ಪ್ರಧಾನಿ ಮೋದಿ 
ದೇಶ

ವಿಪಕ್ಷಗಳ ವಿರುದ್ಧ "ಕ್ವಿಟ್ ಇಂಡಿಯಾ" ಟೀಕಾ ಪ್ರಹಾರ ನಡೆಸಿದ ಪ್ರಧಾನಿ ಮೋದಿ

ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ದಾರಿಗೆ ಕೆಲವು ವ್ಯಕ್ತಿಗಳು ಅಡ್ಡಗಾಲು ಹಾಕಲು ಯತ್ನಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ನವದೆಹಲಿ: ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ದಾರಿಗೆ ಕೆಲವು ವ್ಯಕ್ತಿಗಳು ಅಡ್ಡಗಾಲು ಹಾಕಲು ಯತ್ನಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.
 
ದೇಶದ ಜನತೆ ಭ್ರಷ್ಟಾಚಾರ ಹಾಗೂ ತುಷ್ಟೀಕರಗಳಂತಹ ಅನಿಷ್ಟಗಳನ್ನು ದೇಶ ತೊರೆಯುವಂತೆ (ಕ್ವಿಟ್ ಇಂಡಿಯಾ) ಆಗ್ರಹಿಸುತ್ತಿದ್ದಾರೆ ಎಂದು ಮೋದಿ ವಿಪಕ್ಷಗಳ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ. 

ಭಾರತ್ ಮಂಡಪಂ ನಲ್ಲಿ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯ ಅಂಗವಾಗಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಸ್ವದೇಶಿ ವಿಷಯದಲ್ಲಿ ದೇಶದಲ್ಲಿ ಹೊಸ ಕ್ರಾಂತಿ ಉಂಟಾಗಿದೆ ಎಂದು ಹೇಳಿರುವ ಅವರು, ಮುಂಬರುವ ಹಬ್ಬಗಳ ಸಾಲಿನಲ್ಲಿ ಸ್ಥಳೀಯ ಉತ್ಪನ್ನಗಳಿಗೆ ಉತ್ತೇಜನ ನೀಡಿ ಎಂದು ದೇಶದ ಜನತೆಗೆ ಕರೆ ನೀಡಿದ್ದಾರೆ.

ದೇಶವು 'ನವ-ಮಧ್ಯಮ ವರ್ಗ'ದ ಏರಿಕೆಗೆ ಸಾಕ್ಷಿಯಾಗಿದೆ, ಇದು ಜವಳಿ ಕಂಪನಿಗಳಿಗೆ ದೊಡ್ಡ ಅವಕಾಶವನ್ನು ಒದಗಿಸುತ್ತದೆ ಎಂದು ಮೋದಿ ಹೇಳಿದ್ದಾರೆ. 

ಇದೇ ವೇಳೆ ವಿಪಕ್ಷಗಳ ಮೈತ್ರಿಕೂಟ 'I.N.D.I.A', ವಿರುದ್ಧ ವಾಗ್ದಾಳಿ ನಡೆಸಿರುವ ಪ್ರಧಾನಿ ಮೋದಿ ದೇಶ ಈಗ, ಭ್ರಷ್ಟಾಚಾರ, ಕುಟುಂಬ ರಾಜಕಾರಣ, ತುಷ್ಟೀಕರಣದಂತಹ ಕೆಟ್ಟ ಉದಾಹರಣೆಗಳನ್ನು ದೇಶ ಬಿಡುವಂತೆ ಹೇಳುತ್ತಿದೆ ಎಂದು ಟೀಕಾ ಪ್ರಹಾರ ನಡೆಸಿದ್ದಾರೆ. 

ಖಾದಿಯನ್ನು ಹೆಚ್ಚು ಬಳಸಲು ಕರೆ ನೀಡಿರುವ ಪ್ರಧಾನಿ ಮೋದಿ,  2014 ಕ್ಕಿಂತಲೂ ಮೊದಲು 25,000-30,000 ಕೋಟಿ ರೂಪಾಯಿಗಳಷ್ಟಿದ್ದ ಮಾರಾಟ ಈಗ ಈಗ 1.30 ಲಕ್ಷ ಕೋಟಿಗೆ ಏರಿಕೆಯಾಗಿದೆ.  ಭಾರತದ ಕೈಮಗ್ಗ, ಖಾದಿ, ಜವಳಿ ಕ್ಷೇತ್ರವನ್ನು ವಿಶ್ವಚಾಂಪಿಯನ್ ಆಗಿಸುವ ಪ್ರಯತ್ನ ನಮ್ಮದು ಎಂದು ಹೇಳಿದ್ದಾರೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT