ಯುವ ಕಾಂಗ್ರೆಸ್ ಪ್ರತಿಭಟನೆ 
ದೇಶ

ನವದೆಹಲಿ: ಜಂತರ್ ಮಂತರ್ ನಲ್ಲಿ ಭಾರತೀಯ ಯುವ ಕಾಂಗ್ರೆಸ್ ಪ್ರತಿಭಟನೆ!

ಮಣಿಪುರದಲ್ಲಿನ ಹಿಂಸಾಚಾರ ಸೇರಿದಂತೆ ದೇಶದಲ್ಲಿನ ಹಲವು ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಭಾರತೀಯ ಯುವ ಕಾಂಗ್ರೆಸ್ ಸದಸ್ಯರು ರಾಷ್ಟ್ರ ರಾಜಧಾನಿಯ ಜಂತರ್ ಮಂತರ್ ನಲ್ಲಿಂದು ಬೃಹತ್ ಪ್ರತಿಭಟನೆ ನಡೆಸಿದರು.

ನವದೆಹಲಿ: ಮಣಿಪುರದಲ್ಲಿನ ಹಿಂಸಾಚಾರ ಸೇರಿದಂತೆ ದೇಶದಲ್ಲಿನ ಹಲವು ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಭಾರತೀಯ ಯುವ ಕಾಂಗ್ರೆಸ್ ಸದಸ್ಯರು ರಾಷ್ಟ್ರ ರಾಜಧಾನಿಯ ಜಂತರ್ ಮಂತರ್ ನಲ್ಲಿಂದು ಬೃಹತ್ ಪ್ರತಿಭಟನೆ ನಡೆಸಿದರು.

'ಭಾರತ ಉಳಿಸಿ, ಸಂಸತ್ ಘೇರಾವ್' ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ನ ನೂರಾರು ಕಾರ್ಯಕರ್ತರು ಪಾಲ್ಗೊಂಡರು. ಮಣಿಪುರ ಜನಾಂಗೀಯ  ಹಿಂಸಾಚಾರದಿಂದ ತತ್ತರಿಸಿದ್ದರೂ ಪ್ರಧಾನಿ ನರೇಂದ್ರ ಮೋದಿ ಇಲ್ಲಿಯವರೆಗೂ ಮೌನ ಮುರಿದಿಲ್ಲ. ದೇಶದಲ್ಲಿ ಹಣದುಬ್ಬರ ಹೆಚ್ಚಾಗಿದ್ದು, ಬೆಲೆ ನಿಯಂತ್ರಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ. ನಿರುದ್ಯೋಗ ಪ್ರಮಾಣ ನಿರಂತರವಾಗಿ ಏರಿಕೆಯಾಗುತ್ತಿದ್ದರೂ ಉದ್ಯೋಗ ಸೃಷ್ಟಿಯತ್ತ ಸರ್ಕಾರ ಗಮನ ಹರಿಸುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಪ್ರತಿಭಟನಾಕರರನ್ನು ನಿಯಂತ್ರಿಸಲು ಪೊಲೀಸರು ಬ್ಯಾರಿಕೇಡ್ ಹಾಕಿದ್ದರು. ಕೆಲವರು ಆ ಬ್ಯಾರಿಕೇಡ್ ಗಳನ್ನು ಮುರಿಯಲು ಪ್ರಯತ್ನಿಸಿದರು. ಈ ಸಂದರ್ಭದಲ್ಲಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣದ ನಂತರ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT