ಸಾಂದರ್ಭಿಕ ಚಿತ್ರ 
ದೇಶ

ಹರ್ಯಾಣ ಗಲಭೆ ಕುರಿತು ಪ್ರಚೋದನಕಾರಿ ಪೋಸ್ಟ್; ಟಿವಿ ಚಾನೆಲ್ ಎಡಿಟರ್ ಬಂಧನ

ಹರ್ಯಾಣದ ನುಹ್ ನಲ್ಲಿ ನಡೆದಿದ್ದ ಕೋಮು ಗಲಭೆ ವೇಳೆ ಪ್ರಚೋದನಕಾರಿ ಪೋಸ್ಟ್ ಮಾಡಿದ ಆರೋಪದಡಿಯಲ್ಲಿ ಟಿವಿ ಚಾನೆಲ್ ಸಂಪಾದಕನನ್ನು ಹರ್ಯಾಣ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಗುರುಗ್ರಾಮ: ಹರ್ಯಾಣದ ನುಹ್ ನಲ್ಲಿ ನಡೆದಿದ್ದ ಕೋಮು ಗಲಭೆ ವೇಳೆ ಪ್ರಚೋದನಕಾರಿ ಪೋಸ್ಟ್ ಮಾಡಿದ ಆರೋಪದಡಿಯಲ್ಲಿ ಟಿವಿ ಚಾನೆಲ್ ಸಂಪಾದಕನನ್ನು ಹರ್ಯಾಣ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಹರ್ಯಾಣದ ಸ್ಥಳೀಯ ಸುದರ್ಶನ್ ನ್ಯೂಸ್ ಸಂಪಾದಕ ಹಾಗೂ ಟಿವಿ ಚಾನೆಲ್‌ನ ವ್ಯವಸ್ಥಾಪಕ ಸಂಪಾದಕ ಮುಖೇಶ್ ಕುಮಾರ್ ಎಂಬುವವರನ್ನು ಗುರುಗ್ರಾಮ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹರ್ಯಾಣದ ನುಹ್ ಮತ್ತು ಅದರ ಪಕ್ಕದ ಜಿಲ್ಲೆಗಳಲ್ಲಿ ನಡೆದ ಕೋಮು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮದಲ್ಲಿ ಆಪಾದಿತ ವ್ಯಕ್ತಿ ಪ್ರಚೋದನಕಾರಿ ಪೋಸ್ಟ್‌ಗಳನ್ನು ಮಾಡಿದ ಹಿನ್ನಲೆಯಲ್ಲಿ ಗುರುಗ್ರಾಮ್ ಸೈಬರ್ ಠಾಣೆ ಪೂರ್ವ ಪೊಲೀಸರು ಮುಖೇಶ್ ಕುಮಾರ್ ಅವರನ್ನು ಬಂಧಿಸಿದ್ದಾರೆ.

ಜುಲೈ 31 ರಂದು ವಿಶ್ವ ಹಿಂದೂ ಪರಿಷತ್ತ್ ಮೆರವಣಿಗೆಯ ಮೇಲೆ ದಾಳಿ ಮಾಡಿದ ನಂತರ ನುಹ್‌ನಲ್ಲಿ ಭುಗಿಲೆದ್ದ ಕೋಮು ಹಿಂಸಾಚಾರದಲ್ಲಿ ಆರು ಜನರು ಸಾವನ್ನಪ್ಪಿದ್ದರು. ಈ ಪ್ರಕರಣದಲ್ಲಿ ಪೊಲೀಸರು ಈ ವರೆಗೂ 150ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದು, 100ಕ್ಕೂ ಅಧಿಕ ಎಫ್ಐಆರ್ ಗಳನ್ನು ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT