಿದು ಮಲಗಿದ್ದ ಇಬ್ಬರು ಮಕ್ಕಳ ಸಾವನ್ನಪ್ಪಿದ್ದಾರೆ.

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಭಾರಿ ಮಳೆಯಾಗುತ್ತಿದ್ದು, ತೆಹ್ರಿ ಜಿಲ್ಲೆಯಲ್ಲಿ ಶನಿವಾರ ಗೋಡೆ ಕುಸಿದು ಮಲಗಿದ್ದ ಇಬ್ಬರು ಮಕ್ಕಳ ಸಾವನ್ನಪ್ಪಿದ್ದಾರೆ.

ರಾಜ್ಯ ವಿಪತ್ತು ನಿರ್ವಹಣಾ ಪಡೆ(ಎಸ್‌ಡಿಆರ್‌ಎಫ್) ಅಧಿಕಾರಿಗಳ ಪ್ರಕಾರ, ರಾತ್ರಿ ಸುರಿದ ಭಾರೀ ಮಳೆಯಿಂದ ಗೋಡೆ ಕುಸಿದಿದೆ. ಪೊಲೀಸರು ಮತ್ತು ಜಿಲ್ಲಾಡಳಿತ ತಂಡಗಳು ಸ್ಥಳಕ್ಕೆ ಧಾವಿಸಿ, ಮಕ್ಕಳನ್ನು ಅವಶೇಷಗಳಿಂದ ಹೊರತೆಗೆದು ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರು. ಆದರೆ ಮಕ್ಕಳು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಮೃತರನ್ನು ಪ್ರವೀಣ್ ದಾಸ್ ಅವರ 12 ವರ್ಷದ ಮಗಳು ಕುಮಾರಿ ಸ್ನೇಹಾ ಮತ್ತು 10 ವರ್ಷದ ಮಗ ರಣವೀರ್ ಎಂದು ಗುರುತಿಸಲಾಗಿದೆ. ಅಪಘಡದಲ್ಲಿ ಪ್ರವೀಣ್ ಅವರ ತಂದೆಗೂ ಗಾಯಗಳಾಗಿವೆ.

"ಶನಿವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಮರೋಡಾ ಸೇತುವೆ ಕುಸಿದಿದ್ದು, ನೀರಿನಲ್ಲಿ ಕೊಚ್ಚಿಬಂದ ಸೇತುವೆಯ ಅವಶೇಷಗಳಿಂದ ಮನೆಯ ಗೋಡೆ ಕುಸಿದಿದೆ. ಎಸ್‌ಡಿಆರ್‌ಎಫ್ ತಂಡ ಸ್ಥಳಕ್ಕೆ ತೆರಳಿ, ರಕ್ಷಣಾ ಕಾರ್ಯಾಚರಣೆ ನಡೆಸಿ ಅವಶೇಷಗಳಡಿ ಸಿಲುಕಿದ್ದ ಇಬ್ಬರು ಮಕ್ಕಳನ್ನು ಹೊರತೆಗೆದಿದ್ದಾರೆ ಎಂದು ತೆಹ್ರಿ ಗರ್ವಾಲ್ ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ಬ್ರಿಜೇಶ್ ಭಟ್ ಅವರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT