ರಾಜ್ಯಸಭೆಯಲ್ಲಿ ಮಾತನಾಡಿದ ಖರ್ಗೆ 
ದೇಶ

ಮಣಿಪುರ ವಿಚಾರವಾಗಿ ಗದ್ದಲ, ರಾಜ್ಯಸಭಾ ಕಲಾಪ ಮಧ್ಯಾಹ್ನ 2 ಗಂಟೆಗೆ ಮುಂದೂಡಿಕೆ

ಮಣಿಪುರ ವಿಚಾರವಾಗಿ ರಾಜ್ಯಸಭೆಯಲ್ಲಿ ಇಂದು ಮತ್ತೆ ಗದ್ದಲವೇರ್ಪಟ್ಟಿದ್ದರಿಂದ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

ನವದೆಹಲಿ: ಮಣಿಪುರ ವಿಚಾರವಾಗಿ ರಾಜ್ಯಸಭೆಯಲ್ಲಿ ಇಂದು ಮತ್ತೆ ಗದ್ದಲವೇರ್ಪಟ್ಟಿದ್ದರಿಂದ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

ಸದನ ಸಮಾವೇಶಗೊಳ್ಳುತ್ತಿದ್ದಂತೆಯೇ ವಿರೋಧ ಪಕ್ಷಗಳ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು, ಮಣಿಪುರ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಉಪಸ್ಥಿತಿಯೊಂದಿಗೆ ನಿಯಮ 167 ಅಡಿಯಲ್ಲಿ ಚರ್ಚೆ ನಡೆಯಬೇಕೆಂದು ಸಭಾಪತಿಯನ್ನು ಒತ್ತಾಯಿಸಿದರು.

ಆಡಳಿತಾರೂಢ ಪಕ್ಷದ ಸದಸ್ಯರು ಖರ್ಗೆ ಅವರ ಬೇಡಿಕೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು. ಇದರಿಂದ ಆಕ್ರೋಶಗೊಂಡ ಖರ್ಗೆ, ಪ್ರಧಾನಿ ಮೋದಿ ಸದನಕ್ಕೆ ಬಂದರೆ ಏನಾಗಬಹುದು ಅವರು ಪರಮಾತ್ಮರೇ? ಅವರು ದೇವರಲ್ಲ ಎಂದರು. "ಪ್ರಧಾನಿ ಮೋದಿ ಬಗ್ಗೆ ಖರ್ಗೆಯವರ ಹೇಳಿಕೆಯ ನಂತರ ಆಡಳಿತ ಪಕ್ಷದ ಸದಸ್ಯರು ಘೋಷಣೆ ಕೂಗುತ್ತಾ ಪ್ರತಿಭಟನೆ ತೀವ್ರಗೊಳಿಸಿದರು. ಈ ಗದ್ಧಲದ ನಡುವೆ ಸಭಾಪತಿ ಜಗದೀಪ್ ಧನಕರ್ ಅವರು ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಿದರು.

ಲೋಕಸಭೆಯಲ್ಲಿಯೂ ಇದೇ ವಿಚಾರವಾಗಿ ಗದ್ದಲವೇರ್ಪಟ್ಟು ಮಧ್ಯಾಹ್ನ 12 ಗಂಟೆಯವರೆಗೂ ಕಲಾಪವನ್ನು ಮುಂದೂಡಲಾಗಿತ್ತು. ತದನಂತರ ಕಲಾಪ ಮತ್ತೆ ಸಮಾವೇಶಗೊಂಡಿದ್ದು, ಅವಿಶ್ವಾಸ ನಿರ್ಣಯ ಮೇಲಿನ ಚರ್ಚೆ ಮುಂದುವರೆದಿದೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT