ರಾಹುಲ್ ಗಾಂಧಿ 
ದೇಶ

ಹಣದುಬ್ಬರದ ಬಗ್ಗೆ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ: ಆಜಾದ್‌ಪುರ ಮಂಡಿಗೆ ಭೇಟಿ ನೀಡಿದ ವೀಡಿಯೊ!

ಏರುತ್ತಿರುವ ಹಣದುಬ್ಬರದ ಬಗ್ಗೆ ಇಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬಡವರ ಮಾತನ್ನು ಕೇಳುತ್ತಿಲ್ಲ ಎಂದು ಆರೋಪಿಸಿದ್ದಾರೆ.

ನವದೆಹಲಿ: ಏರುತ್ತಿರುವ ಹಣದುಬ್ಬರದ ಬಗ್ಗೆ ಇಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬಡವರ ಮಾತನ್ನು ಕೇಳುತ್ತಿಲ್ಲ ಎಂದು ಆರೋಪಿಸಿದ್ದಾರೆ. ಇಷ್ಟೇ ಅಲ್ಲದೆ ತಾವು ಇತ್ತೀಚೆಗೆ ಆಜಾದ್‌ಪುರ ಮಂಡಿಗೆ ಭೇಟಿ ನೀಡಿ ಕೆಲವು ತರಕಾರಿ ಮತ್ತು ಹಣ್ಣು ಮಾರಾಟಗಾರರನ್ನು ಭೇಟಿ ಮಾಡಿದ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

ತಮ್ಮ ವೀಡಿಯೊದ ಲಿಂಕ್‌ನೊಂದಿಗೆ ಟ್ವೀಟ್‌ನಲ್ಲಿ, ರಾಹುಲ್ ಗಾಂಧಿ ಹೀಗೆ ಬರೆದುಕೊಂಡಿದ್ದಾರೆ. ಆಜಾದ್‌ಪುರ ಮಂಡಿಯಲ್ಲಿ ಕಾರ್ಮಿಕರು, ವ್ಯಾಪಾರಿಗಳು ಮತ್ತು ರೈತರನ್ನು ಭೇಟಿ ಮಾಡಿ ಅವರ ಕಷ್ಟ ವಿಚಾರಿಸಿದ್ದಾಗಿ ಬರೆದುಕೊಂಡಿದ್ದಾರೆ.

ಮಂಡಿಯಲ್ಲಿ ಕೆಲಸ ಮಾಡುತ್ತಿರುವ ಜಟಾ ಶಂಕರ್ ಎಂಬ ಕೂಲಿ ಕಾರ್ಮಿಕ. ಇಲ್ಲಿ ಒಂದು ವರ್ಷಕ್ಕೂ ಹೆಚ್ಚು ಸಮಯದಿಂದ ಕೆಲಸ ಮಾಡುತ್ತಿದ್ದು ಮನೆಗೆ ಹೋಗಲು, ಕುಟುಂಬವನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ. ಅವನು ಹೇಗೆ ಹೋಗುತ್ತಾನೆ. ಕೆಲಸ ತಪ್ಪಿದರೆ, ಹಣ ಕಡಿತವಾಗುತ್ತದೆ. ಹೀಗಾಗಿ ಈ ಹಣದುಬ್ಬರದಿಂದಾಗಿ ಅವರು ಸಂಕಷ್ಟಕೀಡಾಗಿದ್ದಾರೆ ಎಂದು ಮಾಜಿ ಕಾಂಗ್ರೆಸ್ ಮುಖ್ಯಸ್ಥರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

'ನಷ್ಟದಿಂದಾಗಿ ವಾರದಲ್ಲಿ ಎರಡರಿಂದ ಮೂರು ರಾತ್ರಿ ಹಸಿವಿನಿಂದ ಮಲಗಬೇಕಾಗುತ್ತದೆ ಎಂದು ಅಂಗಡಿಯವರೊಬ್ಬರು ನನಗೆ ಹೇಳಿದರು. ದೇಶದ ಬಡವರ ಸಮಸ್ಯೆಗಳನ್ನು ಪರಿಹರಿಸುವ ಬದಲು ಸರ್ಕಾರವು ಅವರ ಮಾತನ್ನು ಕೇಳುತ್ತಿಲ್ಲ ಗಾಂಧಿ ಹೇಳಿದರು.

ಸಮಯ ಬದಲಾಗುತ್ತದೆ. ಭಾರತ ಒಂದಾಗುತ್ತದೆ ಮತ್ತು ಬಡವರ ಕಣ್ಣೀರನ್ನು ನಾವು ಹೊರೆಸುತ್ತೇವೆ ಎಂದು ಗಾಂಧಿ ಹೇಳಿದರು.

ಕಳೆದ ಮಂಗಳವಾರ ಗಾಂಧಿ ಅವರು ರಾಷ್ಟ್ರ ರಾಜಧಾನಿಯ ಆಜಾದ್‌ಪುರ ಮಂಡಿಗೆ ಭೇಟಿ ನೀಡಿದ್ದರು ಮತ್ತು ಅಲ್ಲಿ ಕೆಲವು ತರಕಾರಿ ಮತ್ತು ಹಣ್ಣು ಮಾರಾಟಗಾರರನ್ನು ಭೇಟಿ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT