ಸಾಂದರ್ಭಿಕ ಚಿತ್ರ 
ದೇಶ

ಭಾರತೀಯ ನ್ಯಾಯ ಸಂಹಿತೆ ಮಸೂದೆ: ಸುಳ್ಳು ಸುದ್ದಿ ಹರಡುವವರಿಗೆ 3 ವರ್ಷ ಜೈಲು ಶಿಕ್ಷೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಲೋಕಸಭೆಯಲ್ಲಿ ಭಾರತೀಯ ನ್ಯಾಯ ಸಂಹಿತೆ ಮಸೂದೆ 2023 ಅನ್ನು ಮಂಡಿಸಿದ್ದು, ಸುಳ್ಳು ಸುದ್ದಿ ಹರಡುವವರಿಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತಿದೆ.

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಲೋಕಸಭೆಯಲ್ಲಿ ಭಾರತೀಯ ನ್ಯಾಯ ಸಂಹಿತೆ ಮಸೂದೆ 2023 ಅನ್ನು ಮಂಡಿಸಿದ್ದು, ಸುಳ್ಳು ಸುದ್ದಿ ಹರಡುವವರಿಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತಿದೆ.

ಪ್ರಸ್ತಾವಿತ ಮಸೂದೆಯನ್ನು ಪರಿಶೀಲನೆಗಾಗಿ ಸ್ಥಾಯಿ ಸಮಿತಿಗೆ ಕಳುಹಿಸಲಾಗಿದೆ. ಭಾರತದ ಸಾರ್ವಭೌಮತ್ವ ಮತ್ತು ಭದ್ರತೆಗೆ ಧಕ್ಕೆ ತರುವಂತಹ 'ನಕಲಿ ಸುದ್ದಿ ಅಥವಾ ತಪ್ಪು ಮಾಹಿತಿಗಳನ್ನು' ಹರಡುವವರಿಗೆ ಸೆಕ್ಷನ್ 195 ರ ಅಡಿಯಲ್ಲಿ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶ ನೀಡಲಾಗಿದೆ.

ಸೆಕ್ಷನ್ 195(1) ಡಿ ಪ್ರಕಾರ, "ಭಾರತದ ಸಾರ್ವಭೌಮತೆ ಏಕತೆ ಮತ್ತು ಸಮಗ್ರತೆ ಅಥವಾ ಭದ್ರತೆಗೆ ಧಕ್ಕೆ ತರುವಂತಹ ಸುಳ್ಳು ಅಥವಾ ತಪ್ಪುದಾರಿಗೆಳೆಯುವ ಮಾಹಿತಿಯನ್ನು ಸಿದ್ಧಪಡಿಸಿದರೆ ಅಥವಾ ಪ್ರಕಟಿಸಿದರೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ದಂಡ ಅಥವಾ ಎರಡನ್ನೂ ವಿಧಿಸಲಾಗುತ್ತದೆ" ಎಂದು ಪ್ರಸ್ತಾವಿತ ಕಾನೂನು ಹೇಳುತ್ತದೆ.

ಹೊಸ ಮಸೂದೆಯು ಮಹಿಳೆಯರು ಮತ್ತು ಮಕ್ಕಳ ವಿರುದ್ಧದ ಅಪರಾಧಗಳು, ಕೊಲೆಗಳು ಮತ್ತು ದೇಶವಿರೋಧಿ ಅಪರಾಧಗಳ ಕಾನೂನುಗಳಿಗೆ ಆದ್ಯತೆ ನೀಡುತ್ತದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಿನ್ನೆ ಲೋಕಸಭೆಯಲ್ಲಿ ಮೂರು ಮಸೂದೆಗಳನ್ನು ಮಂಡಿಸಿದ್ದು, ಇದು ನ್ಯಾಯವನ್ನು ನೀಡುವ ಮತ್ತು ಸಂವಿಧಾನದ ಪ್ರಕಾರ ಭಾರತೀಯ ನಾಗರಿಕರಿಗೆ ನೀಡಿದ ಹಕ್ಕುಗಳನ್ನು ರಕ್ಷಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT