ವಿಪಕ್ಷಗಳ ಮಿತ್ರಕೂಟ INDIA 
ದೇಶ

ವಿಪಕ್ಷಗಳ ಮೈತ್ರಿಕೂಟಕ್ಕೆ INDIA ಹೆಸರು; ನಿರ್ಬಂಧ ಕೋರಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ, ಅರ್ಜಿ ವಜಾ

ವಿರೋಧ ಪಕ್ಷಗಳ ಮಿತ್ರಕೂಟಕ್ಕೆ ಇಂಡಿಯಾ ಎಂಬ ಹೆಸರು ನೀಡಿರುವ ಕುರಿತಂತೆ ನಿರ್ಬಂಧ ಕೋರಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ ವ್ಯಕ್ತಪಡಿಸಿದ್ದು, ಅರ್ಜಿಯನ್ನು ವಜಾಗೊಳಿಸಿದೆ.

ನವದೆಹಲಿ: ವಿರೋಧ ಪಕ್ಷಗಳ ಮಿತ್ರಕೂಟಕ್ಕೆ ಇಂಡಿಯಾ ಎಂಬ ಹೆಸರು ನೀಡಿರುವ ಕುರಿತಂತೆ ನಿರ್ಬಂಧ ಕೋರಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ ವ್ಯಕ್ತಪಡಿಸಿದ್ದು, ಅರ್ಜಿಯನ್ನು ವಜಾಗೊಳಿಸಿದೆ.

ವಿರೋಧ ಪಕ್ಷಗಳ ಒಕ್ಕೂಟಕ್ಕೆ ಐಎನ್‌ಡಿಐಎ (INDIA) ಎಂದು ನಾಮಕರಣ ಮಾಡಿದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ (Supreme Court) ನಿರಾಕರಿಸಿದ್ದು, ಚುನಾವಣಾ ನಿಯಮಾವಳಿಗಳನ್ನು ಉಲ್ಲಂಘಿಸಿದ್ದರೆ ಚುನಾವಣಾ ಆಯೋಗಕ್ಕೆ ದೂರು ನೀಡಿ ಎಂದು ಅರ್ಜಿಯನ್ನು ವಜಾಗೊಳಿಸಿದೆ.

26 ರಾಜಕೀಯ ಪಕ್ಷಗಳ ಮೈತ್ರಿಗೆ ನೀಡಿರುವ INDIA ಹೆಸರನ್ನು ನಿರ್ಬಂಧಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ಇಂದು ನ್ಯಾ. ಎಸ್‌ಕೆ ಕೌಲ್ ನೇತೃತ್ವದ ಪೀಠದಲ್ಲಿ ನಡೆಯಿತು. ಈ ವೇಳೆ ಅರ್ಜಿ ಸಲ್ಲಿಸಲು ಯಾರು ನೀವು? ನಿಮ್ಮ ಆಸಕ್ತಿ ಏನು? ಎಂದು ಪೀಠ ಕೇಳಿತು. ಅಲ್ಲದೆ ಚುನಾವಣಾ ನಿಯಮಾವಳಿಗಳನ್ನು ಉಲ್ಲಂಘಿಸಿದ್ದರೆ ಚುನಾವಣಾ ಆಯೋಗಕ್ಕೆ (Election commission) ಹೋಗಿ ದೂರು ನೀಡಿ. ಅದು ಬಿಟ್ಟು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸುವುದು ಸರಿಯಲ್ಲ. ನಿಮಗೆ ಸಂಪೂರ್ಣ ಪ್ರಚಾರ ಬೇಕು ಎಂಬ ಉದ್ದೇಶದಿಂದ ಅರ್ಜಿ ಸಲ್ಲಿಕೆ ಮಾಡಿದ್ದೀರಿ. ಆದರೆ ನಾವು ಇದನ್ನು ಪರಿಗಣಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಚಾಟಿ ಬೀಸಿದೆ.

ಇದಕ್ಕೆ ಅರ್ಜಿದಾರರ ಪರ ವಕೀಲರು ಆಕ್ಷೇಪಿಸಿದ್ದು, ಪ್ರಚಾರ ಬೇಕಿದ್ದರೆ ಮಾಧ್ಯಮ ಸಂಸ್ಥೆಗಳಿಗೆ ಸಂದರ್ಶನ ನೀಡುತ್ತಿದ್ದರು. ಆದರೆ ಅವರು ಅವುಗಳಿಂದ ದೂರವಿದ್ದಾರೆ ಎಂದು ವಾದಿಸಿದರು. ಹೆಸರನ್ನು ಬಳಸುವುದು ನೈತಿಕತೆಗೆ ವಿರುದ್ಧವಾಗಿದೆ ಎಂದು ಅರ್ಜಿದಾರರ ವಾದಕ್ಕೆ ನ್ಯಾ. ಕೌಲ್, ನಾವು ರಾಜಕೀಯದಲ್ಲಿ ನೈತಿಕತೆಯನ್ನು ನಿರ್ಧರಿಸಲು ಹೋಗುವುದಿಲ್ಲ ಎಂದು ಉತ್ತರಿಸಿ ಭಾರತೀಯ ಚುನಾವಣಾ ಆಯೋಗದ ಮುಂದೆ ಅರ್ಜಿಗಳನ್ನು ಸಲ್ಲಿಸಿ ಎಂದು ಸೂಚಿಸಿತು. ಸುಪ್ರೀಂ ಸೂಚನೆಯ ಬೆನ್ನಲ್ಲೇ ಅರ್ಜಿದಾರರು ಅರ್ಜಿಯನ್ನು ಹಿಂದಕ್ಕೆ ಪಡೆದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT