ರಾಜ್ಯಸಭೆಯಲ್ಲಿ ಮಾತನಾಡಿದ ಖರ್ಗೆ 
ದೇಶ

ಮಣಿಪುರ ವಿಚಾರವಾಗಿ ಗದ್ದಲ, ರಾಜ್ಯಸಭಾ ಕಲಾಪ ಮಧ್ಯಾಹ್ನ 2 ಗಂಟೆಗೆ ಮುಂದೂಡಿಕೆ

ಮಣಿಪುರ ವಿಚಾರವಾಗಿ ರಾಜ್ಯಸಭೆಯಲ್ಲಿ ಇಂದು ಮತ್ತೆ ಗದ್ದಲವೇರ್ಪಟ್ಟಿದ್ದರಿಂದ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

ನವದೆಹಲಿ: ಮಣಿಪುರ ವಿಚಾರವಾಗಿ ರಾಜ್ಯಸಭೆಯಲ್ಲಿ ಇಂದು ಮತ್ತೆ ಗದ್ದಲವೇರ್ಪಟ್ಟಿದ್ದರಿಂದ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

ಸದನ ಸಮಾವೇಶಗೊಳ್ಳುತ್ತಿದ್ದಂತೆಯೇ ವಿರೋಧ ಪಕ್ಷಗಳ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು, ಮಣಿಪುರ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಉಪಸ್ಥಿತಿಯೊಂದಿಗೆ ನಿಯಮ 167 ಅಡಿಯಲ್ಲಿ ಚರ್ಚೆ ನಡೆಯಬೇಕೆಂದು ಸಭಾಪತಿಯನ್ನು ಒತ್ತಾಯಿಸಿದರು.

ಆಡಳಿತಾರೂಢ ಪಕ್ಷದ ಸದಸ್ಯರು ಖರ್ಗೆ ಅವರ ಬೇಡಿಕೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು. ಇದರಿಂದ ಆಕ್ರೋಶಗೊಂಡ ಖರ್ಗೆ, ಪ್ರಧಾನಿ ಮೋದಿ ಸದನಕ್ಕೆ ಬಂದರೆ ಏನಾಗಬಹುದು ಅವರು ಪರಮಾತ್ಮರೇ? ಅವರು ದೇವರಲ್ಲ ಎಂದರು. "ಪ್ರಧಾನಿ ಮೋದಿ ಬಗ್ಗೆ ಖರ್ಗೆಯವರ ಹೇಳಿಕೆಯ ನಂತರ ಆಡಳಿತ ಪಕ್ಷದ ಸದಸ್ಯರು ಘೋಷಣೆ ಕೂಗುತ್ತಾ ಪ್ರತಿಭಟನೆ ತೀವ್ರಗೊಳಿಸಿದರು. ಈ ಗದ್ಧಲದ ನಡುವೆ ಸಭಾಪತಿ ಜಗದೀಪ್ ಧನಕರ್ ಅವರು ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಿದರು.

ಲೋಕಸಭೆಯಲ್ಲಿಯೂ ಇದೇ ವಿಚಾರವಾಗಿ ಗದ್ದಲವೇರ್ಪಟ್ಟು ಮಧ್ಯಾಹ್ನ 12 ಗಂಟೆಯವರೆಗೂ ಕಲಾಪವನ್ನು ಮುಂದೂಡಲಾಗಿತ್ತು. ತದನಂತರ ಕಲಾಪ ಮತ್ತೆ ಸಮಾವೇಶಗೊಂಡಿದ್ದು, ಅವಿಶ್ವಾಸ ನಿರ್ಣಯ ಮೇಲಿನ ಚರ್ಚೆ ಮುಂದುವರೆದಿದೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಜೊತೆ ತಾಯಿ ಸ್ಥದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ