ಪ್ರಾತಿನಿಧಿಕ ಚಿತ್ರ 
ದೇಶ

ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದ ದಿನವೇ ಮತ್ತೊಬ್ಬ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ!

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ದಿನವಾದ ಮೇ 3 ರಂದೇ ಚುರಾಚಂದ್‌ಪುರ ಜಿಲ್ಲೆಯಲ್ಲಿ ಅಪರಿಚಿತ ಕುಕಿ ದುಷ್ಕರ್ಮಿಗಳು ತನ್ನ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿ 37 ವರ್ಷದ ವಿವಾಹಿತ ಮೈತೇಯಿ ಸಮುದಾಯದ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. 

ಗುವಾಹಟಿ: ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ದಿನವಾದ ಮೇ 3 ರಂದೇ ಚುರಾಚಂದ್‌ಪುರ ಜಿಲ್ಲೆಯಲ್ಲಿ ಅಪರಿಚಿತ ಕುಕಿ ದುಷ್ಕರ್ಮಿಗಳು ತನ್ನ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿ 37 ವರ್ಷದ ವಿವಾಹಿತ ಮೈತೇಯಿ ಸಮುದಾಯದ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. 

ಆಗಸ್ಟ್ 9 ರ (ಬುಧವಾರ) ಸಂಜೆ 4.30ಕ್ಕೆ ಬಿಷ್ಣುಪುರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ಎಫ್‌ಐಆರ್ ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆದರೆ, ಆಪಾದಿತ ಅಪರಾಧದ ಸ್ಥಳವು ಚುರಾಚಂದ್‌ಪುರ ಜಿಲ್ಲೆಯಲ್ಲಿರುವುದರಿಂದ, ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಚುರಾಚಂದ್‌ಪುರದ ಮಹಿಳಾ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.

ಎಫ್ಐಆರ್ ಪ್ರಕಾರ, ಐಪಿಸಿ ಸೆಕ್ಷನ್ 376D (ಗ್ಯಾಂಗ್ ರೇಪ್), 354 (ಮಹಿಳೆ ಮೇಲೆ ಹಲ್ಲೆ ಅಥವಾ ಕ್ರಿಮಿನಲ್ ಬಲ), 120B (ಅಪರಾಧ ಪಿತೂರಿ) ಮತ್ತು 34 (ಸಾಮಾನ್ಯ ಉದ್ದೇಶಕ್ಕಾಗಿ ಹಲವಾರು ವ್ಯಕ್ತಿಗಳು ಮಾಡಿದ ಕೃತ್ಯಗಳು) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಮಹಿಳೆಯ ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಗಿದೆ.

ಬಹುಸಂಖ್ಯಾತ ಕುಕಿ ಸಮುದಾಯದವರೇ ಇರು ಚುರಾಚಂದ್‌ಪುರದಲ್ಲಿ ನೆಲೆಸಿದ್ದ ಸಾವಿರಾರು ಮೈತೇಯಿ ಸಮುದಾಯದ ಕುಟುಂಬಗಳು ಹಿಂಸಾಚಾರದ ಹಿನ್ನೆಲೆಯಲ್ಲಿ ಇಂಫಾಲ್ ಕಣಿವೆಗೆ ಪಲಾಯನಗೈದಿದ್ದರು. ಅವರಲ್ಲಿ ಹಲವರು ಈಗ ಬಿಷ್ಣುಪುರ ಜಿಲ್ಲೆಯ ವಿವಿಧ ಪರಿಹಾರ ಶಿಬಿರಗಳಲ್ಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT