ರಾಜ್ಯಸಭೆಯಲ್ಲಿ ಜಗದೀಪ್ ಧನ್ಖರ್ ಹಾಗೂ ಡೆರೆಕ್ ಒ’ಬ್ರಿಯಾನ್ ನಡುವೆ ಮಾತಿನ ಚಕಮಕಿ ನಡೆಯುತ್ತಿರುವುದು. 
ದೇಶ

ರಾಜ್ಯಸಭೆಯಲ್ಲಿ ಅಶಿಸ್ತಿನ ವರ್ತನೆ: ಟಿಎಂಸಿ ಸಂಸದ ಡೆರೆಕ್ ಒ’ಬ್ರಿಯಾನ್ ಅಮಾನತು

ರಾಜ್ಯಸಭೆಯಲ್ಲಿ ಅಶಿಸ್ತಿನ ವರ್ತನೆ ತೋರಿಸಿದ ಹಿನ್ನೆಲೆಯಲ್ಲಿ ಟಿಎಂಸಿ ಸಂಸದ ಡೆರೆಕ್ ಒ’ಬ್ರಿಯಾನ್ ಅವರನ್ನು ಅಧಿವೇಶದಿಂದ ಅಮಾನತು ಮಾಡಲಾಗಿದೆ.

ನವದೆಹಲಿ: ರಾಜ್ಯಸಭೆಯಲ್ಲಿ ಅಶಿಸ್ತಿನ ವರ್ತನೆ ತೋರಿಸಿದ ಹಿನ್ನೆಲೆಯಲ್ಲಿ ಟಿಎಂಸಿ ಸಂಸದ ಡೆರೆಕ್ ಒ’ಬ್ರಿಯಾನ್ ಅವರನ್ನು ಅಧಿವೇಶದಿಂದ ಅಮಾನತು ಮಾಡಲಾಗಿದೆ.

ತೃಣಮೂಲದ ಡೆರೆಕ್ ಒ'ಬ್ರಿಯಾನ್ ಅವರನ್ನು ಮುಂಗಾರು ಅಧಿವೇಶನದ ಉಳಿದ ಅವಧಿಗೆ ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ ಎಂದು ಸದನದ ಅಧ್ಯಕ್ಷ ಮತ್ತು ಉಪ ರಾಷ್ಟ್ರಪತಿ ಜಗದೀಪ್ ಧನ್ಖರ್ ಅವರು ಇಂದು ಘೋಷಿಸಿದ್ದಾರೆ.

ಮಂಗಳವಾರ ಸಭೆ ಆರಂಭವಾದಗಿನಿಂದ ಸಭಾನಾಯಕ ಪಿಯೂಷ್ ಗೋಯಲ್ ಅವರಿಗೆ ಮಾತನಾಡಲು ಅಡ್ಡಿ ಪಡಿಸುತ್ತಿದ್ದರು. ಇದರಿಂದ ನಿರಂತರವಾಗಿ ಸದನದ ಕಲಾಪಗಳಿಗೆ ತೊಂದರೆ ಉಂಟಾಗುತ್ತಿದೆ ಎಂದು ಸಭಾಪತಿ ಜಗದೀಪ್ ಧನ್ಖರ್ ಅವಿಧೇಯತೆ ಮತ್ತು ಸದನದಲ್ಲಿ ನಿರಂತರವಾಗಿ ಗದ್ದಲ ಸೃಷ್ಟಿಸಿದ್ದಕ್ಕಾಗಿ ಡೆರೆಕ್ ಅವರನ್ನು ಅಮಾನತು ಗೊಳಿಸಿದರು.

ಡೆರೆಕ್ ಅವರು ದೆಹಲಿ ಸೇವೆಗಳ ಮಸೂದೆಯ ಮೇಲಿನ ಚರ್ಚೆಯ ಸಂದರ್ಭದಲ್ಲಿ ಸದನಕ್ಕೆ ಅಡ್ಡಿಪಡಿಸಿದರು. ಮೇಲ್ಮನೆಯಲ್ಲಿ ಗದ್ದಲದ ನಡುವೆ, ವಿಪಿ ಧನ್​ಖರ್ ಅವರು ' ಡೆರೆಕ್ ಒ'ಬ್ರೇನ್ ಅವರಿಗೆ ಸದನದಿಂದ ಹೊರಹೋಗಬೇಕು ಎಂದು ಆದೇಶಿಸಿದರು. ಬಳಿಕ ಸದನವನ್ನು ಮಧ್ಯಾಹ್ನ 12 ಗಂಟೆಗೆ ಮುಂದೂಡಿದ್ದಾರೆ.

ಈ ನಡುವೆ ರಾಜ್ಯಸಭಾ ಸದಸ್ಯ ಟ್ವಿಟರ್​ನಲ್ಲಿ ಪ್ರಧಾನಿ ಮೋದಿ ಮೇಲ್ಮನೆಗೆ ಬರುವಂತೆ ಒತ್ತಾಯಿಸಿದ್ದಾರೆ. ಅಲ್ಲದೇ ಪ್ರಧಾನಿಯಲ್ಲಿ ಲೋಕಸಭೆಗೆ ಕರೆಸಲು ಅವಿಶ್ವಾಸ ನಿರ್ಣಯದ ನಿಯಮಗಳನ್ನು ತೆಗೆದುಕೊಳ್ಳಬೇಕಾಗಿದೆ. ರಾಜ್ಯಸಭೆಯಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಮಣಿಪುರದ ಚರ್ಚೆಯನ್ನು ಪ್ರಾರಂಭಿಸೋಣ ಎಂದು ಡೆರೆಕ್​ ಬರೆದುಕೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಂದಿಕೊಳ್ಳಲು ಸಾಧ್ಯವಿಲ್ಲ ಎಂದು ಯಾರು ಹೇಳಿದ್ದು?': ಅಮೆರಿಕ ವ್ಯಾಪಾರ ಒಪ್ಪಂದದ ಅನಿಶ್ಚಿತತೆ ನಡುವೆಯೇ ಹೊಸ ಮಾರುಕಟ್ಟೆಗಳತ್ತ ಭಾರತ ಕಣ್ಣು!

ದಾವಣಗೆರೆ: ಮಕ್ಕಳ ಹಾದಿ ಹಿಡಿದ ಬಿಜೆಪಿ ಮುಖಂಡ; ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

SCROLL FOR NEXT