ಶಂಕರ್ ಮಹಾದೇವನ್ - ಸುಧಾ ಮೂರ್ತಿ 
ದೇಶ

ಎನ್‌ಸಿಇಆರ್‌ಟಿ ಪಠ್ಯಪುಸ್ತಕ ಸಮಿತಿಗೆ ಸುಧಾ ಮೂರ್ತಿ, ಶಂಕರ್ ಮಹಾದೇವನ್ ನೇಮಕ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ(ಎನ್‌ಸಿಇಆರ್‌ಟಿ) ಪಠ್ಯಪುಸ್ತಕ ಪರಿಷ್ಕರಣೆ ಸಂಬಂಧ ರಚಿಸಿರುವ ನೂತನ ಸಮಿತಿಗೆ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ, ಸಂಗೀತ ನಿರ್ದೇಶಕ ಶಂಕರ್ ಮಹಾದೇವನ್...

ನವದೆಹಲಿ: ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ(ಎನ್‌ಸಿಇಆರ್‌ಟಿ) ಪಠ್ಯಪುಸ್ತಕ ಪರಿಷ್ಕರಣೆ ಸಂಬಂಧ ರಚಿಸಿರುವ ನೂತನ ಸಮಿತಿಗೆ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ, ಸಂಗೀತ ನಿರ್ದೇಶಕ ಶಂಕರ್ ಮಹಾದೇವನ್ ಅವರು ಸೇರಿದಂತೆ 19 ಸದಸ್ಯರನ್ನು ನೇಮಕ ಮಾಡಲಾಗಿದೆ.

ಅರ್ಥಶಾಸ್ತ್ರಜ್ಞ ಸಂಜೀವ್ ಸನ್ಯಾಲ್ ಮತ್ತು ಇತರ 16 ಮಂದಿ, ಎನ್‌ಸಿಇಆರ್‌ಟಿ ಹೊಸ ಪಠ್ಯಕ್ರಮದ ಪ್ರಕಾರ ಪಠ್ಯಪುಸ್ತಕಗಳನ್ನು ಪರಿಷ್ಕರಿಸಲು ರಚಿಸಿರುವ ಹೊಸ ಸಮಿತಿಯ ಭಾಗವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ಶೈಕ್ಷಣಿಕ ಯೋಜನೆ ಮತ್ತು ಆಡಳಿತ ಸಂಸ್ಥೆ(NIEPA) ಕುಲಪತಿ ಎಂಸಿ ಪಂತ್ ನೇತೃತ್ವದಲ್ಲಿ 19 ಸದಸ್ಯರ ರಾಷ್ಟ್ರೀಯ ಪಠ್ಯಕ್ರಮ ಮತ್ತು ಬೋಧನಾ ಕಲಿಕಾ ಸಾಮಗ್ರಿ ಸಮಿತಿ(NSTC) ರಚಿಸಲಾಗಿದೆ. ಈ ಸಮಿತಿ 3 ರಿಂದ 12 ನೇ ತರಗತಿಗಳಿಗೆ ಪಠ್ಯಪುಸ್ತಕಗಳನ್ನು ಅಂತಿಮಗೊಳಿಸಲಿದೆ.

ಪಠ್ಯಪುಸ್ತಕಗಳು ಮತ್ತು ಇತರ ಬೋಧನಾ ಕಲಿಕಾ ಸಾಮಗ್ರಿಗಳ ಬಗ್ಗೆ ಈ ಸಮಿತಿ ತೀರ್ಮಾನ ಕೈಗೊಳ್ಳಲಿದ್ದು, ಇವುಗಳನ್ನು ಎನ್‌ಸಿಇಆರ್‌ಟಿ ನಿಯಮಗಳ ಪ್ರಕಾರ ಪ್ರಕಟಿಸಿ ಬಳಸಲಾಗುತ್ತದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT