ನೈಜರ್ ನಲ್ಲಿ ಸೇನಾ ಸಂಘರ್ಷ 
ದೇಶ

'ಆದಷ್ಟು ಬೇಗ ದೇಶ ತೊರೆಯಿರಿ': ನೈಜರ್ ನಲ್ಲಿರುವ ಭಾರತೀಯರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ

ನೈಜರ್ ನಲ್ಲಿ ಆಂತರಿಕ ಸಂಘರ್ಷ ಉಲ್ಬಣಗೊಂಡಿರುವ ಹಿನ್ನಲೆಯಲ್ಲಿ ತತ್ ಕ್ಷಣವೇ ಆ ದೇಶ ತೊರೆಯುವಂತೆ ಅಲ್ಲಿರುವ ಭಾರತೀಯರಿಗೆ ಕೇಂದ್ರ ಸರ್ಕಾರ ಶುಕ್ರವಾರ ಎಚ್ಚರಿಕೆ ನೀಡಿದೆ.

ನವದೆಹಲಿ: ನೈಜರ್ ನಲ್ಲಿ ಆಂತರಿಕ ಸಂಘರ್ಷ ಉಲ್ಬಣಗೊಂಡಿರುವ ಹಿನ್ನಲೆಯಲ್ಲಿ ತತ್ ಕ್ಷಣವೇ ಆ ದೇಶ ತೊರೆಯುವಂತೆ ಅಲ್ಲಿರುವ ಭಾರತೀಯರಿಗೆ ಕೇಂದ್ರ ಸರ್ಕಾರ ಶುಕ್ರವಾರ ಎಚ್ಚರಿಕೆ ನೀಡಿದೆ.

ನೈಜರ್ ದೇಶದಲ್ಲಿರುವ ಭಾರತೀಯ ನಾಗರೀಕರಿಗ ತಕ್ಷಣವೇ ದೇಶ ತೊರೆಯುವಂತೆ ಭಾರತ ವಿದೇಶಾಂದ ಸಚಿವಾಲಯ ಸೂಚನೆ ನೀಡಿದ್ದು, ಇಷ್ಟೇ ಅಲ್ಲ ನೈಜರ್ ದೇಶಕ್ಕೆ ಪ್ರಯಾಣ ಮುಂದೂಡುವಂತೆ ಸೂಚಿಸಿದೆ. ರಿಪಬ್ಲಿಕ್ ಆಫ್ ನಿಜರ್‌ನಲ್ಲಿ ಸಂಘರ್ಷ ವ್ಯಾಪಕವಾಗಿದ್ದು, ಪರಿಸ್ಥಿತಿ ಕೈಮೀರುತ್ತಿದ್ದು, ಭಾರತೀಯರು ನೈಜರ್ ದೇಶ ಪ್ರಯಾಣವನ್ನು ಮುಂದೂಡುವಂತೆ ಸೂಚಿಸಲಾಗಿದೆ.

ನೈಜರ್ ದೇಶದ ಪರಿಸ್ಥಿತಿಯನ್ನು ಭಾರತ ಸೂಕ್ಷ್ಮವಾಗಿ ಗಮನಿಸುತ್ತಿದೆ. ಸದ್ಯ ನೈಜರ್ ದೇಶದ ವಿಮಾನಯಾನ ಸೇವೆಗಳು ಸ್ಥಗಿತಗೊಂಡಿದೆ. ಪರಿಸ್ಥಿತಿ ಕೈಮೀರುತ್ತಿದೆ. ಹೀಗಾಗಿ ನೈಜರ್ ದೇಶದಲ್ಲಿರುವ ಭಾರತೀಯ ನಾಗರೀಕರು ತಕ್ಷಣವೇ ನೈಜರ್ ದೇಶ ತೊರೆಯಬೇಕು.ಭಾರತೀ ನಾಗರೀಕರ ಸುರಕ್ಷತೆಗಾಗಿ ದೇಶ ತೊರೆಯುವುದು ಸದ್ಯಕ್ಕಿರುವ ಮಾರ್ಗ. ನೈಜರ್ ದೇಶದಲ್ಲಿರುವ ಭಾರತೀಯರ ರಾಯಭಾರ ಕಚೇರಿ ನಿಮಗೆ ನರೆವು ನೀಡಲಿದೆ.

ಇದುವರೆಗೆ ರಾಯಭಾರ ಕಚೇರಿಯಲ್ಲಿ ನೋಂದಣಿ ಮಾಡಿಕೊಳ್ಳದೇ ಇರುವ ನಾಗರೀಕರು ಆನ್‌ಲೈನ್ ಮೂಲಕ ಅಥವಾ ದೂರವಾಣಿ ಮೂಲಕ ಮಾಡಿಕೊಳ್ಳಿ. ನೈಜರ್‌ನ ಭಾರತ ರಾಯಭಾರ ಕಚೇರಿ ಎಲ್ಲಾ ನೆರವು ನೀಡಲಿದೆ. ಇನ್ನು ನೈಜರ್ ದೇಶಕ್ಕೆ ಪ್ರಯಾಣ ಬೆಳೆಸುವ ಭಾರತೀಯರು ಸದ್ಯಕ್ಕೆ ಮುಂದೂಡುವುದು ಉತ್ತಮ. ಪರಿಸ್ಥಿತಿ ಸುಧಾರಿಸಿದ ಬಳಿಕ ಪ್ರಯಾಣ ಮುಂದುವರಿಸಿ ಎಂದು ವಿದೇಶಾಂಗ ಇಲಾಖೆ ವಕ್ತಾರ ಅರಿಂದಮ್ ಬಗ್ಚಿ ಹೇಳಿದ್ದಾರೆ.

ನೈಜರ್ ನಲ್ಲಿ ಸೇನಾ ಸಂಘರ್ಷ
ನೈಜರ್ ದೇಶದಲ್ಲಿ ಪರಿಸ್ಥಿತಿ ಶೋಚನೀಯವಾಗಿದೆ. ಚುನಾಯಿತ ಅಧ್ಯಕ್ಷ ಮೊಹಮ್ಮದ್ ಬಜೌಮ್ ಬಂಧಿಸಿರುವ ನೈಜರ್ ಸೇನಾ ಪಡೆ ತನ್ನ ವಶದಲ್ಲಿ ಇಟ್ಟುಕೊಂಡಿದೆ. ಇತ್ತ ನೈಜರ್ ಸೇನಾ ಪಡೆಗೆ ಆಫ್ರಿಕನ್ ರಾಷ್ಟ್ರಗಳು ಹಲವು ನಿರ್ಬಂಧ ವಿಧಿಸಿದೆ. ಈ ಬೆಳವಣಿಗೆಗಳಿಂದ ನೈಜರ್ ದೇಶದಲ್ಲಿ ದಂಗೆ ಶುರುವಾಗಿದೆ. ಅರಾಜಕತೆ ಸೃಷ್ಟಿಯಾಗಿದೆ. ಪರಿಸ್ಥಿತಿ ಗಂಭೀರವಾಗುತ್ತಿರುವ ಹಿನ್ನಲೆಯಲ್ಲಿ ಭಾರತೀಯ ವಿದೇಶಾಂಗ ಇಲಾಖೆ ತನ್ನ ನಾಗರೀಕರಿಗೆ ಮಹತ್ವದ ಸೂಚನೆ ನೀಡಿದೆ. ಈಗಾಗಲೇ ನೈಜರ್ ದೇಶದ ವಿಮಾನ ಸೇವೆಗಳು ಸ್ಥಗಿತಗೊಂಡಿದೆ. 

ನೈಜರ್ ದೇಶದ ಚುನಾಯಿತ ಸರ್ಕಾರವನ್ನೇ ಸೇನೆ ಪತನಗೊಳಿಸಿದೆ. ಇತ್ತ ನೈಜರ್ ಸೇನಾ ಕಮಾಂಡರ್ ಎಬಿ ಟಿಯಾನಿ ನೀಡಿದ ಘೋಷಣೆ ಆಫ್ರಿಕನ್ ದೇಶಗಳನ್ನು ಮತ್ತಷ್ಟು ಕೆರಳಿಸಿದೆ. ತಾನೇ ನೈಜರ್ ದೇಶದ ಅಧ್ಯಕ್ಷ ಎಂದು ಟಿಯಾನಿ ಘೋಷಣೆ ಮಾಡಿದ್ದಾರೆ. ಇತ್ತ ನೈಜೀರಿಯಾ ಸೇರಿದಂತೆ 15 ಆಫ್ರಿಕನ್ ರಾಷ್ಟ್ರಗಳು ತುರ್ತು ಸಭೆ ನಡೆಸಿದೆ. ನೈಜರ್ ದೇಶದ ಪರಿಸ್ಥಿತಿ ಅವಲೋಕಿಸಿದೆ. ಇಷ್ಟೇ ಅಲ್ಲ ವಶದಲ್ಲಿಟ್ಟುಕೊಂಡಿರುವ ಪದಚ್ಯುತ ಅಧ್ಯಕ್ಷ ಮೊಹಮ್ಮದ್ ಬಜೌಮ್ ಅವರನ್ನು ತಕ್ಷಣವೇ ಒಪ್ಪಿಸುವಂತೆ ಸೂಚಿಸಿದೆ.

ಆದರೆ ಯಾವುದೇ ಸೂಚನೆಗೆ ಬಗ್ಗದ ನೈಜರ್ ಸೇನೆ ದಾಳಿ ಆರಂಭಿಸಿದೆ. ನೈಜರ್ ದೇಶದ ಜೊತೆಗಿನ ವಾಣಿಜ್ಯ ಹಾಗೂ ಇತರ ವ್ಯವಹಾರ ಸಂಬಂಧವನ್ನು ಆಫ್ರಿಕನ್ ದೇಶಗಳು ಕಡಿತಗೊಳಿಸಿದೆ. ವಶದಲ್ಲಿಟ್ಟುಕೊಂಡಿರುವ ಚುನಾಯಿತ ಅಧ್ಯಕ್ಷ ಮೊಹಮ್ಮದ್ ಬಜೌಮ್ ಅವರನ್ನು ಆಫ್ರಿಕನ್ ಒಕ್ಕೂಟಕ್ಕೆ ಒಪ್ಪಿಸದಿದ್ದರೆ, ದಾಳಿ ನಡೆಸುವುದಾಗಿ ಆಫ್ರಿಕನ್ ಒಕ್ಕೂಟ ಎಚ್ಚರಿಕೆ ನೀಡಿದೆ. ಇತ್ತ ಆಫ್ರಿಕನ್ ಸೇನಾ ದಾಳಿ ಎದುರಿಸಲು ನೈಜರ್ ದೇಶದ ಸೇನೆ ಕೂಡ ಸಜ್ಜಾಗಿದೆ. ಹೀಗಾಗಿ ನೈಜರ್ ದೇಶದಲ್ಲಿ  ದಂಗೆಯ ಜೊತೆಗೆ ಯುದ್ಧ ನಡೆಯುವ ಎಲ್ಲಾ ಸಾಧ್ಯತೆಗಳು ಗೋಚರಿಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT