ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಸೋಮವಾರ ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. 
ದೇಶ

ರಾಹುಲ್‌ ಗಾಂಧಿಯವರ ಮೊಹಬತ್ ಕಿ ದುಕಾನ್‌ನಲ್ಲಿ ಚೀನಾದ ಸರಕುಗಳನ್ನು ಮಾರಾಟ ಮಾಡಲಾಗುತ್ತಿದೆ: ಅನುರಾಗ್ ಠಾಕೂರ್

ಚೀನಾ, ನ್ಯೂಸ್‌ಕ್ಲಿಕ್ ವೆಬ್‌ಸೈಟ್ ಮತ್ತು ಕಾಂಗ್ರೆಸ್ ಭಾರತ ವಿರೋಧಿ ಹಿನ್ನೆಲೆಯಲ್ಲಿ ಒಂದಕ್ಕೊಂದು ಸಂಬಂಧ ಹೊಂದಿವೆ ಎಂದು ಬಿಜೆಪಿ ನಾಯಕ ಮತ್ತು ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಸೋಮವಾರ ಆರೋಪಿಸಿದ್ದಾರೆ. ಚೀನಾದ ಕಂಪನಿಗಳು ಪೋರ್ಟಲ್‌ಗೆ ಹಣ ನೀಡುತ್ತಿವೆ ಎಂದು ಆರೋಪಿಸಿದ ವರದಿಯನ್ನು ಅವರು ಉಲ್ಲೇಖಿಸಿದ್ದಾರೆ.

ನವದೆಹಲಿ: ಚೀನಾ, ನ್ಯೂಸ್‌ಕ್ಲಿಕ್ ವೆಬ್‌ಸೈಟ್ ಮತ್ತು ಕಾಂಗ್ರೆಸ್ ಭಾರತ ವಿರೋಧಿ ಹಿನ್ನೆಲೆಯಲ್ಲಿ ಒಂದಕ್ಕೊಂದು ಸಂಬಂಧ ಹೊಂದಿವೆ ಎಂದು ಬಿಜೆಪಿ ನಾಯಕ ಮತ್ತು ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಸೋಮವಾರ ಆರೋಪಿಸಿದ್ದಾರೆ. ಚೀನಾದ ಕಂಪನಿಗಳು ಪೋರ್ಟಲ್‌ಗೆ ಹಣ ನೀಡುತ್ತಿವೆ ಎಂದು ಆರೋಪಿಸಿದ ವರದಿಯನ್ನು ಅವರು ಉಲ್ಲೇಖಿಸಿದ್ದಾರೆ.

ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರೊಂದಿಗೆ ಜಂಠಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಠಾಕೂರ್, 'ರಾಹುಲ್ ಜಿ ಅವರ ನಕಲಿ 'ಮೊಹಬ್ಬತ್ ಕಿ ದುಕಾನ್'ನಲ್ಲಿ ಚೀನಾದ ವಸ್ತುಗಳನ್ನು ಮಾರಾಟ ಮಾಡಲಾಗುತ್ತಿದೆ' ಎಂದು ಆರೋಪಿಸಿದರು.

'NewsClick ವೆಬ್‌ಸೈಟಿನ ಫಂಡಿಂಗ್ ನೆಟ್‌ವರ್ಕ್ ಅನ್ನು ನೋಡಿದರೆ, ಇದು ವಿದೇಶಿ ಪ್ರಜೆಯಾದ ನೆವಿಲ್ಲೆ ರಾಯ್ ಸಿಂಘಮ್‌ ಎಂಬುವವರಿಂದ ಹಣ ಪಡೆದಿದೆ ಮತ್ತು ಅವರು ಚೀನಾದಿಂದ ಹಣ ಪಡೆದಿದ್ದಾರೆ. ಈ ನೆವಿಲ್ಲೆ ರಾಯ್ ಸಿಂಘಮ್ ಚೀನಾದ ಕಮ್ಯುನಿಸ್ಟ್ ಪಾರ್ಟಿ ಆಫ್ ಚೀನಾ ಮತ್ತು ಮಾಧ್ಯಮ ಕಂಪನಿಯಾದ ಮಕು ಗ್ರೂಪ್‌ನ ಪ್ರಚಾರ ವಿಭಾಗದೊಂದಿಗೆ ನೇರ ಸಂಪರ್ಕವನ್ನು ಹೊಂದಿದ್ದಾರೆ' ಎಂದು ಅವರು ಹೇಳಿದರು.

ಈ ನ್ಯೂಸ್ ಪೋರ್ಟಲ್ ಹಿಂದೆ 'ವಿದೇಶಿ ಕೈಗಳು' ಇರುವುದು 2021ರಲ್ಲಿ ಬಹಿರಂಗವಾಯಿತು ಎಂದು ಅವರು ಹೇಳಿದರು.
ಉಚಿತ ಸುದ್ದಿಯ ಹೆಸರಿನಲ್ಲಿ ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡುತ್ತಿದ್ದಾರೆ. ಕಾಂಗ್ರೆಸ್ ಮತ್ತು ಇತರ ಪಕ್ಷಗಳು ಅವರಿಗೆ ಬೆಂಬಲ ನೀಡುತ್ತಿವೆ ಎಂದು ಆರೋಪಿಸಿದರು.

ಬಿಜೆಪಿ ಸದಸ್ಯ ನಿಶಿಕಾಂತ್ ದುಬೆ ಅವರು ಲೋಕಸಭೆಯಲ್ಲಿ ನ್ಯೂಯಾರ್ಕ್ ಟೈಮ್ಸ್‌ನಲ್ಲಿ ವರದಿಯಾದ ಸುದ್ದಿಯನ್ನು ಪ್ರಸ್ತಾಪಿಸಿದರು. ಈ ವರದಿಯಲ್ಲಿ, ನ್ಯೂಸ್‌ಕ್ಲಿಕ್ ಚೀನಾದ ಸಂಸ್ಥೆಗಳಿಂದ ಹಣವನ್ನು ಪಡೆದಿದೆ ಮತ್ತು ಭಾರತ ವಿರೋಧಿ ಕೃತ್ಯಗಳಿಗಾಗಿ ಹಣವನ್ನು ಬಳಸಲಾಗಿದೆ ಎಂದು ಹೇಳಿದ್ದರು.

ಈ ಸಂಬಂಧ ಸುದ್ದಿ ಪೋರ್ಟಲ್ ಅಥವಾ ಕಾಂಗ್ರೆಸ್‌ನಿಂದ ತಕ್ಷಣದ ಪ್ರತಿಕ್ರಿಯೆ ಲಭ್ಯವಾಗಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!