ಕಾಕೋಲಿ ಗೋಶ್ ದಸ್ತಿದಾರ್‌ 
ದೇಶ

ಮಣಿಪುರ ಹಿಂಸಾಚಾರ: ಮಹಿಳೆಯರ ತಲೆಗೂದಲು, ಕತ್ತು ಸೀಳಿದ ವಿಡಿಯೋಗಳನ್ನು ನೋಡಿದ್ದೇವೆ- ಟಿಎಂಸಿ ಸಂಸದೆ

ಸಂಸತ್ ನಲ್ಲಿ ನಡೆಯುತ್ತಿರುವ ಅವಿಶ್ವಾಸ ನಿರ್ಣಯದ ವೇಳೆ ತೃಣಮೂಲ ಕಾಂಗ್ರೆಸ್ ಸಂಸದೆ ಕಾಕೋಲಿ ಗೋಶ್ ದಸ್ತಿದಾರ್‌ ಅವರು ಮಣಿಪುರ ಹಿಂಸಾಚಾರ ಕುರಿತಂತೆ ಕೆಲವು ಭಯಾನಕತೆಯನ್ನು ವಿವರಿಸಿದ್ದಾರೆ.

ನವದೆಹಲಿ: ಸಂಸತ್ ನಲ್ಲಿ ನಡೆಯುತ್ತಿರುವ ಅವಿಶ್ವಾಸ ನಿರ್ಣಯದ ವೇಳೆ ತೃಣಮೂಲ ಕಾಂಗ್ರೆಸ್ ಸಂಸದೆ ಕಾಕೋಲಿ ಗೋಶ್ ದಸ್ತಿದಾರ್‌ ಅವರು ಮಣಿಪುರ ಹಿಂಸಾಚಾರ ಕುರಿತಂತೆ ಕೆಲವು ಭಯಾನಕತೆಯನ್ನು ವಿವರಿಸಿದ್ದಾರೆ.

ಹಿಂಸಾಚಾರ ಪೀಡಿತ ಗುಡ್ಡಗಾಡು ರಾಜ್ಯ ಮಣಿಪುರಕ್ಕೆ ಹೋಗಿದ್ದ ವಿರೋಧ ಪಕ್ಷಗಳ ನಿಯೋಗದ ಭಾಗವಾಗಿದ್ದ ದಸ್ತಿದಾರ್, ಇಬ್ಬರು ಹುಡುಗಿಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿದ ಇತ್ತೀಚಿನ ವೀಡಿಯೊದ ಭೀಕರವಾಗಿತ್ತು ಎಂದು ಹೇಳಿದ್ದಾರೆ.

ಶಿರಚ್ಛೇದದ ಇನ್ನೂ ಅನೇಕ ಘಟನೆಗಳಿವೆ. ಹೆಣ್ಣುಮಕ್ಕಳ ಕೂದಲಿನಿಂದ ಹಿಡಿದು ಅವರ ಕುತ್ತಿಗೆಯನ್ನು ಸೀಳುವ ವೀಡಿಯೊಗಳನ್ನು ನಾವು ನೋಡಿದ್ದೇವೆ. ಇಬ್ಬರು ಹುಡುಗಿಯರು 2-3 ದಿನಗಳಿಂದ ಆಹಾರ ಮತ್ತು ನೀರು ಇಲ್ಲದೆ ಕಾರ್ ವಾಶ್‌ನಲ್ಲಿ ಅಡಗಿಕೊಂಡಿದ್ದರು. ಅವರು ಭಯೋತ್ಪಾದಕರಿಂದ ಅಡಗಿಕೊಂಡಿದ್ದರು. ಆದರೆ ದುರದೃಷ್ಟವಶಾತ್ ಅವರನ್ನು ಹೊರಗೆಳೆದು ಸಾಮೂಹಿಕ ಅತ್ಯಾಚಾರ ನಡೆಸಲಾಯಿತು ಎಂದು ಹೇಳಿದರು.

ನರೇಂದ್ರ ಮೋದಿ ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ ದಸ್ತಿದಾರ್, ಕಳೆದ ಮೂರು ತಿಂಗಳಿನಿಂದ ರಾಜ್ಯದಲ್ಲಿ ನಡೆದಿರುವ ಇಂತಹ ಬಹುತೇಕ ಘಟನೆಗಳನ್ನು ವ್ಯವಸ್ಥಿತವಾಗಿ ಮುಚ್ಚಿಹಾಕಲಾಗಿದೆ ಎಂದರು.

ನಿಯೋಗದ ಸದಸ್ಯರ ಪ್ರಕಾರ ಹಿಂಸಾಚಾರದಲ್ಲಿ ಒಟ್ಟು 179 ಜನರು ಸಾವನ್ನಪ್ಪಿದ್ದಾರೆ ಎಂದು ಅಂದಾಜಿಸಲಾಗಿದೆ. ಆದರೆ ಸ್ಥಳಾಂತರಗೊಂಡವರ ಸಂಖ್ಯೆ 60,000 ಮತ್ತು ಪರಿಹಾರ ಶಿಬಿರಗಳಲ್ಲಿ 40,000 ಎಂದು ಅಂದಾಜಿಸಲಾಗಿದೆ. ಸಾವಿರಾರು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ವರದಿಯಾಗಿದೆ.

"ಮಣಿಪುರದ ಸಾಮಾನ್ಯ ಜನರು ಎಕೆ 47 ಮತ್ತು ಗ್ರೆನೇಡ್‌ಗಳು, ಸ್ವಯಂ-ಲೋಡಿಂಗ್ ರೈಫಲ್‌ಗಳಂತಹ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೇಗೆ ಪಡೆಯುತ್ತಾರೆ. 

ಅಂತಹ ಆಯುಧಗಳು ಈಗ ಉಚಿತವಾಗಿ ಲಭ್ಯವಿದೆಯಾ. ಅವು ಈಶಾನ್ಯದತ್ತ ಹೋಗುತ್ತಿವೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT