ಉಗ್ರಗಾಮಿ ವೇಷಧಾರಿಗೆ ಕಪಾಳಮೋಕ್ಷ 
ದೇಶ

ಮಹಾರಾಷ್ಟ್ರ: ಅಣುಕು ಕಾರ್ಯಾಚರಣೆ ವೇಳೆ ಉಗ್ರಗಾಮಿ ವೇಷಧಾರಿ ಪೊಲೀಸ್ ಅಧಿಕಾರಿ ಕಪಾಳಕ್ಕೆ ಹೊಡೆದ ವ್ಯಕ್ತಿ, ವಿಡಿಯೋ ವೈರಲ್!

ಉಗ್ರದಾಳಿ ಅಣುಕು ಕಾರ್ಯಾಚರಣೆ ವೇಳೆ ಉಗ್ರಗಾಮಿಯ ವೇಷ ಧರಿಸಿದ್ದ ಪೊಲೀಸ್ ಅಧಿಕಾರಿಗೆ ವ್ಯಕ್ತಿಯೊಬ್ಬ ಕಪಾಳಮೋಕ್ಷ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಧುಲೆ: ಉಗ್ರದಾಳಿ ಅಣುಕು ಕಾರ್ಯಾಚರಣೆ ವೇಳೆ ಉಗ್ರಗಾಮಿಯ ವೇಷ ಧರಿಸಿದ್ದ ಪೊಲೀಸ್ ಅಧಿಕಾರಿಗೆ ವ್ಯಕ್ತಿಯೊಬ್ಬ ಕಪಾಳಮೋಕ್ಷ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಮಹಾರಾಷ್ಟ್ರದ ಧುಲೆ ನಗರದಲ್ಲಿ ಪೊಲೀಸ್ ಇಲಾಖೆ ಆಯೋಜಿಸಿದ್ದ ಅಣಕು ಕಾರ್ಯಾಚರಣೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ‘ಉಗ್ರನ ವೇಷ’ ಧರಿಸಿದ್ದ ಪೊಲೀಸ್ ಅಧಿಕಾರಿಯ ಕೆನ್ನೆಗೆ ಬಾರಿಸಿರುವ ಘಟನೆ ನಡೆದಿದ್ದು, ಅದು ಅಣಕು ಕಾರ್ಯಾಚರಣೆ ಎಂಬ ಸಂಗತಿ ತಿಳಿಯದೆ ಆ ವ್ಯಕ್ತಿ ಅಂತಹ ಕೃತ್ಯ ನಡೆಸಿದ್ದರಿಂದಾಗಿ ಆತನ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ಬಿಟ್ಟು ಕಳಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಆಂಗ್ಲ ಪತ್ರಿಕೆಯೊಂದು ವರದಿ ಮಾಡಿದ್ದು, ಈ ಸಂಬಂಧ ಸ್ಥಳೀಯರೊಬ್ಬರು ಕಪಾಳಮೋಕ್ಷದ ವಿಡಿಯೋವನ್ನು ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ. ಈ ವಿಡಿಯೋ ಇದೀಗ ವೈರಲ್ ಆಗಿದೆ. 

ಅಣುಕು ಕಾರ್ಯಾಚರಣೆ ವೇಳೆ ಉಗ್ರರ ವೇಷಧಾರಿ ಪೊಲೀಸರು ಧುಲೆ ನಗರದ ದೇವಾಲಯವೊಂದರಲ್ಲಿ ದಾಳಿ ಮಾಡಿದ್ದು, ಈ ವೇಳೆ ದೇವಾಲಯದಲ್ಲಿದ್ದ ವ್ಯಕ್ತಿಯ ಮಕ್ಕಳು ಭಯದಿಂದ ಅಳತೊಡಗಿದ್ದಾರೆ. ಈ ವೇಳೆ ಆಕ್ರೋಶಗೊಂಡ ವ್ಯಕ್ತಿ ಉಗ್ರಗಾಮಿ ವೇಷಧಾರಿ ಅಧಿಕಾರಿ ಬಳಿ ಹೋಗಿ ಕಪಾಳಕ್ಕೆ ಹೊಡೆದಿದ್ದಾನೆ. ಕೂಡಲೇ ಸ್ಥಳದಲ್ಲಿ ಮಫ್ತಿಯಲ್ಲಿದ್ದ ಪೊಲೀಸರು ಆತನನ್ನು ವಶಕ್ಕೆ ಪಡೆದು ಇದು ಅಣುಕು ಕಾರ್ಯಾಚರಣೆ ಎಂದು ಸಮಾಧಾನ ಪಡಿಸಿದ್ದಾರೆ.

ಇನ್ನು ಘಟನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿರುವ ಸ್ಥಳೀಯ ಅಪರಾಧ ವಿಭಾಗದ ಪೊಲೀಸ್ ಇನ್ಸ್ ಪೆಕ್ಟರ್ ಹೇಮಂತ್ ಪಾಟೀಲ್, ಧುಲೆ ನಗರದ ದೇವಾಲಯವೊಂದರಲ್ಲಿ ಉಗ್ರಗಾಮಿ ನಿಗ್ರಹ ಪ್ರತಿಸ್ಪಂದನಾ ಅಣಕು ಕಾರ್ಯಾಚರಣೆಯಲ್ಲಿ ಸುಮಾರು 80-90ಕ್ಕಿಂತ ಹೆಚ್ಚು ಪೊಲೀಸ್ ಸಿಬ್ಬಂದಿಗಳು ಭಾಗವಹಿಸಿದ್ದರು. ಅಣಕು ಕಾರ್ಯಾಚರಣೆಯ ಸಂದರ್ಭದಲ್ಲಿ ಸದ್ಯ ತನ್ನ ವರ್ತನೆಯಿಂದ ಪ್ರಶ್ನೆಗೊಳಗಾಗಿರುವ ವ್ಯಕ್ತಿಯೂ ತನ್ನ ಕುಟುಂಬದ ಸದಸ್ಯರೊಂದಿಗೆ ದೇವಾಲಯದಲ್ಲಿ ಉಪಸ್ಥಿತನಿದ್ದ. ಅಣಕು ಕಾರ್ಯಾಚರಣೆಯ ಸಂದರ್ಭದಲ್ಲಿ ಉಗ್ರಗಾಮಿಯನ್ನು ಸೆರೆ ಹಿಡಿಯುವ ಕಾರ್ಯಾಚರಣೆಯನ್ನು ಪೊಲೀಸರು ಪ್ರಾರಂಭಿಸುತ್ತಿದ್ದಂತೆಯೆ, ಪೊಲೀಸರನ್ನು ಎದುರುಗೊಂಡಿರುವ ಆ ವ್ಯಕ್ತಿಯು, ಉಗ್ರನ ವೇಷ ಧರಿಸಿದ್ದ ಪೊಲೀಸ್ ಅಧಿಕಾರಿಯ ಕೆನ್ನೆಗೆ ಬಾರಿಸಿ, “ಸಣ್ಣ ಮಕ್ಕಳು ಹೆದರಿಕೊಂಡಿದ್ದಾರೆ ಮತ್ತು ಅಳಲು ಪ್ರಾರಂಭಿಸಿದ್ದಾರೆ ಎಂಬುದು ನಿನಗೆ ಅರ್ಥವಾಗುತ್ತಿಲ್ಲವೆ?” ಎಂದು ಪ್ರಶ್ನಿಸಿದ್ದಾನೆ ಎಂದಿದ್ದಾರೆ.

ಕೂಡಲೇ ಆ ವ್ಯಕ್ತಿಯನ್ನು ವಶಕ್ಕೆ ಪಡೆದಿರುವ ಪೊಲೀಸ್ ಅಧಿಕಾರಿಗಳು, ಅದು ಪೊಲೀಸರ ಅಣಕು ಕಾರ್ಯಾಚರಣೆ ಎಂಬ ಸಂಗತಿಯನ್ನು ಆ ವ್ಯಕ್ತಿಗೆ ವಿವರಿಸಿದ್ದಾರೆ. “ನಂತರ ಆ ವ್ಯಕ್ತಿ ಪೊಲೀಸರ ಕ್ಷಮೆ ಯಾಚಿಸಿದ ಮತ್ತು ಆ ವ್ಯಕ್ತಿಯ ವಿರುದ್ಧ ಯಾವುದೇ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳುವುದಿಲ್ಲ” ಎಂದು ಪೊಲೀಸ್ ಇನ್ಸ್ ಪೆಕ್ಟರ್ ಹೇಮಂತ್ ಪಾಟೀಲ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT