ರಾಹುಲ್ ಗಾಂಧಿ ಭಾಷಣ 
ದೇಶ

ಸಂಸತ್ತಿನಲ್ಲಿ 'ಭಾರತ್ ಮಾತಾ ಕಿ ಹತ್ಯಾ' ಎಂದು ಹೇಳಬಾರದು: ಕೇಂದ್ರ ಸರ್ಕಾರ

ಅಧೀರ್ ರಂಜನ್ ಚೌಧರಿ ಸರ್ಕಾರದ ಕಡೆಗೆ ಬೊಟ್ಟು ಮಾಡುವ ಕಡೆಗೆ ಮೊದಲು ಸ್ಪೀಕರ್ ಮತ್ತು ಸಂಸದ್ ಟಿವಿಯ ಪಾತ್ರವನ್ನು ಅರ್ಥಮಾಡಿಕೊಳ್ಳಬೇಕು. ನಿನ್ನೆ ರಾಹುಲ್ ಗಾಂಧಿ ಭಾಷಣ ಮಾಡುವಾಗ ಎಂದಿಗೂ ವಿಚಲಿತರಾಗಲಿಲ್ಲ, ಆದರೆ 'ಭಾರತ್ ಮಾತಾ ಕಿ ಹತ್ಯೆ' ಎಂಬ ಪದವನ್ನು ಸಂಸತ್ತಿನಲ್ಲಿ ಬಳಸುವಂತಿಲ್ಲ ಎಂದು ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘಾವಾಲ್ ಪ್ರತಿಕ್ರಿಯಿಸಿದ್ದಾರೆ. 

ನವದೆಹಲಿ: ರಾಹುಲ್ ಗಾಂಧಿ ಸದನದಲ್ಲಿ ನಿನ್ನೆ ನೀಡಿರುವ ಹೇಳಿಕೆ ಕುರಿತಂತೆ ಪ್ರತಿಕ್ರಿಯಿಸಿರುವ ಲೋಕಸಭೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ಅಸಂಸದೀಯ ಪದವಾಗಿದ್ದರೆ ಅದನ್ನು ತೆಗೆದುಹಾಕಲು ಅವಕಾಶವಿದೆ, ರಾಹುಲ್ ಗಾಂಧಿ ಅಂತಹ ಯಾವುದೇ ಅಸಂಸದೀಯ ಹೇಳಿಕೆ ನೀಡಿದ್ದಾರೆ ಎಂದು ನನಗೆ ಅನಿಸುವುದಿಲ್ಲ. ಭಾರತ ಮಾತೆಯನ್ನು ಅವಮಾನಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಈ ವಿಷಯವನ್ನು ಲೋಕಸಭೆ ಸ್ಪೀಕರ್‌ಗೆ ತಿಳಿಸಿದ್ದೇನೆ ಮತ್ತು ಅವರು ಈ ವಿಷಯವನ್ನು ಪರಿಶೀಲಿಸುವುದಾಗಿ ಭರವಸೆ ನೀಡಿದ್ದಾರೆ ಎಂದಿದ್ದಾರೆ.

ಅಧೀರ್ ರಂಜನ್ ಚೌಧರಿ ಸರ್ಕಾರದ ಕಡೆಗೆ ಬೊಟ್ಟು ಮಾಡುವ ಕಡೆಗೆ ಮೊದಲು ಸ್ಪೀಕರ್ ಮತ್ತು ಸಂಸದ್ ಟಿವಿಯ ಪಾತ್ರವನ್ನು ಅರ್ಥಮಾಡಿಕೊಳ್ಳಬೇಕು. ನಿನ್ನೆ ರಾಹುಲ್ ಗಾಂಧಿ ಭಾಷಣ ಮಾಡುವಾಗ ಎಂದಿಗೂ ವಿಚಲಿತರಾಗಲಿಲ್ಲ, ಆದರೆ 'ಭಾರತ್ ಮಾತಾ ಕಿ ಹತ್ಯೆ' ಎಂಬ ಪದವನ್ನು ಸಂಸತ್ತಿನಲ್ಲಿ ಬಳಸುವಂತಿಲ್ಲ ಎಂದು ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘಾವಾಲ್ ಪ್ರತಿಕ್ರಿಯಿಸಿದ್ದಾರೆ. 

ಮಣಿಪುರದ ಹಿಂಸಾಚಾರವನ್ನು ನಿಭಾಯಿಸಿದ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಹರಿಹಾಯ್ದರು. ಬಿಜೆಪಿ ರಾಜಕೀಯ ಆ  ರಾಜ್ಯದಲ್ಲಿ 'ಭಾರತ ಮಾತೆಯನ್ನು ಕೊಂದಿದೆ' ಎಂದು ಆರೋಪಿಸಿದಾಗ ಕೇಂದ್ರ ಸಚಿವರಾದ ಅಮಿತ್ ಶಾ ಮತ್ತು ಸ್ಮೃತಿ ಅವರಿಂದ ತೀವ್ರ ಪ್ರತಿಕ್ರಿಯೆ ವ್ಯಕ್ತವಾಯಿತು. 

ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯ ಎರಡನೇ ದಿನದ ಚರ್ಚೆಯ ಸಂದರ್ಭದಲ್ಲಿ ಲೋಕಸಭೆಯು ಮಾತಿನ ಚಕಮಕಿಗೆ ಸಾಕ್ಷಿಯಾಯಿತು. ಆಡಳಿತ ಪಕ್ಷದ ಸದಸ್ಯರು ಭಾರತದ 'ರಕ್ಷಕರಲ್ಲ' ಎಂದು ಗಾಂಧಿ ಹೇಳಿದಾಗ, ಗೃಹ ಸಚಿವ ಶಾ ಮಣಿಪುರದಲ್ಲಿ ಶಾಂತಿಗಾಗಿ ಮನವಿ ಮಾಡಿದರು ಅಲ್ಲದೇ, ಜನಾಂಗೀಯ ಹಿಂಸಾಚಾರ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಮೈಟೈ ಸಮುದಾಯಗಳೊಂದಿಗೆ ಕೇಂದ್ರ ಸರ್ಕಾರ ಮಾತುಕತೆ ನಡೆಸುತ್ತಿರುವುದಾಗಿ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT