ಸಾಂದರ್ಭಿಕ ಚಿತ್ರ 
ದೇಶ

ಆಗ್ರಾ: ಪ್ರಸಾದ ವಿತರಿಸುತ್ತಿದ್ದ ವೇಳೆ ದೇವಸ್ಥಾನದ ಛಾವಣಿ ಕುಸಿದು ಬಾಲಕಿ ಸಾವು, 8 ಮಂದಿಗೆ ಗಾಯ

ಉತ್ತರ ಪ್ರದೇಶದ ಆಗ್ರ ಜಿಲ್ಲೆಯ ಶಹಗಂಜ್ ಪ್ರದೇಶದಲ್ಲಿ ಸೋಮವಾರ ಶಿವ ದೇವಸ್ಥಾನದ ಒಂದು ಭಾಗದ ಛಾವಣಿ ಕುಸಿದು ಬಿದ್ದು 17 ವರ್ಷದ ಬಾಲಕಿ ಸಾವನ್ನಪ್ಪಿದ್ದಾರೆ ಮತ್ತು ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಗ್ರಾ: ಉತ್ತರ ಪ್ರದೇಶದ ಆಗ್ರ ಜಿಲ್ಲೆಯ ಶಹಗಂಜ್ ಪ್ರದೇಶದಲ್ಲಿ ಸೋಮವಾರ ಶಿವ ದೇವಸ್ಥಾನದ ಒಂದು ಭಾಗದ ಛಾವಣಿ ಕುಸಿದು ಬಿದ್ದು 17 ವರ್ಷದ ಬಾಲಕಿ ಸಾವನ್ನಪ್ಪಿದ್ದಾರೆ ಮತ್ತು ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳೀಯರು ಮತ್ತು ಕನ್ವಾರಿಯಾದವರಿಗೆ ಪ್ರಸಾದ ವಿತರಿಸುತ್ತಿದ್ದ ವೇಳೆ ದೇವಸ್ಥಾನದ ವರಾಂಡದ ಮೇಲ್ಛಾವಣಿ ಕುಸಿದು ಬಿದ್ದಿದೆ.

ಬೆಳಗ್ಗೆ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದ, ಅವಶೇಷಗಳಡಿ ಸಿಲುಕಿದ್ದ ಹಲವಾರು ಜನರನ್ನು ರಕ್ಷಿಸಿ ನಗರದ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ(ನಗರ) ಸೂರಜ್ ಕುಮಾರ್ ರೈ ತಿಳಿಸಿದ್ದಾರೆ.

ಮೃತ ಬಾಲಕಿಯನ್ನು ಜ್ಯೋತಿ ಎಂದು ಗುರುತಿಸಲಾಗಿದ್ದು, ಗಾಯಾಳುಗಳನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಈಗಾಗಲೇ ದುರ್ಬಲವಾಗಿದ್ದ ವರಾಂಡ, ಕಳೆದ ಕೆಲವು ದಿನಗಳಿಂದ ಮಳೆಯಿಂದ ಮತ್ತಷ್ಟು ಶೀತಿಲಾವಸ್ಥೆ ತಲುಪಿತ್ತು ಎಂದು ಕುಮಾರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಭೋವಿ' ನಿಗಮದಲ್ಲಿ 'ಕಮಿಷನ್' ಆರೋಪ ಬೆನ್ನಲ್ಲೇ ಮೊದಲ ತಲೆದಂಡ: ಅಧ್ಯಕ್ಷ ಸ್ಥಾನಕ್ಕೆ ಎಸ್. ರವಿಕುಮಾರ್ ರಾಜೀನಾಮೆ

34 ಮಾನವ ಬಾಂಬ್‌, 400 ಕೆಜಿ RDX, 14 ಪಾಕ್ ಭಯೋತ್ಪಾದಕರು! ಮುಂಬೈ ಪೊಲೀಸರಿಗೆ ಬೆದರಿಕೆ ಸಂದೇಶ; ಎಲ್ಲೆಡೆ ಕಟ್ಟೆಚ್ಚರ!

ಡ್ಯಾಂಗೆ ಹಾರುತ್ತಿದ್ದ ಯುವತಿಯ ರಕ್ಷಣೆ, ವ್ಯಕ್ತಿಯ ಸಮಯಪ್ರಜ್ಞೆಗೆ ವ್ಯಾಪಕ ಮೆಚ್ಚುಗೆ, Video Viral

'Delhi Metroಗೆ ಹೋಲಿಕೆ ಮಾಡಿದರೆ Bengaluru Metro ದರ ಅತ್ಯಂತ ದುಬಾರಿ': BMRCL, ರಾಜ್ಯ ಸರ್ಕಾರದ ವಿರುದ್ಧ Tejasvi Surya ಕಿಡಿ!

Thane: ವೇಶ್ಯಾವಾಟಿಕೆ ದಂಧೆ, ಪೊಲೀಸರಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ನಟಿ!

SCROLL FOR NEXT