ಮಲ್ಖಾನ್ ಸಿಂಗ್ 
ದೇಶ

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಡಕಾಯಿತ ಮಲ್ಖಾನ್ ಸಿಂಗ್

ಮಧ್ಯ ಪ್ರದೇಶದ ಮಾಜಿ ಡಕಾಯಿತ ಮಲ್ಖಾನ್ ಸಿಂಗ್ ಅವರು ಬುಧವಾರ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದಾರೆ.

ಭೋಪಾಲ್: ಮಧ್ಯ ಪ್ರದೇಶದ ಮಾಜಿ ಡಕಾಯಿತ ಮಲ್ಖಾನ್ ಸಿಂಗ್ ಅವರು ಬುಧವಾರ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದಾರೆ.

ಇಂದು ಭೋಪಾಲ್ ಕಾಂಗ್ರೆಸ್ ಕಚೇರಿಯಲ್ಲಿ ಮಧ್ಯ ಪ್ರದೇಶ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಮತ್ತು ವಿರೋಧ ಪಕ್ಷದ ನಾಯಕ ಗೋವಿಂದ್ ಸಿಂಗ್ ಅವರ ಸಮ್ಮುಖದಲ್ಲಿ ಮಲ್ಖಾನ್ ಸಿಂಗ್ ಅವರು ಕಾಂಗ್ರೆಸ್ ಸೇರಿದರು.

ಕಾಂಗ್ರೆಸ್ ಸೇರಿದ ಬಳಿಕ ಮಾತನಾಡಿದ ಮಲ್ಖಾನ್ ಸಿಂಗ್, ಇಂದು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ. ಬಿಜೆಪಿ ಪರ ಪ್ರಚಾರ ಮಾಡಿ, ತತ್ವ ಸಿದ್ದಾಂತದ ಪಕ್ಷ ಎಂದು ಭಾವಿಸಿದ್ದೆ. ಆದರೆ ಕಾಂಗ್ರೆಸ್ ಕಳೆದ 50 ವರ್ಷಗಳಲ್ಲಿ ಮಾಡದಷ್ಟು ಭ್ರಷ್ಟಾಚಾರವನ್ನು ಬಿಜೆಪಿ ಕೇವಲ 20 ವರ್ಷಗಳಲ್ಲಿ ಮಾಡಿದೆ ಎಂದು ಕೇಸರಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು.

"ನಾನು ರಾಜಕೀಯ ಮಾಡುವ ನಾಯಕನಲ್ಲ. ದೌರ್ಜನ್ಯದ ವಿರುದ್ಧದ ಹೋರಾಟದಲ್ಲಿ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ. ಸಾರ್ವಜನಿಕರಿಗೆ ಅನ್ಯಾಯವಾದರೆ, ಅವರ ಮೇಲೆ ದಬ್ಬಾಳಿಕೆ ಕಂಡುಬಂದರೆ ನಾನು ಅದನ್ನು ವಿರೋಧಿಸುತ್ತೇನೆ" ಎಂದು ಸಿಂಗ್ ಹೇಳಿದರು.

ಮಾಜಿ ಡಕಾಯಿತ ಮಲ್ಖಾನ್ ಸಿಂಗ್ ಅವರು 1982 ರಲ್ಲಿ ಅಂದಿನ ಮುಖ್ಯಮಂತ್ರಿ ಅರ್ಜುನ್ ಸಿಂಗ್ ಅವರ ಮುಂದೆ ಶರಣಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT