ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ 
ದೇಶ

ಇಂಡಿಯಾ ಒಕ್ಕೂಟದ ಕಾಂಗ್ರೆಸ್- ಟಿಎಂಸಿ ನಡುವೆ ಮತ್ತೆ ಬಿರುಕು!

2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದ ದೂರ ಇಡುವ ನಿಟ್ಟಿನಲ್ಲಿ 'ಇಂಡಿಯಾ' ಒಕ್ಕೂಟ ರಚಿಸಿಕೊಂಡು ಪರಸ್ಪರ ಒಗಟ್ಟು ಪ್ರದರ್ಶಿಸುವುದಾಗಿ ಹೇಳಿಕೊಂಡಿರುವ ಕಾಂಗ್ರೆಸ್- ಟಿಎಂಸಿ ನಾಯಕರು ಆಗಾಗ್ಗೆ ಪರಸ್ಪರ ಆರೋಪ, ಟೀಕೆ ಸರ್ವೇ ಸಾಮಾನ್ಯವಾಗಿರುವಂತೆಯೇ ಇದೀಗ ಮತ್ತೆ ಬಿರುಕು ಕಾಣಿಸಿಕೊಂಡಿದೆ.

ನವದೆಹಲಿ: 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದ ದೂರ ಇಡುವ ನಿಟ್ಟಿನಲ್ಲಿ 'ಇಂಡಿಯಾ' ಒಕ್ಕೂಟ ರಚಿಸಿಕೊಂಡು ಪರಸ್ಪರ ಒಗಟ್ಟು ಪ್ರದರ್ಶಿಸುವುದಾಗಿ ಹೇಳಿಕೊಂಡಿರುವ ಕಾಂಗ್ರೆಸ್- ಟಿಎಂಸಿ ನಾಯಕರು ಆಗಾಗ್ಗೆ ಪರಸ್ಪರ ಆರೋಪ, ಟೀಕೆ ಸರ್ವೇ ಸಾಮಾನ್ಯವಾಗಿರುವಂತೆಯೇ ಇದೀಗ ಮತ್ತೆ ಬಿರುಕು ಕಾಣಿಸಿಕೊಂಡಿದೆ.

ಪಶ್ಚಿಮ ಬಂಗಾಳದ ಪಂಚಾಯತ್ ಚುನಾವಣೆಯಲ್ಲಿ ತಮ್ಮ ಪಕ್ಷದ ವಿಜಯಶಾಲಿ ಅಭ್ಯರ್ಥಿಗಳಿಗೆ  ಪೊಲೀಸರು ಮತ್ತು ಗೂಂಡಾಗಳು ಬೆದರಿಕೆ ಹಾಕುತ್ತಿದ್ದು,ಆಡಳಿತಾರೂಢ ಟಿಎಂಸಿಗೆ ಸೇರುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಆರೋಪಿಸಿದ್ದಾರೆ. ಈ ಸಂಬಂಧ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಭಾನುವಾರ ಪತ್ರ ಬರೆದಿದ್ದಾರೆ.  

ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದಲ್ಲೆಲ್ಲಾ, ಪೊಲೀಸರು, ರಾಜಕೀಯ ಮುಖಂಡರು, ಗೂಂಡಾಗಳು ಕೊಲೆ ಮತ್ತು ಇತರ ಆರೋಪಗಳ ಮೂಲಕ ಬೆದರಿಕೆ ಹಾಕುತ್ತಿದ್ದು, ಟಿಎಂಸಿ ಸದಸ್ಯತ್ವವನ್ನು ಸ್ವೀಕರಿಸುವ ಮೂಲಕ ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ. ಇದು ಮುಂದುವರೆದರೆ ಮುಂಬರುವ ದಿನಗಳಲ್ಲಿ ದೊಡ್ಡ ಆಯಾಮ ಪಡೆಯುವ ಸಾಧ್ಯತೆಯಿದ್ದು, ಇದು ರಾಷ್ಟ್ರದ ಮತ್ತು ಪಶ್ಚಿಮ ಬಂಗಾಳದ ಪ್ರಜಾಪ್ರಭುತ್ವದ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ ಎಂದು ಚೌಧರಿ ಬರೆದಿರುವ ಎರಡು ಪುಟುಗಳ ಪತ್ರದಲ್ಲಿ ತಿಳಿಸಿದ್ದಾರೆ.

ಟಿಎಂಸಿ ಅತಿಯಾದ ಅಧಿಕಾರದ ಆಸೆ ರಾಜ್ಯದಲ್ಲಿ ಏಕಪ್ರಭುತ್ವದ ಆಡಳಿತದ ಪರಿಕಲ್ಪನೆಯನ್ನು ರೂಪಿಸುವಲ್ಲಿ ಪ್ರಮುಖವಾಗಿದೆ ಎಂದು ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷರಾಗಿರುವ ಚೌಧರಿ ಆರೋಪಿಸಿದ್ದು, "ದಶಕಕ್ಕೂ ಹೆಚ್ಚು ಕಾಲ  ಮುಖ್ಯಮಂತ್ರಿಯಾಗಿರುವ ನೀವು ಪಶ್ಚಿಮ ಬಂಗಾಳ ರಾಜ್ಯದಲ್ಲಿ ಚುನಾವಣೆ ಗೆಲ್ಲಲು ಇದು ಸುಸಂಸ್ಕೃತ ಮಾರ್ಗವೇ!  ಎಂದು ಮಮತಾ ಬ್ಯಾನರ್ಜಿ ಅವರನ್ನು ಪ್ರಶ್ನಿಸಿದ್ದಾರೆ. ಅಲ್ಲದೇ ಪೊಲೀಸರು ಮತ್ತು ಗೂಂಡಾಗಳ ಮೂಲಕ  ಇತರ ಪಕ್ಷಗಳನ್ನು ಹಿಂಸಿಸುವುದನ್ನು ನಿಲ್ಲಿಸಬೇಕೆಂದು ಮನವಿ ಮಾಡಿದ್ದು, ಪಂಚಾಯತ್ ಬೋರ್ಡ್ ರಚನೆಗೆ ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT