ಬೆಂಗಳೂರು: ತಮಿಳುನಾಡು ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೊಳಿ ಅವರು ಕೃಷ್ಣಗಿರಿ ಜಿಲ್ಲೆಗೆ ಶನಿವಾರ ಭೇಟಿ ನೀಡಿದ್ದ ವೇಳೆ ಹಠಾತ್ ಎದೆನೋವು ಕಾಣಿಸಿಕೊಂಡಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊರೊನರಿ ಆಂಜಿಯೋಗ್ರಾಮ್ ಚಿಕಿತ್ಸೆ ನೀಡಲಾಗಿದೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.
ಬೆಂಗಳೂರಿಗೆ ಸಮೀಪದ ಕೃಷ್ಣಗಿರಿಗೆ ತೆರಳುತ್ತಿದ್ದ ಸಚಿವರಿಗೆ ಇದ್ದಕ್ಕಿದ್ದಂತೆ ತೀವ್ರ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಬೊಮ್ಮಸಂದ್ರದ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನು ಓದಿ: ಅಕ್ರಮ ಹಣ ವರ್ಗಾವಣೆ ಪ್ರಕರಣ: ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಬಿಡುಗಡೆ ಸುಪ್ರೀಂಕೋರ್ಟ್ ನಕಾರ, 5 ದಿನಗಳ ಕಾಲ ಇ ಡಿ ವಶಕ್ಕೆ
ಈ ಕುರಿತು ಹೇಳಿಕೆ ನೀಡಿರುವ ನಾರಾಯಣ ಹೃದಯಾಲಯ, ''ತಮಿಳುನಾಡು ಶಿಕ್ಷಣ ಸಚಿವರು ನಾರಾಯಣ ಹೆಲ್ತ್ ಸಿಟಿಗೆ ನಿಯಮಿತ ತಪಾಸಣೆಗಾಗಿ ಬಂದಿದ್ದು, ಅವರು ಕೊರೊನರಿ ಆಂಜಿಯೋಗ್ರಾಮ್ ಮಾಡಿಸಿಕೊಳ್ಳಲು ಯೋಜಿಸಿದ್ದಾರೆ ಎಂದು ಹೇಳಿದೆ.