ಎಸ್‌ಡಿಆರ್‌ಎಫ್ ತಂಡ 
ದೇಶ

ಉತ್ತರಾಖಂಡದಲ್ಲಿ ಭಾರಿ ಮಳೆ: ಗೋಡೆ ಕುಸಿದು ಇಬ್ಬರು ಮಕ್ಕಳು ಸಾವು

ಉತ್ತರಾಖಂಡದಲ್ಲಿ ಭಾರಿ ಮಳೆಯಾಗುತ್ತಿದ್ದು, ತೆಹ್ರಿ ಜಿಲ್ಲೆಯಲ್ಲಿ ಶನಿವಾರ ಗೋಡೆ ಕುಸಿದು ಮಲಗಿದ್ದ ಇಬ್ಬರು ಮಕ್ಕಳ ಸಾವನ್ನಪ್ಪಿದ್ದಾರೆ.

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಭಾರಿ ಮಳೆಯಾಗುತ್ತಿದ್ದು, ತೆಹ್ರಿ ಜಿಲ್ಲೆಯಲ್ಲಿ ಶನಿವಾರ ಗೋಡೆ ಕುಸಿದು ಮಲಗಿದ್ದ ಇಬ್ಬರು ಮಕ್ಕಳ ಸಾವನ್ನಪ್ಪಿದ್ದಾರೆ.

ರಾಜ್ಯ ವಿಪತ್ತು ನಿರ್ವಹಣಾ ಪಡೆ(ಎಸ್‌ಡಿಆರ್‌ಎಫ್) ಅಧಿಕಾರಿಗಳ ಪ್ರಕಾರ, ರಾತ್ರಿ ಸುರಿದ ಭಾರೀ ಮಳೆಯಿಂದ ಗೋಡೆ ಕುಸಿದಿದೆ. ಪೊಲೀಸರು ಮತ್ತು ಜಿಲ್ಲಾಡಳಿತ ತಂಡಗಳು ಸ್ಥಳಕ್ಕೆ ಧಾವಿಸಿ, ಮಕ್ಕಳನ್ನು ಅವಶೇಷಗಳಿಂದ ಹೊರತೆಗೆದು ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರು. ಆದರೆ ಮಕ್ಕಳು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಮೃತರನ್ನು ಪ್ರವೀಣ್ ದಾಸ್ ಅವರ 12 ವರ್ಷದ ಮಗಳು ಕುಮಾರಿ ಸ್ನೇಹಾ ಮತ್ತು 10 ವರ್ಷದ ಮಗ ರಣವೀರ್ ಎಂದು ಗುರುತಿಸಲಾಗಿದೆ. ಅಪಘಡದಲ್ಲಿ ಪ್ರವೀಣ್ ಅವರ ತಂದೆಗೂ ಗಾಯಗಳಾಗಿವೆ.

"ಶನಿವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಮರೋಡಾ ಸೇತುವೆ ಕುಸಿದಿದ್ದು, ನೀರಿನಲ್ಲಿ ಕೊಚ್ಚಿಬಂದ ಸೇತುವೆಯ ಅವಶೇಷಗಳಿಂದ ಮನೆಯ ಗೋಡೆ ಕುಸಿದಿದೆ. ಎಸ್‌ಡಿಆರ್‌ಎಫ್ ತಂಡ ಸ್ಥಳಕ್ಕೆ ತೆರಳಿ, ರಕ್ಷಣಾ ಕಾರ್ಯಾಚರಣೆ ನಡೆಸಿ ಅವಶೇಷಗಳಡಿ ಸಿಲುಕಿದ್ದ ಇಬ್ಬರು ಮಕ್ಕಳನ್ನು ಹೊರತೆಗೆದಿದ್ದಾರೆ ಎಂದು ತೆಹ್ರಿ ಗರ್ವಾಲ್ ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ಬ್ರಿಜೇಶ್ ಭಟ್ ಅವರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Bengaluru Rains: ವರುಣಾರ್ಭಟಕ್ಕೆ ನದಿಯಂತಾದ ರಸ್ತೆಗಳು; 5 ದಿನ ಮಳೆ ಸಾಧ್ಯತೆ, ತಾಪಮಾನ ಗಣನೀಯ ಇಳಿಕೆ: ಹವಾಮಾನ ಇಲಾಖೆ

ಇರಾನ್ ಮತ್ತು ಅಮೆರಿಕ ಮಧ್ಯೆ ಮತ್ತೆ ಯುದ್ಧ 2.0 ಶುರು?: ಸೌದಿಗೆ 8,000 ಸೈನಿಕರು, 16 JF-17 ಯುದ್ಧ ವಿಮಾನ ಕಳುಹಿಸಿದ Pak

Ali'money' ಇಲ್ಲ, ಅತಿಯಾದ ಹಸ್ತಕ್ಷೇಪ ಬೇಡ': ನಟಿ ಮೌನಿ ರಾಯ್ ಜೊತೆಗಿನ ವಿಚ್ಛೇದನ ಘೋಷಣೆ ಬೆನ್ನಲ್ಲೇ ಮೌನ ಮುರಿದ Suraj Nambiar

ಜೈಲಿನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ನಟ ದರ್ಶನ್?; ಪರಪ್ಪನ ಅಗ್ರಹಾರದ ಸುತ್ತಮುತ್ತ ಉದ್ವಿಗ್ನ ಪರಿಸ್ಥಿತಿ!

ಬಂಗಾಳ ಮಹಿಳೆಯರಿಗೆ, ಸರ್ಕಾರಿ ನೌಕರರಿಗೆ ಬಂಪರ್ ಗಿಫ್ಟ್: ತಿಂಗಳಿಗೆ 3,000 ರೂ., ಉಚಿತ ಬಸ್ ಪ್ರಯಾಣ, 7ನೇ ವೇತನ ಆಯೋಗ ರಚನೆಗೆ ಸಂಪುಟ ಅಸ್ತು

SCROLL FOR NEXT