ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ 
ದೇಶ

ದೇಶದ ಇತಿಹಾಸದಲ್ಲಿ ಕರಾಳ ದಿನ; ದೆಹಲಿ ಸೇವಾ ಮಸೂದೆಗೆ ರಾಜ್ಯಸಭೆ ಅನುಮೋದನೆ ವಿರುದ್ಧ ಕೇಜ್ರಿವಾಲ್ ಆಕ್ರೋಶ

ದೆಹಲಿ ಸೇವಾ ಮಸೂದೆಗೆ (Delhi Services Bill) ರಾಜ್ಯಸಭೆಯಲ್ಲಿ ಸೋಮವಾರ ಅನುಮೋದನೆ ದೊರೆತಿರುವುದಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ದೇಶದ ಇತಿಹಾಸದಲ್ಲಿ ಕರಾಳ ದಿನ ಎಂದು ಕಿಡಿಕಾರಿದ್ದಾರೆ.

ನವದೆಹಲಿ: ದೆಹಲಿ ಸೇವಾ ಮಸೂದೆಗೆ (Delhi Services Bill) ರಾಜ್ಯಸಭೆಯಲ್ಲಿ ಸೋಮವಾರ ಅನುಮೋದನೆ ದೊರೆತಿರುವುದಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ದೇಶದ ಇತಿಹಾಸದಲ್ಲಿ ಕರಾಳ ದಿನ ಎಂದು ಕಿಡಿಕಾರಿದ್ದಾರೆ.

ರಾಜ್ಯಸಭೆಯಲ್ಲಿ ಮಸೂದೆಯನ್ನು ಅಂಗೀಕರಿಸಿದ ಬೆನ್ನಲ್ಲೇ ಪತ್ರಿಕಾಗೋಷ್ಠಿ ನಡೆಸಿ ಕೇಜ್ರಿವಾಲ್, 'ದೇಶದ ಇತಿಹಾಸದಲ್ಲಿ ಇಂದು ಕರಾಳ ದಿನ. ಸರ್ಕಾರಕ್ಕೆ ಕೆಲಸ ಮಾಡುವ ಅಧಿಕಾರವಿಲ್ಲ. ಸುಪ್ರೀಂ ಕೋರ್ಟ್‌ನಲ್ಲೂ ನನಗೆ ನಂಬಿಕೆ ಇಲ್ಲ ಎಂದು ಪ್ರಧಾನಿ ಹೇಳುತ್ತಿರುವುದು ಸ್ಪಷ್ಟವಾಗಿದೆ. ದೆಹಲಿ ಸರ್ಕಾರಿ ನೌಕರರ ಎಲ್ಲಾ ನೀತಿಗಳನ್ನು ಕೇಂದ್ರ ಸರ್ಕಾರ ರೂಪಿಸುತ್ತಿದೆ ಎಂದು ಅವರು ಹೇಳಿದರು.

ದೆಹಲಿ ಸರ್ಕಾರದ ಪ್ಯೂನ್ ಏನು ಮಾಡುತ್ತಾರೆ ಎಂಬುದನ್ನು ಪ್ರಧಾನಿ ಕುಳಿತು ನೋಡುತ್ತಾರೆ. ಅದಕ್ಕಾಗಿಯೇ ಅವರನ್ನು ಪ್ರಧಾನಿ ಮಾಡಲಾಯಿತು. ನೀವು ಕೇಂದ್ರ ಸರ್ಕಾರವನ್ನು ನಡೆಸುತ್ತೀರಿ. ನೀವು ದೆಹಲಿಯಲ್ಲಿ ಏಕೆ ಹಸ್ತಕ್ಷೇಪ ಮಾಡುತ್ತಿದ್ದೀರಿ. ಅಮಿತ್ ಶಾ ಜೀ, ದೆಹಲಿಯ ಜನರ ಹಕ್ಕುಗಳನ್ನು ಕೊಲ್ಲಲು ನಿಮಗೆ ಅಧಿಕಾರ ನೀಡಲಿಲ್ಲ. ದೆಹಲಿ ಸರ್ಕಾರದ ಪ್ಯೂನ್‌ಗಳ ವರ್ಗಾವಣೆಯನ್ನೂ ಪ್ರಧಾನಿ ಮೋದಿ ಮಾಡುತ್ತಾರೆ ಎಂದು ಅವರು ಪ್ರಧಾನಿಯವರನ್ನು ಪ್ರಶ್ನಿಸಿದರು.

ಬಿಜೆಪಿ ಇದನ್ನು ಏಕೆ ಮಾಡುತ್ತಿದೆ ಎಂದರೆ, ನಾವು 7-8 ವರ್ಷಗಳಲ್ಲಿ ಯಾವುದೇ ಅಧಿಕಾರವಿಲ್ಲದೆ ಮಾಡಿದ ಕೆಲಸವನ್ನು ಅವರು ಗುಜರಾತ್‌ನಲ್ಲಿ 30 ವರ್ಷಗಳ ಕಾಲ ಅಧಿಕಾರದಲ್ಲಿದ್ದರೂ ಮಾಡಲು ಸಾಧ್ಯವಾಗಲಿಲ್ಲ ... ಮಣಿಪುರದಲ್ಲಿ ಅವರ ಸರ್ಕಾರವಿದೆ, ಅವರು ಮಣಿಪುರವನ್ನು ಸುಟ್ಟುಹಾಕಿದ್ದಾರೆ ಎಂದು ಕಿಡಿಕಾರಿದರು.

ವಾಜಪೇಯಿ-ಅಡ್ವಾಣಿಗೆ ಬಿಜೆಪಿ ಅಪಮಾನ
ಇನ್ನು ಇದೇ ವಿಚಾರವಾಗಿ ಬಿಜೆಪಿ ವಿರುದ್ಧ ಕಿಡಿಕಾರಿದ ಆಮ್ ಆದ್ಮಿ ಪಕ್ಷದ ರಾಘವ್ ಚಡ್ಡಾ, 'ದೆಹಲಿಗೆ ಪೂರ್ಣ ಪ್ರಮಾಣದ ರಾಜ್ಯ ಸ್ಥಾನಮಾನವನ್ನು ಬಯಸಿದ ತಮ್ಮದೇ ನಾಯಕರಾದ ಅಟಲ್ ಬಿಹಾರಿ ವಾಜಪೇಯಿ ಮತ್ತು ಎಲ್‌ಕೆ ಅಡ್ವಾಣಿ ಅವರನ್ನು ಅನುಸರಿಸದೇ ಸುಗ್ರೀವಾಜ್ಞೆ ಮೂಲಕ ಮೋದಿ ನೇತೃತ್ವದ ಸರ್ಕಾರ ಅಪಮಾನಿಸಿದೆ. ನೆಹರುವಾದಿಯಾಗಬೇಡಿ, ಅಡ್ವಾಣಿವಾದಿಯಾಗಿರಿ ಎಂದು ನಾನು ಅಮಿತ್ ಶಾ ಅವರಿಗೆ ಹೇಳಲು ಬಯಸುತ್ತೇನೆ. ದೆಹಲಿಯಲ್ಲಿ ಸತತವಾಗಿ ಹಲವು ಬಾರಿ ಸೋತಿರುವ ಬಗ್ಗೆ ಬಿಜೆಪಿ ಈ ರೀತಿಯಾಗಿ ಪ್ರತಿಕ್ರಿಯಿಸುತ್ತಿದೆ ಎಂದು ಆರೋಪಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT