ಪ್ರಧಾನಿ ಮೋದಿ 
ದೇಶ

ವಿಪಕ್ಷಗಳ ವಿರುದ್ಧ "ಕ್ವಿಟ್ ಇಂಡಿಯಾ" ಟೀಕಾ ಪ್ರಹಾರ ನಡೆಸಿದ ಪ್ರಧಾನಿ ಮೋದಿ

ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ದಾರಿಗೆ ಕೆಲವು ವ್ಯಕ್ತಿಗಳು ಅಡ್ಡಗಾಲು ಹಾಕಲು ಯತ್ನಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ನವದೆಹಲಿ: ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ದಾರಿಗೆ ಕೆಲವು ವ್ಯಕ್ತಿಗಳು ಅಡ್ಡಗಾಲು ಹಾಕಲು ಯತ್ನಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.
 
ದೇಶದ ಜನತೆ ಭ್ರಷ್ಟಾಚಾರ ಹಾಗೂ ತುಷ್ಟೀಕರಗಳಂತಹ ಅನಿಷ್ಟಗಳನ್ನು ದೇಶ ತೊರೆಯುವಂತೆ (ಕ್ವಿಟ್ ಇಂಡಿಯಾ) ಆಗ್ರಹಿಸುತ್ತಿದ್ದಾರೆ ಎಂದು ಮೋದಿ ವಿಪಕ್ಷಗಳ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ. 

ಭಾರತ್ ಮಂಡಪಂ ನಲ್ಲಿ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯ ಅಂಗವಾಗಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಸ್ವದೇಶಿ ವಿಷಯದಲ್ಲಿ ದೇಶದಲ್ಲಿ ಹೊಸ ಕ್ರಾಂತಿ ಉಂಟಾಗಿದೆ ಎಂದು ಹೇಳಿರುವ ಅವರು, ಮುಂಬರುವ ಹಬ್ಬಗಳ ಸಾಲಿನಲ್ಲಿ ಸ್ಥಳೀಯ ಉತ್ಪನ್ನಗಳಿಗೆ ಉತ್ತೇಜನ ನೀಡಿ ಎಂದು ದೇಶದ ಜನತೆಗೆ ಕರೆ ನೀಡಿದ್ದಾರೆ.

ದೇಶವು 'ನವ-ಮಧ್ಯಮ ವರ್ಗ'ದ ಏರಿಕೆಗೆ ಸಾಕ್ಷಿಯಾಗಿದೆ, ಇದು ಜವಳಿ ಕಂಪನಿಗಳಿಗೆ ದೊಡ್ಡ ಅವಕಾಶವನ್ನು ಒದಗಿಸುತ್ತದೆ ಎಂದು ಮೋದಿ ಹೇಳಿದ್ದಾರೆ. 

ಇದೇ ವೇಳೆ ವಿಪಕ್ಷಗಳ ಮೈತ್ರಿಕೂಟ 'I.N.D.I.A', ವಿರುದ್ಧ ವಾಗ್ದಾಳಿ ನಡೆಸಿರುವ ಪ್ರಧಾನಿ ಮೋದಿ ದೇಶ ಈಗ, ಭ್ರಷ್ಟಾಚಾರ, ಕುಟುಂಬ ರಾಜಕಾರಣ, ತುಷ್ಟೀಕರಣದಂತಹ ಕೆಟ್ಟ ಉದಾಹರಣೆಗಳನ್ನು ದೇಶ ಬಿಡುವಂತೆ ಹೇಳುತ್ತಿದೆ ಎಂದು ಟೀಕಾ ಪ್ರಹಾರ ನಡೆಸಿದ್ದಾರೆ. 

ಖಾದಿಯನ್ನು ಹೆಚ್ಚು ಬಳಸಲು ಕರೆ ನೀಡಿರುವ ಪ್ರಧಾನಿ ಮೋದಿ,  2014 ಕ್ಕಿಂತಲೂ ಮೊದಲು 25,000-30,000 ಕೋಟಿ ರೂಪಾಯಿಗಳಷ್ಟಿದ್ದ ಮಾರಾಟ ಈಗ ಈಗ 1.30 ಲಕ್ಷ ಕೋಟಿಗೆ ಏರಿಕೆಯಾಗಿದೆ.  ಭಾರತದ ಕೈಮಗ್ಗ, ಖಾದಿ, ಜವಳಿ ಕ್ಷೇತ್ರವನ್ನು ವಿಶ್ವಚಾಂಪಿಯನ್ ಆಗಿಸುವ ಪ್ರಯತ್ನ ನಮ್ಮದು ಎಂದು ಹೇಳಿದ್ದಾರೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT