ಜೈರಾಮ್ ರಮೇಶ್ 
ದೇಶ

ಮಣಿಪುರ ವಿಡಿಯೋ ಬಿಡುಗಡೆ ಸಮಯದ ಕುರಿತು ಅಮಿತ್ ಶಾ ಪ್ರಶ್ನೆ: 'ನಾಚಿಕೆಗೇಡಿನ ಸಂಗತಿ' ಎಂದ ಕಾಂಗ್ರೆಸ್

ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡುವ ವಿಡಿಯೋ ಬಿಡುಗಡೆಯಾದ ಸಮಯವನ್ನು ಗೃಹ ಸಚಿವ ಅಮಿತ್ ಶಾ ಪ್ರಶ್ನಿಸಿರುವುದು ನಾಚಿಕೆಗೇಡಿನ ಸಂಗತಿ ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಬುಧವಾರ ಹೇಳಿದ್ದಾರೆ.

ನವದೆಹಲಿ: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡುವ ವಿಡಿಯೋ ಬಿಡುಗಡೆಯಾದ ಸಮಯವನ್ನು ಗೃಹ ಸಚಿವ ಅಮಿತ್ ಶಾ ಪ್ರಶ್ನಿಸಿರುವುದು ನಾಚಿಕೆಗೇಡಿನ ಸಂಗತಿ ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಬುಧವಾರ ಹೇಳಿದ್ದಾರೆ.

ಮಣಿಪುರ ವಿಚಾರವಾಗಿ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯದ ಕುರಿತ ಚರ್ಚೆ ವೇಳೆ ಮಾತನಾಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಂಸತ್ತಿನ ಮುಂಗಾರು ಅಧಿವೇಶನ ಪ್ರಾರಂಭವಾಗುವ ಒಂದು ದಿನದ ಮೊದಲು ಜುಲೈ 19 ರಂದು ಮೇ 4 ರ ಘಟನೆಯ ವೀಡಿಯೊ ಕಾಣಿಸಿಕೊಂಡಿತು ಮತ್ತು ರಾಷ್ಟ್ರವ್ಯಾಪಿ ಆಕ್ರೋಶವನ್ನು ಉಂಟುಮಾಡಿತ್ತು ಎಂಬ ಹೇಳಿಕೆಗೆ ಕಾಂಗ್ರೆಸ್ ತೀವ್ರ ಕಿಡಿಕಾರಿದೆ.

ಈ ಕುರಿತು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್, 'ಇಂತಹ ವಿಡಿಯೋ ಇರುವ ಬಗ್ಗೆ ಗುಪ್ತಚರ ಸಂಸ್ಥೆಗಳಿಗೆ ಗೊತ್ತಿರಲಿಲ್ಲ ಎಂದು ಹೇಳುವ ಮೂಲಕ ಅಮಿತ್ ಶಾ 'ತಮ್ಮ ಅಸಮರ್ಥತೆಯನ್ನು ಮಾತ್ರ ಒಪ್ಪಿಕೊಳ್ಳುತ್ತಿದ್ದಾರೆ. ಮಣಿಪುರದಿಂದ ಭೀಕರ ವೀಡಿಯೊ ಬಿಡುಗಡೆಯ 'ಸಮಯ'ವನ್ನು ಗೃಹ ಸಚಿವರು ಪ್ರಶ್ನಿಸುತ್ತಿರುವುದು ಸಂಪೂರ್ಣವಾಗಿ ನಾಚಿಕೆಗೇಡಿನ ಸಂಗತಿಯಾಗಿದೆ. ಇಂತಹ ವೀಡಿಯೊದ ಅಸ್ತಿತ್ವದ ಬಗ್ಗೆ ಗುಪ್ತಚರ ಸಂಸ್ಥೆಗಳಿಗೆ ತಿಳಿದಿಲ್ಲ ಎಂದು ಸಂಸತ್ತಿನಲ್ಲೇ ಪ್ರತಿಪಾದಿಸುವ ಮೂಲಕ, ಅವರು ಭಾರತದ ಗೃಹ ಸಚಿವರಾಗಿ ತಮ್ಮ ಸ್ವಂತ ಅಸಮರ್ಥತೆಯನ್ನು ಒಪ್ಪಿಕೊಳ್ಳುತ್ತಿದ್ದಾರೆ. ಅವರು ಮಣಿಪುರದ ಮುಖ್ಯಮಂತ್ರಿಯ ಸಂಪೂರ್ಣ ಅನರ್ಹತೆಯನ್ನು ಅಜಾಗರೂಕತೆಯಿಂದ ಒಪ್ಪಿಕೊಳ್ಳುತ್ತಿದ್ದಾರೆ ಎಂದು ಜೈರಾಮ್ ರಮೇಶ್ ಟ್ವಿಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಣಿಪುರದಲ್ಲಿ ನಡೆದಿರುವ ಘಟನೆಗಳು ನಾಚಿಕೆಗೇಡಿನ ಸಂಗತಿಯಾದರೂ ಅವುಗಳ ಮೇಲೆ ರಾಜಕೀಯ ಮಾಡುವುದು ನಾಚಿಕೆಗೇಡಿನ ಸಂಗತಿ ಎಂದು ಲೋಕಸಭೆಯಲ್ಲಿ ಶಾ ಹೇಳಿದ್ದರು. ಚಿತ್ರೀಕರಿಸಿದ ಕೆಲವು ದಿನಗಳ ನಂತರ ವೀಡಿಯೊ ಹೊರಬಂದಿದೆ ಎಂದು ಹೇಳಿದ ಅವರು, ಜನರಿಗೆ ಇದರ ಬಗ್ಗೆ ತಿಳಿದಿದ್ದರೆ, ಅದರ ಬಗ್ಗೆ ಆರಂಭಿಕ ಕ್ರಮಕ್ಕಾಗಿ ಅವರು ಅದನ್ನು ಪೊಲೀಸರು ಮತ್ತು ಅಧಿಕಾರಿಗಳಿಗೆ ಹಸ್ತಾಂತರಿಸಬೇಕಾಗಿತ್ತು ಎಂದು ಹೇಳಿದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT