ಸಿಎಂ ಅಶೋಕ್ ಗೆಹ್ಲೋಟ್ 
ದೇಶ

ಪ್ರಧಾನಿ ಮೋದಿ ಶೀಘ್ರದಲ್ಲೇ 'ಬಂಡಾಯ' ಎದುರಿಸಬೇಕಾಗುತ್ತದೆ- ಸಿಎಂ ಅಶೋಕ್ ಗೆಹ್ಲೋಟ್

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮದೇ ಪಕ್ಷದೊಳಗೆ ಗೌರವವನ್ನು ಕಳೆದುಕೊಳ್ಳುತ್ತಿದ್ದು, ಶೀಘ್ರದಲ್ಲೇ 'ಬಂಡಾಯ' ಎದುರಿಸಬೇಕಾಗುತ್ತದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಶನಿವಾರ ಹೇಳಿದ್ದಾರೆ.

ಜೈಪುರ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮದೇ ಪಕ್ಷದೊಳಗೆ ಗೌರವವನ್ನು ಕಳೆದುಕೊಳ್ಳುತ್ತಿದ್ದು, ಶೀಘ್ರದಲ್ಲೇ 'ಬಂಡಾಯ' ಎದುರಿಸಬೇಕಾಗುತ್ತದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಶನಿವಾರ ಹೇಳಿದ್ದಾರೆ. ಮೋದಿಯವರ ನಡೆಯಿಂದ ಪಕ್ಷ ಅವರ ವಿರುದ್ಧ ತಿರುಗಿ ಬೀಳುವುದರಿಂದ ಸಾಮಾನ್ಯ ಜನರಲ್ಲಿ ಅವರ ಗೌರವವು ಕ್ಷೀಣಿಸುತ್ತಿದೆ ಎಂದಿದ್ದಾರೆ. 

 ಸುದ್ದಿಗೋಷ್ಠಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಗೆಹ್ಲೋಟ್, ದೇಶವನ್ನು ಕಾಂಗ್ರೆಸ್ ಮುಕ್ತ ಮಾಡುವುದು ಎಂದಿಗೂ ಆಗುವುದಿಲ್ಲ,"ಕಾಂಗ್ರೆಸ್ ದೇಶದ ಪ್ರತಿಯೊಂದು ಮನೆಯಲ್ಲೂ ಇದೆ, ಆದರೆ ಅವರ ಪಕ್ಷದ (ಬಿಜೆಪಿ) ಸ್ಥಿತಿ ಹದಗೆಡುತ್ತಿದೆ. ಬಿಜೆಪಿಯಲ್ಲಿ ಒಡಕಿದೆ. ಮೋದಿಜಿಗೆ  ಅವರ ಪಕ್ಷದೊಳಗೆ ಗೌರವ ಕಡಿಮೆಯಾಗುತ್ತಿದೆ, ಇದು ಸ್ವತಃ ಮೋದಿಯವರಿಗೆ ಆತಂಕದ ವಿಷಯವಾಗಿದೆ, ಅವರು ಸಾರ್ವಜನಿಕರಲ್ಲಿ ಮೊದಲು ಹೊಂದಿದ್ದ ಗೌರವವೂ ಕಡಿಮೆಯಾಗಿದೆ ಎಂದರು.

ಕಾಂಗ್ರೆಸ್‌ನ ಆಂತರಿಕ ವಿಷಯಗಳ ಬಗ್ಗೆ ಬಿಜೆಪಿಯವರು ಅನಗತ್ಯವಾಗಿ ಹೇಳಿಕೆ ನೀಡುತ್ತಿದ್ದಾರೆ. "ಮೊದಲು ಅವರ ಪಕ್ಷದ ಸಭೆಗಳಲ್ಲಿ ಏನಾಗುತ್ತಿತ್ತು ಮತ್ತು ಈಗ ಏನಾಗುತ್ತದೆ ಎಂದು ಬಿಜೆಪಿ ನಾಯಕರನ್ನೇ ಕೇಳಿ ಎಂದ ಅವರು,  ಪ್ರಧಾನಿ ಮೋದಿ ಅವರ ನಡೆ ವಿರುದ್ಧ ಪಕ್ಷ ತಿರುಗಿಬೀಳುತ್ತಿದ್ದು, ಶೀಘ್ರವೇ ಬಂಡಾಯ ಏಳಬಹುದು ಎಂದರು. 

ಮಣಿಪುರದ ಹಿಂಸಾಚಾರ ಪೀಡಿತ ರಾಜ್ಯದ ಪರಿಸ್ಥಿತಿಯ ಬಗ್ಗೆ ಮೋದಿ ಚಿಂತಿಸುತ್ತಿಲ್ಲ. ಸಂಸತ್ತಿನಲ್ಲಿ ತಮ್ಮ ಎರಡು ಗಂಟೆಗಳಿಗೂ ಹೆಚ್ಚು ಭಾಷಣದಲ್ಲಿ ಈ ವಿಷಯದ ಬಗ್ಗೆ ಕೇವಲ ಎರಡು ನಿಮಿಷಗಳ ಕಾಲ ಮಾತನಾಡಿದರು."ದೇಶದ ಜನರು ದಡ್ಡರಲ್ಲ, ದೇಶದ ಜನರು ತುಂಬಾ ಬಲವಾದ ಸಾಮಾನ್ಯ ಜ್ಞಾನವನ್ನು ಹೊಂದಿದ್ದಾರೆ. ಅವರು ಎಲ್ಲವನ್ನೂ ಗಮನಿಸುತ್ತಿದ್ದು, ಎಂದಿಗೂ ಕ್ಷಮಿಸಲ್ಲ ಎಂದು ಗೆಹ್ಲೋಟ್ ಹೇಳಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

SCROLL FOR NEXT