ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಪ್ರದೇಶ: ವಿಶ್ವ ಹಿಂದೂ ಪರಿಷತ್ ಮುಖಂಡನ ಮೇಲೆ ಗುಂಡಿನ ದಾಳಿ!

ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲೆಯ ಗಗಲ್ಹೇರಿ ಪ್ರದೇಶದಲ್ಲಿ ಅಪರಿಚಿತ ದುಷ್ಕರ್ಮಿಗಳು ವಿಎಚ್‌ಪಿ ಪದಾಧಿಕಾರಿಯೊಬ್ಬರ ಮೇಲೆ ಗುಂಡು ಹಾರಿಸಿದ್ದು, ಅವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಸಹರಾನ್‌ಪುರ: ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲೆಯ ಗಗಲ್ಹೇರಿ ಪ್ರದೇಶದಲ್ಲಿ ಅಪರಿಚಿತ ದುಷ್ಕರ್ಮಿಗಳು ವಿಎಚ್‌ಪಿ ಪದಾಧಿಕಾರಿಯೊಬ್ಬರ ಮೇಲೆ ಗುಂಡು ಹಾರಿಸಿದ್ದು, ಅವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ವಿಶ್ವ ಹಿಂದೂ ಪರಿಷತ್‌ನ (ವಿಎಚ್‌ಪಿ) ನಗರ ಘಟಕದ ಸಹ ಕಾರ್ಯದರ್ಶಿ ಅಭಿಷೇಕ್ ಪಂಡಿತ್ (28) ಶುಕ್ರವಾರ ತಡರಾತ್ರಿ ತನ್ನ ಮನೆಯ ಹೊರಗೆ ನಡೆದುಕೊಂಡು ಹೋಗುತ್ತಿದ್ದಾಗ ಗುಂಡು ಹಾರಿಸಲಾಗಿದೆ.

ಶುಕ್ರವಾರ ರಾತ್ರಿ 10.45ರ ಸುಮಾರಿಗೆ ಪಂಡಿತ್ ಅವರು ಶತ್ರುಘ್ನ ಕಾಲೋನಿಯಲ್ಲಿರುವ ತನ್ನ ಮನೆಯ ಹೊರಗೆ ನಡೆದುಕೊಂಡು ಹೋಗುತ್ತಿದ್ದಾಗ ಗುಂಡು ಹಾರಿಸಲಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ವಿಪಿನ್ ತಾಡಾ ತಿಳಿಸಿದ್ದಾರೆ.

ಬಲಗೈಗೆ ಗುಂಡು ತಗುಲಿದ್ದು, ಪಂಡಿತ್ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅವರು ಹೇಳಿದರು.

ಈ ಸಂಬಂಧ ಪಂಡಿತ್ ಅವರಿಂದ ದೂರು ಸ್ವೀಕರಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಈ ಹಿಂದೆಯೂ ಪಂಡಿತ್ ಮೇಲೆ ಹಲ್ಲೆ ನಡೆದಿತ್ತು. ಅವರು ಸ್ಥಳೀಯರೊಂದಿಗೆ ವಿವಾದ ನಡೆದಿತ್ತು ಮತ್ತು ಆ ಆಯಾಮದಿಂದಲೂ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.

ಭದ್ರತಾ ಕ್ರಮವಾಗಿ ಆಸ್ಪತ್ರೆಯ ಹೊರಗೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT